SS Rajamouli:‌ ಇಂಡಿಯನ್‌ ಸಿನಿಮಾದ ಬಯೋಪಿಕ್‌ ಹೇಳಲು ಹೊರಟ ರಾಜಮೌಳಿ; ಹೊಸ ಸಿನಿಮಾ ಅನೌನ್ಸ್


Team Udayavani, Sep 19, 2023, 11:01 AM IST

SS Rajamouli:‌ ಇಂಡಿಯನ್‌ ಸಿನಿಮಾದ ಬಯೋಪಿಕ್‌ ಹೇಳಲು ಹೊರಟ ರಾಜಮೌಳಿ; ಹೊಸ ಸಿನಿಮಾ ಅನೌನ್ಸ್

ಹೈದರಾಬಾದ್: ಭಾರತೀಯ ಸಿನಿಮಾರಂಗದ ಖ್ಯಾತ ನಿರ್ದೇಶಕ ಎಸ್. ಎಸ್‌ ರಾಜಮೌಳಿ ಮಂಗಳವಾರ(ಸೆ.19 ರಂದು) ಹೊಸ ಸಿನಿಮಾವೊಂದನ್ನು ಘೋಷಿಸಿದ್ದಾರೆ.

ʼಬಾಹುಬಲಿʼ, ʼಆರ್‌ ಆರ್‌ ಆರ್‌ʼ ಬಳಿಕ ಗ್ಲೋಬಲ್‌ ಮಟ್ಟದಲ್ಲಿ ಸಿನಿ ಮಂದಿಯ ಅಭಿಮಾನವನ್ನು ಗಳಿಸಿರುವ ರಾಜಮೌಳಿ ಅವರ ಸಿನಿಮಾ ಆಸ್ಕರ್‌ ಗೆದ್ದು ತಂದುಕೊಟ್ಟ ಹೆಮ್ಮೆ ಭಾರತಕ್ಕಿದೆ. ʼಆರ್‌ ಆರ್‌ ಆರ್‌ʼ ಸಿನಿಮಾದ ಬಳಿಕ ಅವರು ಮಹೇಶ್‌ ಬಾಬು ಅವರ ‘SSMB 29’ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಈ ಸಿನಿಮಾ ಹಾಲಿವುಡ್‌ ರೇಂಜ್‌ ನಲ್ಲಿ ಬರುತ್ತಿರುವುದರಿಂದ ಅದರ ತಯಾರಿ ಜೋರಾಗಿ ನಡೆಯುತ್ತಿದೆ.

ಈ ನಡುವೆ ಅವರು ಗಣೇಶ ಹಬ್ಬದಂದು ಹೊಸ ಸಿನಿಮಾವೊಂದನ್ನು ಅನೌನ್ಸ್‌ ಮಾಡಿದ್ದಾರೆ. ಭಾರತೀಯ ಸಿನಿಮಾರಂಗದ ಇತಿಹಾಸವನ್ನು ಹೇಳುವ ಕುರಿತಾದ ʼಮೇಡ್‌ ಇನ್‌ ಇಂಡಿಯಾʼ ಎನ್ನುವ ಬಯೋಪಿಕ್ ಸಿನಿಮಾವನ್ನು ರಾಜಮೌಳಿ ಅವರು ಘೋಷಿಸಿದ್ದಾರೆ.

ಅಂದಹಾಗೆ ಈ ಸಿನಿಮಾವನ್ನು ರಾಜಮೌಳಿ ಅವರು ನಿರ್ದೇಶನ ಮಾಡುತ್ತಿಲ್ಲ. ಈ ಸಿನಿಮಾವನ್ನು ನಿತಿನ್ ಕಕ್ಕರ್ ನಿರ್ದೇಶನ ಮಾಡುತ್ತಿದ್ದು, ರಾಜಮೌಳಿ ಅವರ ಮಗ ಎಸ್ ಎಸ್ ಕಾರ್ತಿಕೇಯ ಮತ್ತು ವರುಣ್ ಗುಪ್ತಾ ಎನ್ನುವವರು ಈ ಸಿನಿಮಾಕ್ಕೆ ಬಂಡವಾಳ ಹಾಕಲಿದ್ದಾರೆ. ಇದನ್ನು ರಾಜಮೌಳಿ ಅವರು ಅರ್ಪಿಸಲಿದ್ದಾರೆ.

ʼಮೇಡ್‌ ಇನ್‌ ಇಂಡಿಯಾʼ ‘ಭಾರತೀಯ ಸಿನಿಮಾದ ಹುಟ್ಟು ಮತ್ತು ಉದಯ’ದ ಕಥೆಯನ್ನು ಹೇಳಲಿದೆ.

“ನಾನು ಮೊದಲು ನಿರೂಪಣೆಯನ್ನು ಕೇಳಿದಾಗ, ಅದು ನನ್ನನು ಭಾವನಾತ್ಮಕವಾಗಿ ಸೆಳೆಯಿತು. ಬಯೋಪಿಕ್ ಮಾಡುವುದು ಕಠಿಣವಾಗಿದೆ. ಅದು ಭಾರತೀಯ ಸಿನಿಮಾದ ಪಿತಾಮಹನ ಬಗೆಗಿನ ಸಿನಿಮಾ ಇನ್ನು ಹೆಚ್ಚಿನ ಸವಾಲಿನ ಕೆಲಸವಾಗಿದೆ.ಇದನ್ನು ಹೇಳಲು ನಮ್ಮ ಹುಡುಗರು ಸಿದ್ಧರಾಗಿದ್ದಾರೆ. ಅಪಾರ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ” ಎಂದು ರಾಜಮೌಳಿ ಅವರು ಟ್ವಿಟರ್‌ ನಲ್ಲಿ ಬರೆದುಕೊಂಡು ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ.

ಎಸ್ ಎಸ್ ರಾಜಮೌಳಿ ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಅವರು ಶೀಘ್ರದಲ್ಲೇ ಮಹೇಶ್ ಬಾಬು ಅವರ ಮುಂಬರುವ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸವನ್ನು ಪ್ರಾರಂಭಿಸಲಿದ್ದಾರೆ.

ಈ ನಡುವೆ ಅವರು ಪ್ರಭಾಸ್ ಅವರ ʼಕಲ್ಕಿ 2898 ಎಡಿ’ ಚಿತ್ರದಲ್ಲಿ ಅತಿಥಿ ಪಾತ್ರವನ್ನು  ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಅದು ಅಧಿಕೃತವಾಗಿಲ್ಲ.

 

 

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.