ಎರಡು ಬಾರಿ ಕ್ಯಾನ್ಸರ್ ಗೆದ್ದ ಖ್ಯಾತ ನಟಿ ಇಂದು ಕೋಮಾಕ್ಕೆ ಹೋಗುವ ಸ್ಥಿತಿಯಲ್ಲಿ..
Team Udayavani, Nov 7, 2022, 12:54 PM IST
ಕೋಲ್ಕತ್ತಾ: ಕಳೆದ ಕೆಲ ವರ್ಷಗಳಿಂದ ಬಣ್ಣದ ಲೋಕದಿಂದ ಕೇಳಿ ಬಂದ ಆಘಾತಕಾರಿ ಸುದ್ದಿಗಳು ಇನ್ನೂ ಮಾಸಿಲ್ಲ. ಸುಶಾಂತ್ ಸಿಂಗ್, ಇರ್ಫಾನ್ ಖಾನ್, ಸಿದ್ದಾರ್ಥ್ ಶುಕ್ಲಾ, ಪುನೀತ್ ರಾಜ್ ಕುಮಾರ್ ಹೀಗೆ ಅದ್ಭುತ ಪ್ರತಿಭೆಗಳನ್ನು ನಾವು ಕಳೆದುಕೊಂಡಿದ್ದೇವೆ. ಆ ನೋವು ಇಂದಿಗೂ ಹಾಗೆಯೇ ಇದೆ.
ಈ ನಡುವೆ ಮತ್ತೊಬ್ಬ ಖ್ಯಾತ ನಟಿಯ ಸ್ಥಿತಿ ಗಂಭೀರವಾಗಿದೆ. ಈ ನಟಿಗೆ ಇಂಥ ಆಘಾತ ಮೊದಲ ಬಾರಿ ಅಲ್ಲ. ಇದು ಮೂರನೇ ಬಾರಿ.
ಆ್ಯಂಡ್ರಿಲಾ ಶರ್ಮಾ ಬೆಂಗಾಲಿ ಸಿನಿಮಾರಂಗದಲ್ಲಿ ಜನಪ್ರಿಯ ಹೆಸರು. ʼ ಜುಮೂರ್ʼ , ʼ ಭೋಲೋ ಬಾಬಾ ಪರ್ ಕರೇಗಾʼ ಸಿನಿಮಾಗಳು ಬೆಂಗಾಲಿ ಬಣ್ಣದ ಲೋಕದಲ್ಲಿ ಆ್ಯಂಡ್ರಿಲಾ ಅವರಿಗೆ ಹೆಸರು ತಂದು ಕೊಟ್ಟಿತು. ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ನಟಿಗೆ ಕ್ಯಾನ್ಸರ್ ರೋಗ ವಕ್ಕರಿಸುತ್ತದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದ ಪರಿಣಾಮ ಕ್ಯಾನ್ಸರ್ ನಿಂದ ಆ್ಯಂಡ್ರಿಲಾ ಹೊರ ಬಂದಿದ್ದರು. ಆದರೆ ಸ್ವಲ್ಪ ಸಮಯದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರಳಿದ ಮೇಲೆ ಅವರಿಗೆ ಮತ್ತೊಮ್ಮೆ ಕ್ಯಾನ್ಸರ್ ಕಾಡುತ್ತದೆ. ಈ ಬಾರಿಯೂ ದಿಟ್ಟೆಯಾಗಿ ಹೋರಾಡಿ, ಆಪರೇಷನ್ ಮೂಲಕ ಕ್ಯಾನ್ಸರ್ ಗೆಡ್ಡೆ ತೆಗೆದು, ಕೀಮೋಥೆರಪಿಗೆ ಒಳಗಾಗಿ ಕ್ಯಾನ್ಸರ್ ಗೆದ್ದು, ಇತರರಿಗೆ ಸ್ಪೂರ್ತಿಯಾಗಿದ್ದರು.
ಇದನ್ನೂ ಓದಿ: ದನುಷ್ಕಾ ಗುಣತಿಲಕರನ್ನು ಎಲ್ಲಾ ಮಾದರಿ ಕ್ರಿಕೆಟ್ ನಿಂದ ಅಮಾನತು ಮಾಡಿದ ಲಂಕಾ ಬೋರ್ಡ್
ಈಗ ಮತ್ತೆ ನಟಿಗೆ ಸ್ಟ್ರೋಕ್ ಉಂಟಾಗಿದೆ. ಇದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ್ಯಂಡ್ರಿಲಾ ಶರ್ಮಾ ಅವರ ದೇಹದ ಕೆಲವು ಭಾಗವು ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಇನ್ನಷ್ಟು ಹದಗೆಟ್ಟರೆ ಅವರು ಕೋಮಾಕ್ಕೆ ಹೋಗುಬಹುದೆಂದು ಎಂದು ವೈದ್ಯರು ಹೇಳಿದ್ದಾರೆ.
ಆ್ಯಂಡ್ರಿಲಾ ಅವರ ಸದ್ಯದ ಸ್ಥಿತಿ ಗಂಭೀರವಾಗಿದ್ದು ಅವರನ್ನು ವೆಂಟಿಲೇಟರ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಇಷ್ಟು ಸಣ್ಣ ವಯಸ್ಸಿನ್ಲಲೇ ಇಷ್ಟೆಲ್ಲಾ ಆರೋಗ್ಯ ಸಮಸ್ಯೆಯಾಗಿದೆ. ಆದಷ್ಟು ಬೇಗ ತಮ್ಮ ಮೆಚ್ಚಿನ ನಟಿ ಗುಣಮಖವಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ