
Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು
Team Udayavani, Jun 6, 2023, 12:13 PM IST

ಮುಂಬಯಿ: ಈ ವರ್ಷದ ಬಹು ನಿರೀಕ್ಷಿತ, ಬಿಗ್ ಬಜೆಟ್ ಸಿನಿಮಾಗಳಲ್ಲಿ ಒಂದಾಗಿರುವ ʼಆದಿಪುರುಷ್ʼ ರಿಲೀಸ್ ಗೆ ದಿನಗಣನೆ ಬಾಕಿ ಉಳಿದಿದೆ. ಪ್ಯಾನ್ ಭಾಷೆಯಲ್ಲಿ ಸಿನಿಮಾ ಅದ್ದೂರಿಯಾಗಿ ಇದೇ ಜೂ.16 ರಂದು ರಿಲೀಸ್ ಆಗಲಿದೆ.
ಈ ಹಿಂದೆ ಸಿನಿಮಾದ ಟೀಸರ್ ನಲ್ಲಿ ವಿಎಫ್ ಎಕ್ಸ್ ಸೇರಿದಂತೆ, ಕೆಲ ಪಾತ್ರಗಳ ಸುತ್ತ ವಿವಾದ ಹುಟ್ಟಿಕೊಂಡಿತ್ತು. ಆ ಬಳಿಕ ಅದನ್ನು ಸರಿ ಮಾಡಿ, ಇತ್ತೀಚೆಗೆ ಟ್ರೇಲರ್ ರಿಲೀಸ್ ಮಾಡಿತ್ತು. ಸಿನಿಮಾದ ಟ್ರೇಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವಾಲ್ಮೀಕಿ ಬರೆದ ರಾಮಾಯಣದ ಅಂಶಗಳನ್ನು ಆಧರಿಸಿ ತೆರೆಗೆ ತರಲಾಗುತ್ತಿರುವ ಸಿನಿಮಾಕ್ಕೆ ಓಂ ರಾವುತ್ ಅವರ ನಿರ್ದೇಶನವಿದೆ.
ಸಿನಿಮಾದ ಪ್ರಚಾರದಲ್ಲಿ ಚಿತ್ರತಂಡ ನಿರತವಾಗಿದೆ. ಈ ನಡುವೆ ಅನೌನ್ಸ್ ಮೆಂಟ್ ವೊಂದನ್ನು ಮಾಡಿದೆ. ಆದಿಪುರುಷ್ ಸಿನಿಮಾ ಯಾವೆಲ್ಲ ಕಡೆ ಸ್ಕ್ರೀನಿಂಗ್ ಆಗುತ್ತದೋ ಆ ಥಿಯೇಟರ್ ನ ಒಂದು ಸೀಟನ್ನು ಹನುಮಾನ್ ದೇವರಿಗೆ ಮೀಸಲು ಇಡಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ.
ಇದನ್ನೂ ಓದಿ: Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ
ಎಲ್ಲೆಲ್ಲಿ ರಾಮಾಯಣ ಪಠಿಸುತ್ತಾರೋ ಅಲ್ಲಿ ಭಗವಾನ್ ಹನುಮಾನ್ ಕಾಣಿಸಿಕೊಳ್ಳುತ್ತಾನೆ ಎನ್ನುವುದು ನಮ್ಮ ನಂಬಿಕೆ. ಈ ನಂಬಿಕೆಯನ್ನು ಗೌರವಿಸುವ ಸಲುವಾಗಿ ʼರಾಮʼನಾಗಿ ಕಾಣಿಸಿಕೊಳ್ಳುವ ಪ್ರಭಾಸ್ ಅವರ ʼಆದಿಪುರುಷ್ʼ ಪ್ರದರ್ಶನವಗುವ ಥಿಯೇಟರ್ ನ ಒಂದು ಆಸನವನ್ನು ಹನುಮಾನ್ ದೇವರಿಗೆ ಮೀಸಲು ಇಡಲು ನಿರ್ಧರಿಸಿದ್ದೇವೆ. ಭಗವಾನ್ ಹನುಮಂತನ ಸನ್ನಿಧಿಯಲ್ಲಿ ಅತ್ಯಂತ ವೈಭವ ಮತ್ತು ವೈಭವದಿಂದ ನಿರ್ಮಿಸಲಾದ ʼಆದಿಪುರುಷ್ʼ ನನ್ನು ನಾವೆಲ್ಲರೂ ನೋಡಬೇಕು ಎಂದು ಚಿತ್ರತಂಡ ಪ್ರಕಟಣೆವೊಂದರಲ್ಲಿ ಹೇಳಿದೆ.
ಸಿನಿಮಾದಲ್ಲಿ ರಾಘವ್ ಆಗಿ ಪ್ರಭಾಸ್, ಜಾನಕಿಯಾಗಿ ಕೃತಿ ಸನೋನ್, ಶೇಷನಾಗಿ ಸನ್ನಿ ಸಿಂಗ್ ಮತ್ತು ಭಜರಂಗನಾಗಿ ದೇವದತ್ತ ನಾಗೆ ಕಾಣಿಸಿಕೊಳ್ಳಲಿದ್ದಾರೆ. ಇನ್ನು ರಾವಣನಾಗಿ ಸೈಫ್ ಆಲಿ ಖಾನ್ ಕಾಣಿಸಿಕೊಳ್ಳಲಿದ್ದಾರೆ.
Team #Adipurush to dedicate one seat in every theater for Lord Hanuman 🚩🙏🏻
Jai Shri Ram 🙏 #Adipurush in cinemas worldwide on 16th June! ✨ #AdipurushTrailer2 #AdipurushOnJune16th#AdipurushActionTrailer#AdipurushIn3D #Prabhas #SaifAliKhan #KritiSanon #SunnySingh #OmRaut pic.twitter.com/UcP7Aafks8
— Movies wallah (@Movies_Wallah) June 6, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leo 2nd Song ರಿಲೀಸ್: “Badass” ಮೂಲಕ ಹೈಪ್ ಹೆಚ್ಚಿಸಿದ ʼಲಿಯೋದಾಸ್ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್ 1 ಫ್ರೀʼ ಟಿಕೆಟ್ ಆಫರ್ ಘೋಷಿಸಿದ ಶಾರುಖ್ ಖಾನ್

Animal Teaser: ಸಿರಿವಂತನ ರಗಡ್ ಕಹಾನಿ; ಮಾಸ್ ಲುಕ್ ನಲ್ಲಿ ಮಿಂಚಿದ ʼರಾಕ್ ಸ್ಟಾರ್ʼ
MUST WATCH
ಹೊಸ ಸೇರ್ಪಡೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

Pakistani Tv Show: ಟಿವಿ ಚಾನೆಲ್ ನ ಲೈವ್ ಶೋನಲ್ಲೇ ಪಾಕ್ ಮುಖಂಡರ ಮಾರಾಮಾರಿ!

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು