ಮಹಾಭಾರತದಲ್ಲಿ ಶ್ರೀ ಕೃಷ್ಣನ ಪಾತ್ರವನ್ನೇ ನಿರಾಕರಿಸಿದ್ದರು ನಿತೀಶ್ ಭಾರಧ್ವಜ್ ; ಕಾರಣ?

ವಿದುರ ಅಥವಾ ಅಭಿಮನ್ಯು ಪಾತ್ರ ಬೇಕೆಂದು ಪಟ್ಟು ಹಿಡಿದಿದ್ದರಂತೆ ನಿತೀಶ್!

Team Udayavani, Apr 16, 2020, 6:43 PM IST

ಮಹಾಭಾರತದಲ್ಲಿ ಶ್ರೀ ಕೃಷ್ಣನ ಪಾತ್ರವನ್ನೇ ನಿರಾಕರಿಸಿದ್ದರು ನಿತೀಶ್ ಭಾರಧ್ವಜ್ ; ಕಾರಣ?

ಮುಂಬಯಿ: ದೇಶಾದ್ಯಂತ ಲಾಕ್ ಡೌನ್ ಪರಿಸ್ಥಿತಿ ಇರುವುದರಿಂದ ಜನರೆಲ್ಲಾ ಮನೆಯಲ್ಲೇ ಇರುವಂತ ಅನಿವಾರ್ಯ ಪರಿಸ್ಥಿತಿಯನ್ನು ಕೋವಿಡ್ 19 ವೈರಸ್ ನಿರ್ಮಾಣ ಮಾಡಿದೆ. ಮನೆಯಲ್ಲೇ ಕುಳಿತಿರುವ ಜನರನ್ನು ಮನರಂಜಿಸಲು ದೂರದರ್ಶನ ತನ್ನ ಸುವರ್ಣ ಯುಗವನ್ನು ಮತ್ತೆ ಪ್ರಾರಂಭಿಸಿದೆ. 80-90ರ ದಶಕದಲ್ಲಿ ದೇಶದೆಲ್ಲೆಡೆ ಮನೆಮಾತಾಗಿದ್ದ ಕ್ಲಾಸಿಕ್ ಧಾರಾವಾಹಿಗಳನ್ನು ಡಿಡಿ ಇದೀಗ ಮರು ಪ್ರಸಾರ ಮಾಡುತ್ತಿದೆ.

ಇದರಲ್ಲಿ ಬಿ.ಆರ್. ಛೋಪ್ರಾ ನಿರ್ಮಾಣದಲ್ಲಿ, ಬಿ.ಆರ್. ಛೋಪ್ರಾ ಹಾಗೂ ರವಿ ಛೋಪ್ರಾ ನಿರ್ದೇಶನದಲ್ಲಿ ಮೂಡಿಬಂದ ಭಾರತದ ಅತ್ಯದ್ಭುತ ಮಹಾಕಾವ್ಯ ‘ಮಹಾಭಾರತ’ವೂ ಒಂದು. ಇದರಲ್ಲಿ ಬರುವ ಒಂದೊಂದು ಪಾತ್ರಗಳೂ ಬಹಳಷ್ಟು ತೂಕದ್ದೇ ಆಗಿವೆ.

ಹೀಗೆ ಮಹಾಭಾರತದಲ್ಲಿ ಬಹಳ ತೂಕವಿರುವ ಪಾತ್ರಗಳಲ್ಲಿ ಶ್ರೀ ಕೃಷ್ಣನ ಪಾತ್ರವೂ ಒಂದಾಗಿದೆ. ಒಂದು ಹಂತದಲ್ಲಿ ಕುರುಕ್ಷೇತ್ರ ಯುದ್ಧ ನಡೆಯಲು ಪ್ರಮುಖ ಕಾರಣೀಕರ್ತನಾಗಿ ಧರ್ಮಸಂಸ್ಥಾಪನೆಯ ಜವಾಬ್ದಾರಿಯನ್ನು ಹೊತ್ತ ದೇವಮಾನವನಾಗಿ ಶ್ರೀಕೃಷ್ಣನ ಪಾತ್ರ ಮಹಾಭಾರತದಲ್ಲಿ ಪ್ರಾಮುಖ್ಯತೆಯನ್ನು ಪಡೆಯುತ್ತದೆ.

ಈ ಪೌರಾಣಿಕ ಧಾರಾವಾಹಿಯಲ್ಲಿ ಶ್ರೀಕೃಷ್ಣನ ಪಾತ್ರವನ್ನು ನಿರ್ವಹಿಸಿದ್ದು ನಟ ನಿತೀಶ್ ಭಾರಧ್ವಜ್. ಅವರ ಆ ಹಸನ್ಮುಖಿ ಮುಖಭಾವ ಮತ್ತು ತುಂಟನಗುವಿನಿಂದ ಕೂಡಿದ ನಟನೆ ಅವರನ್ನು ಈ ಧಾರಾವಾಹಿ ಮುಗಿಯುವದರೊಳಗೆ ಸ್ಟಾರ್ ಪಟ್ಟಕ್ಕೇರಿಸಿತ್ತು.

ಆದರೆ ಮಹಾಭಾರತ ಧಾರಾವಾಹಿಗೆ ನಟರ ಆಯ್ಕೆ ನಡೆಯುತ್ತಿದ್ದ ಸಂದರ್ಭದಲ್ಲಿ ನಿತೀಶ್ ಅವರನ್ನು ನಿರ್ದೇಶಕ ರವಿ ಛೋಪ್ರಾ ಅವರು ಕೃಷ್ಣನ ಪಾತ್ರಕ್ಕೇ ಆಯ್ಕೆ ಮಾಡಿದ್ದರಂತೆ. ಅದಕ್ಕೆ ಮುಖ್ಯ ಕಾರಣ ನಿತೀಶ್ ಅವರ ಆಕರ್ಷಕ ನಗು. ಒಟ್ಟು 55 ಜನರನ್ನು ಸ್ಕ್ರೀನ್ ಟೆಸ್ಟ್ ನಡೆಸಿದ ಬಳಿಕ ನಿತೀಶ್ ಗೆ ಕೃಷ್ಣನ ಪಾತ್ರ ಒಲಿದು ಬಂದಿತ್ತು.

ಆದರೆ ಈ ಧಾರಾವಾಹಿಯಲ್ಲಿ ನಿತೀಶ್ ಮಾಡಲು ಬಯಸಿದ್ದು ವಿದುರನ ಪಾತ್ರವನ್ನಂತೆ. ಆದರೆ ನಿತೀಶ್ ಅವರ ಗೆಳೆಯರೂ ಆಗಿದ್ದ ಬಿ ಆರ್ ಛೋಪ್ರಾ ಅವರು ಈ ಪಾತ್ರ ನಿತೀಶ್ ಗೆ ಹೊಂದುವುದಿಲ್ಲ ಎಂದು ಹೇಳಿದ ಬಳಿಕ ನಿತೀಶ್ ಅಭಿಮನ್ಯು ಪಾತ್ರಕ್ಕೆ ಬೇಡಿಕೆ ಇಟ್ಟಿದ್ದರಂತೆ.

ಆದರೆ ಕೊನೆಗೂ ರವಿ ಛೋಪ್ರಾ ಅವರ ಒತ್ತಾಯದ ಮೇರೆಗೆ ಕೃಷ್ಣನ ಪಾತ್ರಕ್ಕೆ ಸ್ಕ್ರೀನ್ ಟೆಸ್ಟ್ ಕೊಟ್ಟ ನಿತೀಶ್ ಗೆ ಈ ಪಾತ್ರವೇ ಸೆಟ್ ಆಗಿ ಅದರಲ್ಲಿ ಜನಪ್ರಿಯತೆ ಗಳಿಸಿದ್ದು ಮಾತ್ರ ಇದೀಗ ಇತಿಹಾಸ.

ಅಂದಹಾಗೆ ಶ್ರೀ ಕೃಷ್ಣನ ರೀತಿಯ ಬಹುತೂಕದ ಪಾತ್ರವನ್ನು ನಿಭಾಯಿಸಲು ಅನುಭವಿ ನಟನೇ ಆಗಬೇಕೆಂಬ ಕಾರಣಕ್ಕೆ ನಿತೀಶ್ ಅವರು ಈ ಪಾತ್ರವನ್ನು ಪ್ರಾರಂಭದಲ್ಲಿ ನಿರಾಕರಿಸಿದ್ದರು ಎಂಬುದನ್ನು ನಿತೀಶ್ ಇದೀಗ ನೆನಪಿಸಿಕೊಳ್ಳುತ್ತಾರೆ.

ಮಹಾಭಾರತ ಧಾರಾವಾಹಿ ನಿರ್ಮಾಣದ ಸಂದರ್ಭದಲ್ಲಿ ನಿತೀಶ್ ಅವರಿಗೆ 23 ವರ್ಷ ಪ್ರಾಯ. ಹಾಗಾಗಿ ಒಂದು ವೇಳೆ ಅವರು ವಿದುರನ ಪಾತ್ರ ನಿಭಾಯಿಸಿದರೆ ಆ ಪಾತ್ರ ಕೆಲವು ಕಂತುಗಳ ಬಳಿಕ ವೃದ್ಧನಾಗುವುದರಿಂದ ನಿತೀಶ್ ಅವರಿಗೆ ನಂತರ ಕೆಲಸ ಇಲ್ಲದಂತಾಗುತ್ತದೆ ಎಂದು ಯೋಚಿಸಿ ಅವರಿಗೆ ನಕುಲನ ಪಾತ್ರಕ್ಕೆ ಆಹ್ವಾನ ನೀಡಲಾಗಿತ್ತಂತೆ.

ಆದರೆ ನಿತೀಶ್ ಅದನ್ನು ನಿರಾಕರಿಸಿ, ಹಾಗಿದ್ದಲ್ಲಿ ತನಗೆ ಅಭಿಮನ್ಯುವಿನ ಪಾತ್ರವನ್ನು ಕೊಡುವಂತೆ ಕೇಳಿಕೊಂಡಿದ್ದರುಆದರೆ ಆ ಬಳಿಕ ಅವರಿಗೆ ಶ್ರೀ ಕೃಷ್ಣನ ಪಾತ್ರಕ್ಕೆ ಸ್ಕ್ರೀನ್ ಟೆಸ್ಟ್ ನೀಡುವಂತೆ ಸೂಚಿಸಲಾಯಿತು ಎಂಬುದನ್ನು ನಿತೀಶ್ ಅವರು ಈ ಸಂದರ್ಭದಲ್ಲಿ ಇದೀಗ ಮತ್ತೆ ನೆನಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.