Tollywood: ಗೆಳತಿ ಆತ್ಮಹತ್ಯೆ ಪ್ರಕರಣದಲ್ಲಿ ʼಪುಷ್ಪʼ ನಟನ ಬಂಧನ; ಚಿತ್ರೀಕರಣಕ್ಕೆ ಅಡ್ಡಿ


Team Udayavani, Dec 8, 2023, 10:50 AM IST

Tollywood: ಗೆಳತಿ ಆತ್ಮಹತ್ಯೆ ಪ್ರಕರಣದಲ್ಲಿ ʼಪುಷ್ಪʼ ನಟನ ಬಂಧನ; ಚಿತ್ರೀಕರಣಕ್ಕೆ ಅಡ್ಡಿ

ಹೈದರಾಬಾದ್: ಗೆಳತಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ʼಪುಷ್ಪ-2ʼ ನಟನನ್ನು ಪೊಲೀಸರು ಬಂಧಿಸಿದ್ದು, ಈ ಕಾರಣದಿಂದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಜಗದೀಶ್ ಪ್ರತಾಪ್ ಭಂಡಾರಿ(30) ಬಂಧಿತ ನಟ. ʼಪುಷ್ಪʼ ಸಿನಿಮಾದಲ್ಲಿ ಕೇಶವ್‌ ಎನ್ನುವ ಪಾತ್ರವನ್ನು ಮಾಡಿ ಗುರುತಿಸಿಕೊಂಡಿರುವ ಜಗದೀಶ್‌ ಪ್ರತಾಪ್‌ ಅವರನ್ನು ಗೆಳತಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲ ವರ್ಷಗಳಿಂದ ಕಿರುಚಿತ್ರಗಳಲ್ಲಿ ನಟಿಸುತ್ತಿದಾಕೆಯ ಜೊತೆ ಜಗದೀಶ್ ರಿಲೇಷನ್‌ ಶಿಪ್‌ ನಲಿದ್ದರು. ಆಕೆಯ ಕೆಲ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದುಕೊಂಡಿದ್ದ ಜಗದೀಶ್‌, ಆಕೆಯನ್ನು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ. ಇದರಿಂದ ಬೇಸತ್ತು ಹೋಗಿದ್ದ ಯುವತಿ ನ.29 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಅಂದಿನಿಂದ ಜಗದೀಶ್‌ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: Welcome to ‘Toxic’ World: ರಾಕಿಭಾಯ್‌ ಹೊಸ ಸಿನಿಮಾದ ಟೈಟಲ್‌ ಬಿಡುಗಡೆ

ಈ ಸಂಬಂಧ ಯುವತಿಯ ಕುಟುಂಬದವರು ಜಗದೀಶ್‌ ವಿರುದ್ಧ ದೂರು ನೀಡಿದ್ದರು. ಅದರಂತೆ ಡಿ.6 ರಂದು ಪೊಲೀಸರು ಜಗದೀಶ್‌ ನನ್ನು ಸೆಕ್ಷನ್ 306ರ ಅಡಿಯಲ್ಲಿ ದೂರು ದಾಖಲಿಸಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಇತ್ತ‌ ನಟನ ಬಂಧನದಿಂದ ʼಪುಷ್ಪ-2ʼ ಚಿತ್ರೀಕರಣಕ್ಕೆ ಅಡ್ಡಿಯಾಗಿದೆ. ಶೆಡ್ಯೂಲ್ ಮೇಲೆ ಪರಿಣಾಮ ಬೀರಿದೆ. ಜಗದೀಶ್‌ ಅವರು ಬೇಲ್‌ನ ನಿಂದ ಹೊರಬರಲು ಚಿತ್ರತಂಡ ಕಾಯುತ್ತಿದೆ. ಹಾಕಿಕೊಂಡಿದ್ದ ಶೆಡ್ಯೂಲ್‌ ನ್ನು ಬದಲಾಯಿಸಿಕೊಂಡಿದೆ ಎಂದು ವರದಿ ತಿಳಿಸಿದೆ.

ʼಪುಷ್ಪʼ ಮಾತ್ರವಲ್ಲದೆ ಟಾಲಿವುಡ್‌ ನ ಕೆಲ ಸಿನಿಮಾಗಳಲ್ಲಿ ಜಗದೀಶ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

1-nati

Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

1428

Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.