ಆಮದು ಸುಂಕ ವಿನಾಯಿತಿ ವಿಚಾರ : ದಂಡ ಪಾವತಿಸಬೇಕಾಗಿದ್ದ ನಟ ವಿಜಯ್ ಗೆ ರಿಲ್ಯಾಕ್ಸ್
Team Udayavani, Jul 27, 2021, 6:55 PM IST
ಚೆನ್ನೈ : ತೆರಿಗೆ ವಿಚಾರವಾಗಿ ನ್ಯಾಯಾಲಯದಿಂದ ಬುದ್ಧಿ ಹೇಳಿಸಿಕೊಂಡಿದ್ದ ತಮಿಳು ನಟ ವಿಜಯ್ ದಳಪತಿಗೆ ಕೊಂಚ ರಿಲ್ಯಾಕ್ಸ್ ಆಗಿದೆ. ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಕ್ಕೆ ಇದೀಗ ತಡೆ ಬಿದ್ದಿದೆ.
ವಿದೇಶದಿಂದ ಐಷಾರಾಮಿ ರೋಲ್ಸ್ ರಾಯ್ಸ್ ಘೋಸ್ಟ್ ಕಾರು ಆಮದು ಮಾಡಿಕೊಂಡು ತೆರಿಗೆ ಕಟ್ಟುವುದರಲ್ಲಿ ವಿನಾಯಿತಿ ಕೇಳಿದ್ದ ನಟ ವಿಜಯ್ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು. ತೆರೆಗೆ ಕಟ್ಟಲು ಹಿಂದೇಟು ಹಾಕಿದ್ದಾರೆ. ತೆರಿಗೆ ನಿಯಮಗಳನ್ನು ಅವರು ಗಾಳಿಗೆ ತೂರಿದ್ದಾರೆ. ಇದು ದೇಶವಿರೋಧಿ ಮನಸ್ಥಿತಿ ಎಂದು ಟೀಕಿಸಿ ಒಂದು ಲಕ್ಷ ರೂ. ದಂಡವನ್ನೂ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ವಿಜಯ್ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಮದ್ರಾಸ್ ಹೈಕೋರ್ಟ್ ದ್ವಿ-ಸದಸ್ಯ ಪೀಠವು ವಿಜಯ್ ಪರವಾಗಿ ತೀರ್ಪು ನೀಡಿದ್ದು, ಒಂದು ಲಕ್ಷ ರೂ. ದಂಡಕ್ಕೆ ತಡೆ ನೀಡಿದೆ. ತೆರೆಗೆ ಕಟ್ಟುವುದಿಲ್ಲ ಎಂದು ವಿಜಯ್ ಹೇಳುತ್ತಿಲ್ಲ. ಆದರೆ ನಟರ ಸಮುದಾಯದ ಬಗ್ಗೆ ಕಟು ಟೀಕೆ ಮಾಡಿರುವುದನ್ನು ಅವರು ಪ್ರಶ್ನಿಸುತ್ತಿದ್ದಾರೆ ಎಂದು ವಿಜಯ್ ಪರ ವಕೀಲರು ವಾದ ಮಂಡಿಸಿದ್ದಾರೆ. ಒಂದು ವಾರದೊಳಗೆ ನಟ ವಿಜಯ್ ಅವರ ಐಷಾರಾಮಿ ರೋಲ್ಸ್ ರಾಯ್ಸ್ ಘೋಸ್ಟ್ ಕಾರಿಗೆ ಬಾಕಿ ಉಳಿಸಿಕೊಂಡಿರುವ ಶೇ.80ರಷ್ಟು ಎಂಟ್ರಿ ಟ್ಯಾಕ್ಸ್ ಕಟ್ಟಬೇಕು ಎಂದು ಈಗ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ