ಕೋವಿಡ್-19:ಆಂಧ್ರ, ತೆಲಂಗಾಣಕ್ಕೆ ತಲಾ 50 ಲಕ್ಷ, ಪ್ರಧಾನಿ ಪರಿಹಾರ ನಿಧಿಗೆ 1 ಕೋಟಿ: ನಟ ಪವನ್
ನಟ, ರಾಜಕಾರಣಿ ಪವನ್ ಕಲ್ಯಾಣ್ ಇದೀಗ ಹೈದರಾಬಾದ್ ನ ನಿವಾಸದಲ್ಲಿ ಸ್ವಯಂ ಆಗಿ ಐಸೋಲೇಶನ್ ನಲ್ಲಿ ಇದ್ದಾರೆ.
Team Udayavani, Mar 26, 2020, 12:35 PM IST
ಹೈದರಾಬಾದ್/ತೆಲಂಗಾಣ: ಜಗತ್ತನ್ನೇ ಕೋವಿಡ್ 19 ವೈರಸ್ ಬೆಚ್ಚಿಬೀಳಿಸಿದ್ದು, ಇದೀಗ ಕೋವಿಡ್ 19 ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿರುವುದಾಗಿ ವರದಿ ತಿಳಿಸಿದೆ.
ನಟ, ರಾಜಕಾರಣಿ ಪವನ್ ಕಲ್ಯಾಣ್ ಇದೀಗ ಹೈದರಾಬಾದ್ ನ ನಿವಾಸದಲ್ಲಿ ಸ್ವಯಂ ಆಗಿ ಐಸೋಲೇಶನ್ ನಲ್ಲಿ ಇದ್ದಾರೆ. ಸರಣಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಪವನ್ ಕಲ್ಯಾಣ್, ರಾಜ್ಯ ಮತ್ತು ಕೇಂದ್ರದ ಪರಿಹಾರ ನಿಧಿಗೆ ದೇಣಿಗೆ ನೀಡಿರುವುದಾಗಿ ತಿಳಿಸಿದ್ದಾರೆ.
ಕೋವಿಡ್ 19 ತಡೆಗಟ್ಟಲು ಆಂಧ್ರಪ್ರದೇಶ ಸರ್ಕಾರ ಹಾಗೂ ತೆಲಂಗಾಣ ಸರ್ಕಾರಕ್ಕೆ ತಲಾ 50 ಲಕ್ಷ ರೂಪಾಯಿ ಸಿಎಂ ಪರಿಹಾರ ನಿಧಿಗೆ ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಎರಡು ರಾಜ್ಯ ಸರ್ಕಾರಗಳಿಗೆ ಒಟ್ಟು ಒಂದು ಕೋಟಿ ನೀಡಿದ್ದು, ಪ್ರಧಾನಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಪವನ್ ಕಲ್ಯಾಣ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ತೆಲುಗು ನಟ ನಿತಿನ್ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಕ್ಕೆ ತಲಾ ಹತ್ತು ಲಕ್ಷ ರೂಪಾಯಿ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್