ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರ್ಪಡೆ
ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಊರ್ಮಿಳಾ ಮಾತೋಂಡ್ಕರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
Team Udayavani, Dec 1, 2020, 2:57 PM IST
ಮುಂಬೈ: ಕಳೆದ ವರ್ಷ ಕಾಂಗ್ರೆಸ್ ಪಕ್ಷದ ಟಿಕೆಟ್ ನಿಂದ ಲೋಕಸಭೆಗೆ ಸ್ಪರ್ಧಿಸಿದ ನಂತರ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ (ಡಿಸೆಂಬರ್ 01, 2020) ಅಧಿಕೃತವಾಗಿ ಶಿವಸೇನಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಾಂದ್ರಾದ ಮಾತೋಶ್ರೀ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಟಿ ಊರ್ಮಿಳಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ವರದಿ ತಿಳಿಸಿದೆ.
ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಊರ್ಮಿಳಾ ಮಾತೋಂಡ್ಕರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್, ಪ್ರಿಯಾಂಕಾ ಚತುರ್ವೇದಿ ಕೂಡಾ ಹಾಜರಿದ್ದರು.
ಊರ್ಮಿಳಾ ಮಾತೋಂಡ್ಕರ್ ಬಹುತೇಕ ರಾಜ್ಯಪಾಲರ ಕೋಟಾದಡಿ ವಿಧಾನಪರಿಷತ್ ಸದಸ್ಯೆಯಾಗಿ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಶಿಕ್ಷಣಕ್ಕೆ ಒತ್ತು;ಹರ್ಯಾಣ ಸರ್ಕಾರದಿಂದ 8-12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್
ಕಾಂಗ್ರೆಸ್ ಪಕ್ಷದ ಹಿರಿಯ ಸಹೋದ್ಯೋಗಿ ಸಂಜಯ್ ನಿರುಪಮ್ ವಿರುದ್ಧ ಟೀಕಿಸಿದ್ದ ಊರ್ಮಿಳಾ, ನಿರುಪಮ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಊರ್ಮಿಳಾ 2019ರ ಸೆಪ್ಟೆಂಬರ್ ನಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಊರ್ಮಿಳಾ ಮಾತೋಂಡ್ಕರ್ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಗೋಪಾಲ್ ಶೆಟ್ಟಿ ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ