ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್ ಬಿ
Team Udayavani, Mar 28, 2023, 10:26 AM IST
ಮುಂಬಯಿ: ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದಾರೆ.
ಕೆಲ ಸಮಯದ ಹಿಂದೆ ಹೈದರಾಬಾದ್ ನಲ್ಲಿ ʼಪ್ರಾಜೆಕ್ಟ್ ಕೆʼ ಚಿತ್ರೀಕರಣದ ವೇಳೆ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಪಕ್ಕೆಲುಬಿಗೆ ಗಾಯವಾಗಿತ್ತು. ಆ ಬಳಿಕ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲೇ ಇದ್ದು ತಮ್ಮ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದರು. ಗಾಯ ಗಂಭೀರ ಸ್ವರೂಪದಾಗಿದ್ದರಿಂದ ಅಭಿಮಾನಿಗಳು ತನ್ನ ಮೆಚ್ಚಿನ ನಟನ ಆದಷ್ಟು ಬೇಗ ಚೇತರಿಕೆ ಕಾಣಲಿ ಎಂದು ಆಶಿಸಿದ್ದರು.
ಇದನ್ನೂ ಓದಿ: ಸುಖಾಂತ್ಯ ಕಂಡ ಕ್ರಿಕೆಟಿಗ ಕೇದಾರ್ ಜಾಧವ್ ತಂದೆ ನಾಪತ್ತೆ ಪ್ರಕರಣ
ಆ್ಯಕ್ಷನ್ ದೃಶ್ಯದ ಚಿತ್ರೀಕರಿಸುವಾಗ ಗಾಯಗೊಂಡಿದ್ದ ಬಿಗ್ ಬಿ, ಮೊದಲ ಬಾರಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಭಾನುವಾರ ತಮ್ಮ ನಿವಾಸದ ಎದುರು ಜಮಾಸಿದ ಅಭಿಮಾನಿಗಳ ಮುಂದೆ ಒಂದು ಕೈ ಬೀಸಿ, ನಮಸ್ಕಾರ ಎಂದು ಹೇಳಿ, ನಗುಮುಖದಿಂದ ಅಭಿಮಾನಿಗಳ ಮುಂದೆ ಸಮಯ ಕಳೆದಿದ್ದಾರೆ. ಈ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಅಮಿತಾಭ್ ಬರೆದುಕೊಂಡಿದ್ದಾರೆ
ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಭೂಮಿಕೆಯ ʼಪ್ರಾಜೆಕ್ಟ್ ಕೆʼ ಸಿನಿಮಾಕ್ಕೆ ಅಶ್ವಿನಿ ದತ್ ನಿರ್ದೇಶನವಿದೆ. ತೆಲುಗು ಹಾಗೂ ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್