67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಇಲ್ಲಿದೆ ನೋಡಿ
Team Udayavani, Mar 22, 2021, 7:04 PM IST
ನವದೆಹಲಿ: ಇಂದು 2019ರ ಸಾಲಿನ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಕನ್ನಡದ ಅಕ್ಷಿ ಹಾಗೂ ಅವನೇ ಶ್ರೀಮನ್ನಾರಾಯಣ ಚಿತ್ರಗಳು ಪ್ರಶಸ್ತಿ ಬಾಚಿಕೊಂಡಿವೆ. ಬಾಲಿವುಟ್ ನಟ ಮನೋಜ್ ಬಾಜಪೇಯ್ ಹಾಗೂ ತಮಿಳು ನಟ ಧನುಷ್ ಅವರಿಗೆ ಜಂಟಿಯಾಗಿ ಅತ್ಯುತ್ತಮ ನಟ ಪ್ರಶಸ್ತಿ ಒಲಿದಿದೆ. ನೇರ ನುಡಿಗಳಿಂದ ಖ್ಯಾತಿ ಪಡೆದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅತ್ಯುತ್ತಮ ನಟಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
67ನೇ ರಾಷ್ಟ್ರೀಯ ಪ್ರಶಸ್ತಿಯ ಪಟ್ಟಿ :
ಅತ್ಯುತ್ತಮ ಚಿತ್ರ : ಮರಕ್ಕರ್ ( ಮಲಯಾಳಂ)
ಅತ್ಯುತ್ತಮ ನಟ: ಅಸುರನ್ ಸಿನಿಮಾಗಾಗಿ ಧನುಷ್, ಭೋನ್ಸಲೆ ಚಿತ್ರಕ್ಕಾಗಿ ಮನೋಜ್ ಬಾಜಪೇಯ್
ಅತ್ಯುತ್ತಮ ನಟಿ: ಕಂಗನಾ ರನೌತ್ (ಪಂಗಾ ಮತ್ತು ಮಣಿಕರ್ಣಿಕಾ ಸಿನಿಮಾ)
ಅತ್ಯುತ್ತಮ ಸಹಾಯಕ ನಟ: ನಟ ವಿಜಯ್ ಸೇತುಪತಿ (ಸೂಪರ್ ಡಿಲಕ್ಸ್ ಚಿತ್ರ)
ಅತ್ಯುತ್ತಮ ಸಹಾಯಕ ನಟಿ: ನಟಿ ಪಲ್ಲವಿ ಜೋಷಿ (ದಿ ತಷ್ಕೆಂಟ್ ಫೈಲ್ಸ್ )
ಅತ್ಯುತ್ತಮ ನಿರ್ದೇಶಕ: ಸಂಜಯ್ ಪುರಾನ್ ಸಿಂಗ್ ಚೌಹನ್ (ಬಹಟ್ಟರ್ ಹುರೈನ್ ಚಿತ್ರ)
ಅತ್ಯುತ್ತಮ ಕನ್ನಡ ಚಿತ್ರ : ಅಕ್ಷಿ
ಅತ್ಯುತ್ತಮ ಹಿಂದಿ ಚಿತ್ರ : ಚಿಚೋರೆ
ಅತ್ಯುತ್ತಮ ಬೆಂಗಾಲಿ ಚಿತ್ರ: ಗುಮ್ನಾಮಿ
ಅತ್ಯುತ್ತಮ ತುಳು ಚಿತ್ರ: ಪಿಂಗಾರ
ಅತ್ಯುತ್ತಮ ತೆಲುಗು ಚಿತ್ರ: ಜೆರ್ಸಿ
ಅತ್ಯುತ್ತಮ ತಮಿಳು ಚಿತ್ರ: ಅಸುರನ್
ಅತ್ಯುತ್ತಮ ಮಲಯಾಳಂ ಚಿತ್ರ: ಸಕಲ್ಲ ನೊಟ್ಟಂ
ಅತ್ಯುತ್ತಮ ಸಾಹಸ ನಿರ್ದೇಶನ : ಅವನ್ನೇ ಶ್ರೀಮನ್ನಾರಾಯಣ
ಅತ್ಯುತ್ತಮ ಸಾಹಸ ನಿರ್ದೇಶನ ತೆಲುಗು: ಮಹರ್ಷಿ
ಅತ್ಯುತ್ತಮ ನಿರ್ದೇಶಕ : ತಮಿಳಿನ ವೆಟ್ರಿಮಾರನ್ ಚಿತ್ರದ ನಿರ್ದೇಶಕ ಅಸುರನ್
ಅತ್ಯತ್ತಮ ಸಾಮಾಜಿಕ ಕಳಕಳಿ ಚಿತ್ರ: ಆನಂದಿ ಗೋಪಾಲ್
ಅತ್ಯುತ್ತಮ ಸಂಗೀತ ನಿರ್ದೇಶ: ವಿಶ್ವಾಸಂ ಚಿತ್ರಕ್ಕಾಗಿ ಡಿ ಇಮಾನ್ನಾನ್
ಅತ್ಯುತ್ತಮ ಚಿತ್ರ ಸ್ನೇಹಿ ರಾಜ್ಯ ( ಸಿಕ್ಕಿಂ)
ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ನಿರೂಪಣೆಗಾಗಿ ಸರ್ ಡೇವಿಡ್ ಅಟೆನ್ಬರೋ ಅವರ ವೈಲ್ಡ್ ಕರ್ನಾಟಕ ಚಿತ್ರ ಪ್ರಶಸ್ತಿ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ