ಉತ್ತರಾಖಂಡ ದುರಂತದಲ್ಲಿ ತಂದೆ ಕಳೆದುಕೊಂಡ 4 ಮಕ್ಕಳ ದತ್ತು ಪಡೆದ ನಟ ಸೋನು !
Team Udayavani, Feb 24, 2021, 5:04 PM IST
ಉತ್ತರಾಖಂಡ : ನೀರ್ಗಲ್ಲು ಸ್ಫೋಟ ದುರಂತದಲ್ಲಿ ತಂದೆಯನ್ನು ಕಳೆದುಕೊಂಡು ಅನಾಥರಾಗಿದ್ದ 4 ಹೆಣ್ಣು ಮಕ್ಕಳನ್ನು ಚಿತ್ರನಟ ಸೋನು ಸೂದ್ ದತ್ತು ಪಡೆದಿದ್ದಾರೆ.
ಫೆ.7 ರಂದು ಉತ್ತರಾಖಂಡ್ ನ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಸ್ಫೋಟ ದುರಂತದಲ್ಲಿ ಸಾಕಷ್ಟು ಜನ ಪ್ರಾಣಹಾನಿಯಾಗಿತ್ತು. ನೂರಾರು ಜನ ಕಣ್ಮರೆಯಾಗಿದ್ದರು. ಒಂದಿಷ್ಟು ಜನರ ಮೃತ ದೇಹ ಪತ್ತೆಯಾಗಿದ್ದವು.
ಪ್ರವಾಹದ ಹೊಡೆತಕ್ಕೆ ತಪೋವನದಲ್ಲಿ ನಡೆಯುತ್ತಿದ್ದ ಜಲವಿದ್ಯುತ್ ಯೋಜನೆಯ ಕಾಮಾಗಾರಿಯಲ್ಲಿ ತೊಡಗಿದ್ದ ಅಲಾಮ್ ಸಿಂಗ್ ಬಂದೀರ್ ಕೊಚ್ಚಿಕೊಂಡು ಹೋಗಿದ್ದರು. ರಕ್ಷಣಾ ಕಾರ್ಯದ ವೇಳೆ ಅವರ ಮೃತ ದೇಹ ಪತ್ತೆಯಾಗಿತ್ತು. ಮನೆಯ ಆಧಾರ ಸ್ಥಂಬ ಕುಸಿದಿದ್ದರಿಂದ ಆತನ ಕುಟುಂಬ ಅಕ್ಷರಶಃ ಬೀದಿಗೆ ಬಂದಿತ್ತು. ನಾಲ್ಕು ಹೆಣ್ಣು ಮಕ್ಕಳನ್ನು ಕಟ್ಟಿಕೊಂಡು ಮೃತನ ಪತ್ನಿ ದಿಕ್ಕುತೋಚದಂತಾಗಿದ್ದರು. ಇವರ ಕಷ್ಟಕ್ಕೆ ನೆರವಾಗುವಂತೆ ಸೋಷಿಯಲ್ ಮೀಡಿಯಾಗಳು ನಟ ಸೋನು ಸೂದ್ ಅವರಿಗೆ ಮನವಿ ಮಾಡಿದ್ದವು.
ಸಂಕಷ್ಟದಲ್ಲಿರುವ ಅಲಾಮ್ ಕುಟುಂಬಕ್ಕೆ ಸಹಾಯ ಹಸ್ತ ಚಾಚಿರುವ ಸೋನು, ಆ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮದುವೆ ಮಾಡಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಹಾಗೂ ಅವರ ಕಲ್ಯಾಣ ನನ್ನ ಕರ್ತವ್ಯ ಎಂದು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ