ನಟ ವಿಜಯ್ ಸೇತುಪತಿ ಆಪ್ತ ಸಹಾಯಕನ ಮೇಲೆ ಹಲ್ಲೆಗೆ ಯತ್ನ
Team Udayavani, Nov 4, 2021, 9:46 AM IST
ಬೆಂಗಳೂರು: ತಮಿಳು ನಟ ವಿಜಯ್ ಸೇತು ಪತಿ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಈ ಸಂಬಂಧ ನಟ ವಿಜಯ್ ಸೇತುಪತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಏರ್ಪೋರ್ಟ್) ಠಾಣೆಗೆ ದೂರು ನೀಡಿದ್ದು, ಬಳಿಕ ವಾಪಸ್ ಪಡೆದುಕೊಂಡಿದ್ದಾರೆ.
ವಿಜಯ್ ಸೇತುಪತಿ ಮತ್ತು ಅವರ ಆಪ್ತ ಸಹಾಯಕ ಜಾನ್ಸನ್ ಬಿಡದಿ ಬಳಿಯ ಇನೋವೇಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್ಗಾಗಿ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿ ವಿಜಯ್ ಬಳಿ ಬಂತು ಸೆಲ್ಫಿ ಪಡೆಯಲು ಆರೋಪಿ ಮಹಾಗಾಂಧಿ ಎಂಬಾತ ಮುಂದಾಗಿದ್ದಾನೆ.
ಇದನ್ನೂ ಓದಿ:- ಕಲಬುರಗಿ: ಬಸ್ ನಿಲ್ದಾಣದಲ್ಲಿ ಜನರೆದುರೇ ಪೊಲೀಸ್ ಪೇದೆ ಮಗನ ಕೊಚ್ಚಿ ಕೊಲೆ
ಆಗ ಆತ ಮದ್ಯ ಸೇವಿಸಿದ್ದ ಎಂಬುದು ಗೊತ್ತಾಗುತ್ತಿದ್ದಂತೆ ವಿಜಯ್ ನಿರಾಕರಿಸಿದ್ದಾರೆ. ಆದರೂ ಪದೇ ಪದೆ ಸೆಲ್ಫಿ ಪಡೆಯಲು ಮುಂದಾದಾಗ ಆಪ್ತ ಸಹಾಯಕ ಜಾನ್ಸನ್ ದೂರ ತಳ್ಳಿದ್ದಾನೆ. ಅದೇ ಕೋಪದಲ್ಲಿ ಆರೋಪಿ ಏರ್ಪೋರ್ಟ್ನಲ್ಲಿ ಇಳಿದು ನಡೆದುಕೊಂಡು ಹೋಗುವಾಗ ಹಿಂದಿನಿಂದ ಏಕಾಏಕಿ ಬಂದ ಆರೋಪಿ ಜಾನ್ಸನ್ ಮೇಲೆ ನೆಗೆದು ಹಲ್ಲೆಗೆ ಮುಂದಾಗಿದ್ದಾನೆ. ಆಗ ಸ್ಥಳೀಯರು ಆತನನ್ನು ಹಿಡಿದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ಘಟನೆಯಿಂದ ವಿಚಲಿತರಾದ ವಿಜಯ್ ಸೇತುಪತಿ ಏರ್ಪೋರ್ಟ್ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಬಳಿಕ ಆರೋಪಿಯಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪೊಲೀಸರು ಎಚ್ಚರಿಕೆ ನೀಡಿದ ಬಳಿಕ ಪ್ರಕರಣವನ್ನು ಹಿಂಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಬುಧವಾರ ರಾತ್ರಿ ಚೆನ್ನೈಗೆ ವಾಪಸ್ ತೆರಳಿದ ಸೇತುಪತಿಗೆ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ