Lucknow: ಅಕ್ಷಯ್,ಟೈಗರ್ ಶ್ರಾಫ್ ಸಿನಿಮಾ ಪ್ರಚಾರ ವೇಳೆ ಜನರಿಂದ ಚಪ್ಪಲಿ ಎಸೆತ, ಕಲ್ಲು ತೂರಾಟ
Team Udayavani, Feb 27, 2024, 11:52 AM IST
ಲಕ್ನೋ: ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅವರ ಬಹು ನಿರೀಕ್ಷಿತ ‘ಬಡೆ ಮಿಯಾನ್ ಚೋಟೆ ಮಿಯಾನ್’ ಸಿನಿಮಾದ ಪ್ರಚಾರದ ವೇಳೆ ನೂಕು ನುಗ್ಗಲು ಉಂಟಾಗಿ, ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಲಕ್ನೋದಲ್ಲಿ ನಡೆದಿದೆ.
ಸೋಮವಾರ(ಫೆ.26 ರಂದು) ‘ಬಡೆ ಮಿಯಾನ್ ಚೋಟೆ ಮಿಯಾನ್’ ಸಿನಿಮಾದ ಪ್ರಚಾರ ಕಾರ್ಯಕ್ರಮವನ್ನು ಲಕ್ನೋದಲ್ಲಿ ಏರ್ಪಡಿಸಲಾಗಿತ್ತು.
ಲಕ್ನೋದ ಕ್ಲಾಕ್ ಟವರ್ ಬಳಿ ನೂರಾರು ಜನ ನೆರವೇರಿದ್ದರು. ಈ ನಡುವೆ ಅಕ್ಷಯ್ ಹಾಗೂ ಟೈಗರ್ ಶ್ರಾಫ್ ಅವರು ಸ್ಟಂಟ್ ಮಾಡುವ ಮೂಲಕ ನರೆದಿದ್ದ ಜನರನ್ನು ರಂಜಿಸಿದ್ದಾರೆ. ಜನರು ಅಕ್ಷಯ್ ಹಾಗೂ ಟೈಗರ್ ಶ್ರಾಫ್ ಅವರನ್ನು ನೋಡಲು ಹಾತೊರೆದಿದ್ದು, ಈ ವೇಳೆ ನೂಕು ನುಗ್ಗಲು ಉಂಟಾಗಿದೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಜನ ಪರಸ್ಪರ ಚಪ್ಪಲಿ ಹಾಗೂ ಕಲ್ಲುಗಳನ್ನು ಎಸೆದುಕೊಂಡಿದ್ದಾರೆ. ಭದ್ರತೆಗಿದ್ದ ಪೊಲೀಸರು ಜನರ ನೂಕು ನುಗ್ಗಲನ್ನು ನಿಯಂತ್ರಿಸುವ ಸಲುವಾಗಿ ಲಘು ಲಾಠಿ ಚಾರ್ಜ್ ಮಾಡಿದ್ದಾರೆ.
ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಅಕ್ಷಯ್ ಮತ್ತು ಟೈಗರ್ ಜೊತೆಗೆ, ‘ಬಡೆ ಮಿಯಾನ್ ಚೋಟೆ ಮಿಯಾನ್’ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್ ,ಸೋನಾಕ್ಷಿ ಸಿನ್ಹಾ, ಮಾನುಷಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾವನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ. ಇದೇ ವರ್ಷದ ಈದ್ ಹಬ್ಬದಂದು ಸಿನಿಮಾ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ