Gadar 2 vs OMG 2: ಒಂದೇ ದಿನ 2 ಸಿನಿಮಾ ರಿಲೀಸ್;ಅಡ್ವಾನ್ಸ್‌ ಬುಕಿಂಗ್‌ನಲ್ಲಿ ಯಾರು ಮುಂದೆ?


Team Udayavani, Aug 3, 2023, 2:52 PM IST

tdy-12

ಮುಂಬಯಿ: ಬಾಲಿವುಡ್‌ ನಲ್ಲಿ ಬಾಕ್ಸ್‌ ಆಫೀಸ್‌ ಜಿದ್ದಾಜಿದ್ದಿ ಮತ್ತೆ ಆರಂಭವಾಗಿದೆ. ಆಗಸ್ಟ್‌ 11 ರಂದು ಎರಡು ದೊಡ್ಡ ಸಿನಿಮಾಗಳು ರಿಲೀಸ್‌ ಆಗಲಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ಯಾವ ಸಿನಿಮಾ ಸದ್ದು ಮಾಡುತ್ತದೆ ಎನ್ನುವ ಕುತೂಹಲ ಮೂಡಿದೆ.

ಒಂದು ಕಡೆ ಅಕ್ಷಯ್‌ ಕುಮಾರ್‌ ಅವರ ʼಓ ಮೈ ಗಾಡ್‌ -2ʼ, ಹಾಗೂ ಸನ್ನಿ ಡಿಯೋಲ್‌ ಅವರ ʼಗದರ್‌-2ʼ ಸಿನಿಮಾಗಳು ರಿಲೀಸ್‌ ಆಗಲಿವೆ. ಈ ಎರಡೂ ಸಿನಿಮಾದ ಮೊದಲ ಭಾಗ ಬಾಲಿವುಡ್‌ ನಲ್ಲಿ ಹಿಟ್‌ ಸಾಲಿಗೆ ಸೇರಿತು. ಇದರ ಸೀಕ್ವೆಲ್‌ ಮೇಲೆ ಬಹು ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.

ಕಳೆದ ವರ್ಷವೂ ಆಗಸ್ಟ್‌ 11 ಕ್ಕೆ ರಿಲೀಸ್‌ ಆಗಿತ್ತು ಎರಡು ಸಿನಿಮಾ:  ಕಳೆದ ವರ್ಷ ಆ.11 ರಂದು ಬಿಟೌನ್‌ ನಲ್ಲಿ ಎರಡು ದೊಡ್ಡ ಸಿನಿಮಾಗಳು ರಿಲೀಸ್‌ ಆಗಿತ್ತು.  ಇದರಲ್ಲಿ ಅಕ್ಷಯ್‌ ಕುಮಾರ್‌ ಅವರ ʼರಕ್ಷಾ ಬಂಧನ್‌ʼ ಸಿನಿಮಾವೂ ಒಂದಾಗಿತ್ತು. ಇನ್ನೊಂದು ಸಿನಿಮಾ ಆಮಿರ್‌ ಖಾನ್‌ ಅವರ ʼಲಾಲ್‌ ಸಿಂಗ್‌ ಚಡ್ಡಾʼ. ಈ ಎರಡೂ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ಹೀನಾಯವಾಗಿ ಸೋಲುಂಡಿತ್ತು.

ಹೇಗಿದೆ ಅಡ್ವಾನ್ಸ್‌ ಬುಕಿಂಗ್ ರೆಸ್ಪಾನ್ಸ್:‌ 

ಗದರ್‌ – 2:  ಸನ್ನಿ ಡಿಯೋಲ್‌ ಹಾಗೂ ಅಮೀಶಾ ಪಟೇಲ್ ಅಭಿನಯಯದ ʼಗದರ್‌ -2ʼ ಸಿನಿಮಾದ ಟ್ರೇಲರ್‌ ಈಗಾಗಲೇ ಸದ್ದು ಮಾಡಿದೆ. ತಾರಾ ಸಿಂಗ್‌ ಅವತಾರದಲ್ಲಿ ಸನ್ನಿ ಡಿಯೋಲ್‌ ಮಿಂಚಿದ್ದಾರೆ. ಸಿನಿಮಾದ ಮೊದಲ ಭಾಗಕ್ಕೆ ಸಿಕ್ಕ ಪ್ರತಿಕ್ರಿಯೆ ಎರಡನೇ ಭಾಗಕ್ಕೂ ಸಿಗುವ ನಿರೀಕ್ಷೆ ಚಿತ್ರತಂಡಕ್ಕಿದೆ. ಆ  ನಿಟ್ಟಿನಲ್ಲಿ  ಸಿನಿಮಾದ ಅಡ್ವಾನ್ಸ್‌ ಬುಕಿಂಗ್ ಆರಂಭಗೊಂಡಿದೆ.

ಆ. 3 ರ ಬೆಳಗ್ಗೆ 11 ಗಂಟೆಯವರೆಗೆ ಪಿವಿಆರ್‌ನಲ್ಲಿ 1700 ಟಿಕೆಟ್‌ಗಳು, ಐನಾಕ್ಸ್‌ನಲ್ಲಿ 1200 ಟಿಕೆಟ್‌ಗಳು ಮತ್ತು ಸಿನೆಪೊಲಿಸ್‌ನಲ್ಲಿ 5200 ಟಿಕೆಟ್‌ಗಳು ಬುಕ್‌ ಆಗಿವೆ.  ರಿಲೀಸ್‌ ನ 8 ದಿನಗಳ ಮೊದಲು ʼಗದರ್-2‌ʼ ಸಿನಿಮಾದ 8 ಸಾವಿರಕ್ಕೂ ಹೆಚ್ಚು ಟಿಕೆಟ್‌ ಗಳು ಮಾರಾಟವಾಗಿದೆ.

ಇದನ್ನೂ ಓದಿ: ʼಗಗನʼದಲ್ಲಿ ʼಗಾಳಿಪಟʼ ಹಾರಿಸಿದ ಅನಂತ್‌ ನಾಗ್‌ ಸಿನಿ ಪಯಣಕ್ಕೆ 50ರ ಸಂಭ್ರಮ: ಶುಭಕೋರಿದ ನಟರು

ʼಓ ಮೈ ಗಾಡ್-2‌ʼ: ಬಾಲಿವುಡ್‌ ನ ಮತ್ತೊಂದು ಬಹು ನಿರೀಕ್ಷಿತ ಸೀಕ್ವೆಲ್‌ ಅಕ್ಷಯ್‌ ಕುಮಾರ್‌ ಅವರ ʼಓ ಮೈ ಗಾಡ್‌ -2ʼ. ಸಿನಿಮಾದ ಟಿಕೆಟ್‌ ಬುಕಿಂಗ್‌ ಟ್ರೇಲರ್‌ ರಿಲೀಸ್‌ ಗೂ ಮುನ್ನ ಜೋರಾಗಿದೆ ( ಈಗ ಟ್ರೇಲರ್‌ ರಿಲೀಸ್‌ ಆಗಿದೆ). ಆ. 3 ರ ಬೆಳಗ್ಗೆ 11 ಗಂಟೆಯವರೆಗೆ ಪಿವಿಆರ್‌ ನಲ್ಲಿ 1100 ಟಿಕೆಟ್‌ಗಳು, ಐನಾಕ್ಸ್‌ ನಲ್ಲಿ 550 ಟಿಕೆಟ್‌ಗಳು ಮತ್ತು ಸಿನೆಪೊಲಿಸ್‌ನಲ್ಲಿ ನಲ್ಲಿ 350 ಟಿಕೆಟ್‌ಗಳು ಮುಂಗಡವಾಗಿ ಮಾರಾಟವಾಗಿದೆ. ಅಕ್ಷಯ್‌ ಕುಮಾರ್‌ ಕಳೆದ ಸಿನಿಮಾಗಳನ್ನು ಹೋಲಿಸಿದರೆ ʼಓ ಮೈ ಗಾಡ್‌ -2ʼ ಅಡ್ವಾನ್ಸ್‌ ಬುಕಿಂಗ್‌ ನಲ್ಲೇ ಸದ್ದು ಮಾಡುತ್ತಿದೆ. ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದ್ದು, ಅಡ್ವಾನ್ಸ್‌ ಬುಕಿಂಗ್‌ ನಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ.

1971 ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯದಲ್ಲಿ, ತಾರಾ ಸಿಂಗ್ ತನ್ನ ಮಗ ಚರಣಜೀತ್‌ನನ್ನು ಮನೆಗೆ ಕರೆತರಲು ಪಾಕಿಸ್ತಾನಕ್ಕೆ ಹಿಂದಿರುಗುವ ಕಥೆ ʼಗದರ್‌ -2ʼ ನಲ್ಲಿದೆ.

ಲೈಂಗಿಕ ಶಿಕ್ಷಣದ ಕುರಿತು ʼಓ ಮೈ ಗಾಡ್‌ -2ʼ ಸಿನಿಮಾದ ಕಥೆ ಸಾಗುತ್ತದೆ.

 

ಟಾಪ್ ನ್ಯೂಸ್

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.