ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು
Team Udayavani, Oct 19, 2021, 3:30 PM IST
ಹರಿಯಾಣ: ಜಾತಿ ನಿಂದನೆಯ ಆರೋಪದಡಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಯುವಿಕಾ ಚೌಧರಿ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಆಗಿದೆ.
ಯುವಿಕಾರನ್ನು ಬಂಧಿಸುವಂತೆ ಆಗ್ರಹಿಸಿ ರಜತ್ ಕಲ್ಸನ್ ಎಂಬುವವರು ಹರಿಯಾಣದ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ (ಎಸ್ಸಿ / ಎಸ್ಟಿ) ಪ್ರಕರಣ ದಾಖಲಿಸಿದ್ದರು. ಆದರಂತೆ ಸೋಮವಾರ ಯುವಿಕಾರನ್ನು ಪೊಲೀಸರು ಬಂಧಿಸಿದ್ದರು. ಇಂದು (ಮಂಗಳವಾರ) ಹರಿಯಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಹರಿಯಾಣ ಹೈಕೋರ್ಟ್, ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ನೀಡಿದೆ. ‘ಹೈಕೋರ್ಟ್ ನಿಯಮಗಳ ಪ್ರಕಾರ ನನ್ನ ಕಕ್ಷಿದಾರರು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ’ ಎಂದು ನಟಿ ಯುವಿಕಾ ಚೌಧರಿ ಪರ ವಕೀಲ ಅಶೋಕ್ ಬಿಷ್ಣೋಯ್ ಹೇಳಿದರು.
‘ಓಂ ಶಾಂತಿ ಓಂ’ ಮತ್ತು ‘ದಿ ಶೌಕೀನ್ಸ್’ ಸಹಿತ ವಿವಿಧ ಸಿನಿಮಾಗಳಲ್ಲಿ ನಟಿಸಿದ್ದ ಯುವಿಕಾ ಚೌಧರಿ, ವಿಡಿಯೊ ಬ್ಲಾಗ್ ಒಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಆಗಿರುವ ಈ ನಟಿ, ವಿಡಿಯೊದಲ್ಲಿ ಜಾತಿನಿಂದನೆ ಪದ ಬಳಸಿರುವುದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಟ್ವಿಟರ್ನಲ್ಲಿ ಕ್ಷಮೆ ಕೋರುವ ಮೂಲಕ ಪದದ ಅರ್ಥ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್