ಸತ್ಯ ಹೊರಬರಲೇಬೇಕು: ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ: ಸುಪ್ರೀಂಗೆ ಕೇಂದ್ರ ಸರ್ಕಾರ

ಪಾಟ್ನಾದಲ್ಲಿ ಎಫ್ ಐಆರ್ ದಾಖಲಿಸಿರುವುದು ರಾಜಕೀಯ ಪ್ರೇರಿತವಾಗಿದೆ.

Team Udayavani, Aug 5, 2020, 4:54 PM IST

ಸತ್ಯ ಹೊರಬರಲೇಬೇಕು: ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ: ಸುಪ್ರೀಂಗೆ ಕೇಂದ್ರ ಸರ್ಕಾರ

ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಹಾರ ಸರ್ಕಾರದ ಶಿಫಾರಸ್ಸನ್ನು ಸ್ವೀಕರಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಆಗಸ್ಟ್ 05-2020) ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವಿಚಾರದಲ್ಲಿ ಬಿಹಾರ ಮತ್ತು ಮಹಾರಾಷ್ಟ್ರದ ನಡುವೆ ರಾಜಕೀಯ ಸಮರ ತಾರಕಕ್ಕೇರಿತ್ತು. ಕಳೆದ ಫೆಬ್ರುವರಿ ತಿಂಗಳಿನಲ್ಲಿಯೇ ಮಗ ಸುಶಾಂತ್ ಸಿಂಗ್ ಜೀವಕ್ಕೆ ಬೆದರಿಕೆ ಇದೆ ಎಂದು ಮುಂಬೈ ಪೊಲೀಸರಿಗೆ ತಿಳಿಸಿದ್ದರೂ ಕೂಡಾ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲವಾಗಿತ್ತು ಎಂದು ಸುಶಾಂತ್ ತಂದೆ ಕೆಕೆ ಸಿಂಗ್ ಆರೋಪಿಸಿದ ನಂತರ ಮಂಗಳವಾರ (ಆಗಸ್ಟ್ 04-2020) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು ಎಂದು ವರದಿ ತಿಳಿಸಿದೆ.

ಸುಶಾಂತ್ ಸಾವಿನ ಪ್ರಕರಣದಲ್ಲಿ ಬಿಹಾರ ಪೊಲೀಸರಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ಪಾಟ್ನಾದಲ್ಲಿ ಎಫ್ ಐಆರ್ ದಾಖಲಿಸಿರುವುದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಬಗ್ಗೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ವಿರೋಧಿಸಿತ್ತು ಎಂದು ವರದಿ ವಿವರಿಸಿದೆ.

ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂತರ ಮುಂಬೈ ಪೊಲೀಸರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

ಅಲ್ಲದ ಇಂದು (ಆಗಸ್ಟ್ 05-2020) ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ರಜಪೂತ್ ಗೆಳೆಯ ಹಾಗೂ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತ್ತು. ಸಿಂಗ್ ಪ್ರಕರಣದ ಬಗ್ಗೆ ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ ಐಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಇಬ್ಬರೂ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿ ಬಗ್ಗೆ ಬಿಹಾರ, ಮಹಾರಾಷ್ಟ್ರ, ಕೇಂದ್ರ ಸರ್ಕಾರ ಹಾಗೂ ಸುಶಾಂತ್ ತಂದೆ ಮೂರು ದಿನದೊಳಗೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.