65ನೇ ಅಮೆಜಾನ್ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭ; ಖುರಾನಾ,ಅಲಿಯಾ, ತಾಪ್ಸಿಗೆ ಪ್ರಶಸ್ತಿ ಕಿರೀಟ


Team Udayavani, Feb 17, 2020, 6:29 PM IST

Film-Fare-Award

ಅಸ್ಸಾಂ: 65ನೇ ಅಮೆಜಾನ್ ಫಿಲ್ಮ್ ಫೇರ್ ಪ್ರಶಸ್ತಿ 2020 ಗುವಾಹಟಿಯ ಇಂದಿರಾಗಾಂಧಿ ಅಥ್ಲೇಟಿಕ್ ಸ್ಟೇಡಿಯಂನಲ್ಲಿ ನಡೆಯಿತು. ಬಾಲಿವುಡ್ ನ ಅಲಿಯಾ ಭಟ್, ವರುಣ್ ಧವನ್, ತಾಪ್ಸಿ ಪನ್ನು, ಮಾಧುರಿ ದೀಕ್ಷಿತ್ ಮುಂತಾದವರು ರೆಡ್ ಕಾರ್ಪೆಟ್ನ ಮೇಲೆ ತಮ್ಮ ಮೋಡಿ ಮಾಡಿದರು.

ಪ್ರೇಕ್ಷಕರು ತಮ್ಮ ನೆಚ್ಚಿನ ಬಾಲಿವುಡ್ ಸ್ಟಾರ್ ಗಳ  ಅದ್ಭುತ ಪ್ರದರ್ಶನ ಕಣ್ತುಂಬಿಸಿಕೊಂಡರು. ಇನ್ನು ಎಲ್ಲಾ ಶೋಮೆನ್ ಗಳಿಗೆ ವಿಶೇಷ ಗೌರವ ಸಲ್ಲಿಸಲು ಆಯುಷ್ಮಾನ್ ಖುರಾನಾ ಅವರು ರೆಟ್ರೋ ಮತ್ತು ಬಾಲಿವುಡ್ ನ ಇತ್ತೀಚಿನ ಬೀಟ್ ಗಳಾದ ಜೀನಾ ಯಹಾ, ಏ ದಿಲ್ ನಾ ಹೋತಾ ಬೆಚಾರಾ, ಯಾಹೋ ಯಾಹೋ ಬಾಬು ಮೋಶೈ ಮುಂತಾದವುಗಳ ಪ್ರದರ್ಶನ ನೀಡಿದರು.

ಇನ್ನು ಮಾಧುರಿ ದೀಕ್ಷಿತ್ ನಮ್ಮ ದೇಶದ ಸುವರ್ಣ ಕಂಠಗಳ ಹಾಡುಗಳಾದ ಪ್ಯಾರ್ ಕಿಯಾ ತೋ ಡರ್ ನಾ ಕ್ಯಾ (ಲತಾ ಮಂಗೇಶ್ಕರ್), ಇನ್ ಅಂಖೋ(ಆಶಾ ಬೋಸ್ಲೆ), ಚೋಲಿ ಕೆ ಪಿಚೆ ಕ್ಯಾ ಹೇ (ಅಲ್ಕಾ ಯಾಗ್ನಿಕ್) ಇತರೆ ಹಾಡುಗಳ ಮೇಲೆ ಪ್ರದರ್ಶನ ನೀಡಿ ಪ್ರೇಕ್ಷಕರನ್ನು ರಂಜಿಸಿದರು.

ಕಾವಾನ್ ಕಾವಾನ್, ಮಾ ತುಜೆ ಸಲಾಂ, ವಂದೇ ಮಾತರಂ ಮತ್ತು ಸುನೋ ಗೌರ್ ಸೆ ದುನಿಯಾ ವಾಲೊ ಮುಂತಾದ ಹಾಡುಗಳಲ್ಲಿ ವರುಣ್ ಧವನ್ ಅವರು ತಮ್ಮ ಆ್ಯಕ್ಷನ್ –ಪ್ಯಾಕ್ ಪ್ರದರ್ಶನ ನೀಡಿದರು.

ಇತ್ತೀಚಿನ ಹಾರ್ಟ್ ಥ್ರೋಬ್ ಕಾರ್ತಿಕ್ ಆರ್ಯನ್ ಫಿಲ್ಮ್ ಫೇರ್ ವೇದಿಕೆಯಲ್ಲಿ ಒನ್ ಟು ಕಾ ಫೋರ್, ಕಾಲಿ ಕಾಲಿ ಆಂಖೈನ್, ಚೈಯ್ಯ ಚೈಯ್ಯ, ಓ ಓಹೋ ಜಾನೇ ಜಾನಾ, ಹಾನ್ ಮೈನ್ ಗಲತ್, ಆಹೋ ಆಹೋ ಹಾಡುಗಳ ಅದ್ಭುತ ಪ್ರದರ್ಶನ ನೀಡಿ ಪ್ರೇಕ್ಷಕರನ್ನು ಮೋಡಿ ಮಾಡಿದರು.

ಫಿಲ್ಮ್ ಫೇರ್ ಆರ್.ಡಿ ಬರ್ಮನ್ ಪ್ರಶಸ್ತಿ ಆವೃತ್ತಿಯೊಂದಿಗೆ 25 ವರ್ಷಗಳನ್ನು ಪೂರೈಸಿದೆ. ಮತ್ತು ಈ ಸಂದರ್ಭದಲ್ಲಿ ಆ ದೇಖೆ ಝಾರ, ಚಾಂದ ಮೇರಾ ದಿ, ಮೆಹಬೂಬಾ ಮೆಹಬೂಬ, ದುನಿಯಾ ಮೇ ಲೋಗೋ ಕೋ ಹಾಗೂ ಯಮ್ಮ ಯಮ್ಮ ಕ್ಲಾಸಿಕ್ ಹಾಡುಗಳ ಮೂಲಕ ಪ್ರೇಕ್ಷಕರನ್ನು ಕೂಡ ಕುಣಿಯುವಂತೆ ಮಾಡಿದರು ಅಧ್ಬುತ ಮನರಂಜನೆಗಾರ ರಣವೀರ್ ಸಿಂಗ್ .

ಇನ್ನು ಬಹುಮುಖ ಪ್ರತಿಭೆ ವಿಕ್ಕಿ ಕೌಶಲ್ 65ನೇ ಫಿಲ್ಮ್ ಫೇರ್ ಪ್ರಶಸ್ತಿ ಸಂದರ್ಭದಲ್ಲಿ ಪಾಪಾ ಕೇಹ್ತೆ ಹೈ ಬಡಾ ನಾಮ್ ಕರೇಗಾ, ರುಕ್ ಜಾ ಓ ದಿಲ್ ದಿವಾನೆ, ಕೋಹಿ ಮಿಲ್ ಗಯಾ, ಸೆನೋರಿಟಾ ಮತ್ತು ಮಲ್ಹಾರಿ ಮುಂತಾದ ಹಾಡುಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

ಇನ್ನು ಕಾರ್ಯಕ್ರಮದ ಮುಕ್ತಾಯದ ಸಮಯದಲ್ಲಿ ಅಕ್ಷಯ್ ಕುಮಾರ್ ಅವರು ತೇರಿ ಮಿಟ್ಟಿ ಶೈತಾನ್ ಕಾ ಸಾಲಾ, ಲಾಲ ಗಾಗ್ರಾ ಮತ್ತು ಸೌದಾ ಖರಾ ಖರಾ ಮುಂತಾದ ಹಾಡುಗಳಿಗೆ ಅದ್ಭುತವಾದ ಪ್ರದರ್ಶನ ನೀಡಿದರು. ಗ್ಲ್ಯಾಮರ್ ನ ರಾಜಾ ಕರಣ್ ಜೋಹರ್ ಮತ್ತು ವಿಕ್ಕಿ ಕೌಶಲ್ ಅವರು ತಮ್ಮ ಅಧ್ಬುತವಾದ ನಿರೂಪಣೆಯಲ್ಲಿ ಪ್ರೇಕ್ಷಕರನ್ನು ಸೆಳೆದಿದ್ದರು. ಸಾಂಪ್ರದಾಯಿಕ ಅಸ್ಸಾಮೀಸ್ ಜಾನಪದ ನೃತ್ಯದ ವಿಶೇಷ ಪ್ರದರ್ಶನವು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು.

ಗಲ್ಲಿ ಬಾಯ್ ಚಿತ್ರಕ್ಕಾಗಿ ಜೋಯಾ ಅಖ್ತರ್  ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು. ಅಲ್ಲದೇ ಈ ಸಿನಿಮಾ ಬರೋಬ್ಬರಿ 13 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಯುಷ್ಮಾನ್ ಖುರಾನಾ ಮತ್ತು ಭೂಮಿ ಪಡ್ನೇಕರ್, ತಾಪ್ಸಿ ಪನ್ನು ಅವರು ವಿಮರ್ಶಕರ ಅತ್ಯುತ್ತಮ ನಟ ಪ್ರಶಸ್ತಿ (ಪುರುಷ) ಮತ್ತು ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

65ನೇ ಅಮೆಜಾನ್ ಫಿಲ್ಮ್ ಫೇರ್ ಪ್ರಶಸ್ತಿಗಳ  ಅದ್ಧೂರಿ ಸಮಾರಂಭವು ಕಾರ್ಯಕ್ರಮ ಫೆಬ್ರವರಿ 22ರಂದು ಸಂಜೆ 7.30ಕ್ಕೆ ಕಲರ್ಸ್ ಸಿನಿಫ್ಲೆಕ್ಸ್ ನಲ್ಲಿ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.