Tollywood: ಬಿಗ್ ಬಜೆಟ್ ʼಕಣ್ಣಪ್ಪʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಕ್ಷಯ್ ಕುಮಾರ್
Team Udayavani, Apr 8, 2024, 3:15 PM IST
ಹೈದರಾಬಾದ್: ಟಾಲಿವುಡ್ ಸಿನಿರಂಗದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ “ಕಣ್ಣಪ್ಪ”ಸಟ್ಟೇರಿದ ದಿನದಿಂದ ಸದ್ದು ಮಾಡುತ್ತಿದೆ.
ಬಿಗ್ ಬಜೆಟ್ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ಕಲಾವಿದರು ನಟಿಸಲಿದ್ದಾರೆ ಎನ್ನುವ ಮಾತುಗಳು ಮೊದಲಿನಿಂದಲೂ ಹರಿದಾಡುತ್ತಿದೆ. ಇದರಲ್ಲಿ ಕನ್ನಡದ ಶಿವರಾಜ್ ಕುಮಾರ್ ಇದ್ದಾರೆ ಎನ್ನಲಾಗಿದೆ. ಇದರೊಂದಿಗೆ ಶಿವನ ಪಾತ್ರದಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ನಟ ಪ್ರಭಾಸ್ ಅವರು ಕಾಣಿಸಿಕೊಳ್ಳಲಿದ್ದಾರೆ. ಇನ್ನು ಲೇಡಿ ಸೂಪರ್ ಸ್ಟಾರ್ ನಯನತಾರಾ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ಮಾಲಿವುಡ್ ನಟ ಮೋಹನ್ ಲಾಕ್ ಕೂಡ ʼಕಣ್ಣಪ್ಪʼ ಚಿತ್ರದ ಭಾಗವಾಗಲಿದ್ದಾರೆ.
ಇದೀಗ ಶಿವನ ನಿಷ್ಠಾವಂತ ಅನುಯಾಯಿಯಾದ ʼಕಣ್ಣಪ್ಪʼ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಈ ಬಗ್ಗೆ ಟ್ರೇಡ್ ಅನಾಲಿಸ್ಟ್ ರಮೇಶ್ ಬಾಲಾ ಅವರು ಟ್ವೀಟ್ ಮಾಡಿದ್ದಾರೆ.
ಆ ಮೂಲಕ ಅಕ್ಷಯ್ ಕುಮಾರ್ ಇದೇ ಮೊದಲ ಬಾರಿಗೆ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ.
ಮುಕೇಶ್ ಸಿಂಗ್ ನಿರ್ದೇಶನದ ಈ ಚಿತ್ರದ ತಾರಾಬಳಗದಲ್ಲಿ ವಿಷ್ಣು ಮಂಚು, ಮೋಹನ್ ಬಾಬು, ಜೊತೆಗೆ ಪ್ರಭಾಸ್, ಮೋಹನ್ ಲಾಲ್, ಶಿವ ರಾಜಕುಮಾರ್, ಮಧು, ಶರತ್ಕುಮಾರ್, ಪ್ರಭುದೇವ, ಬ್ರಹ್ಮಾನಂದಂ, ಮುಖೇಶ್ ರಿಷಿ, ಕೌಶಲ್ ಮಂದ ಮುಂತಾದ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ.
Bollywood Superstar @akshaykumar joins the cast of Prestigious Pan-India Biggie – Actor @iVishnuManchu ‘s Big Budget movie #Kannappa
After #Prabhas, @Mohanlal , @PDdancing and @realsarathkumar – @akshaykumar is one more grand addition to the movie’s cast..
Stay tuned for more… pic.twitter.com/C8AY7TY4Ir
— Ramesh Bala (@rameshlaus) April 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ