ಸೈಫ್-ಕರೀನಾ ಮನೆಯಲ್ಲಿ ಸಂಭ್ರಮದ ಗಣೇಶ ಚತುರ್ಥಿ| ಮಣ್ಣಿನ ಗಣಪ ತಯಾರಿಸಿದ ತೈಮೂರ್
Team Udayavani, Sep 10, 2021, 5:31 PM IST
ಮುಂಬೈ : ಸ್ಯಾಂಡಲ್ವುಡ್ ಹಾಗೂ ಬಾಲಿವುಡ್ ಸೆಲೆಬ್ರಿಟಿಗಳ ಮನೆಯಲ್ಲಿ ಗಣೇಶೋತ್ಸವದ ಸಂಭ್ರಮ ಮನೆ ಮಾಡಿದೆ. ಕೆಲ ನಟ-ನಟಿಯರು ತಮ್ಮ ಮನೆಗೆ ಗಣೇಶನ ಮೂರ್ತಿಯನ್ನು ಬರಮಾಡಿಕೊಂಡು ಭಕ್ತಿಯಿಂದ ಪೂಜೆ ಮಾಡಿದ್ದಾರೆ.
ಬಿಟೌನ್ ಬೆಡಗಿ ಕರೀನಾ ಕಪೂರ್ ಹಾಗೂ ಸೈಫ್ ಅಲಿಖಾನ್ ದಂಪತಿಗಳು ಕೂಡ ತಮ್ಮ ಮನೆಯಲ್ಲಿ ಪರಿಸರ ಸ್ನೇಹಿ (ಮಣ್ಣಿನ) ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆ ಸಲ್ಲಿಸಿದ್ದಾರೆ.
ತಮ್ಮ ಮನೆಯಲ್ಲಿ ನಡೆದ ಗಣಪತಿ ಪೂಜೆಯ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಬಾಲಿವುಡ್ ಬೇಬೊ ಕರೀನಾ, ಭಕ್ತಿ ಹಾಗೂ ಪ್ರೀತಿಯಿಂದ ನನ್ನ ಕುಟುಂಬದವರ ಜೊತೆ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು ಎಂದಿದ್ದಾರೆ.
ಮತ್ತೊಂದು ವಿಶೇಷ ಸಂಗತಿಯನ್ನು ಹಂಚಿಕೊಂಡಿರುವ ಕರೀನಾ, ತಮ್ಮ ಹಿರಿಯ ಮಗ ತೈಮೂರ್ ಅಲಿಖಾನ್ ಸ್ವತಃ ಮಣ್ಣಿನಲ್ಲಿ ಗಣಪತಿ ಮೂರ್ತಿ ತಯಾರಿಸಿದ್ದಾನೆ ಎಂದಿದ್ದಾರೆ.
ಸೈಫ್ ಅಲಿಖಾನ್ ಅವರನ್ನು ಮದುವೆಯಾದ ಕರೀನಾ ಕಪೂರ್ ಎರಡು ಗಂಡು ಮಕ್ಕಳಿಗೆ ತಾಯಿಯಾಗಿದ್ದಾರೆ. ಈ ವರ್ಷದ ಫೆಬ್ರುವರಿಯಲ್ಲಿ ಅವರು ಎರಡನೇ ಮಗುವಿಗೆ ಜನ್ಮ ನೀಡಿದರು. ತಮ್ಮ ಎರಡನೇ ಪುತ್ರನಿಗೆ ಜಹಾಂಗೀರ ಎಂದು ನಾಮಕರಣ ಮಾಡಿದರು. ಆದರೆ, ತೈಮೂರ ಹಾಗು ಜಹಾಂಗೀರ ಹೆಸರುಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾದವು. ಇವುಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾವು ಇಷ್ಟಪಟ್ಟು ಈ ಹೆಸರುಗಳನ್ನು ಇಟ್ಟಿದ್ದೇವೆ. ಆದರೆ, ಕೆಲವರು ಇವುಗಳಿಗೆ ಕೋಮು ಬಣ್ಣ ಬಳಯಲು ಪ್ರಯತ್ನಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.
ಸಲ್ಮಾನ್ ಮನೆಯಲ್ಲೂ ಗಣೇಶನ ಸಂಭ್ರಮ :
ಇನ್ನು ಬಾಲಿವುಡ್ನ ಮತ್ತೋರ್ವ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಮನೆಯಲ್ಲಿಯೂ ಪ್ರತಿವರ್ಷ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಾರೆ. ಸ್ವತಃ ಸಲ್ಮಾನ್ ಖಾನ್ ಅವರೇ ಗಣೇಶನ ಮೂರ್ತಿಯನ್ನು ತೆಗೆದುಕೊಂಡು ಬರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್