ಮೋಹಕ ನಟಿ, ರಾಜ್ ಜತೆ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಾಧವಿ ನಟನೆಗೆ ಗುಡ್ ಬೈ ಹೇಳಿದ್ಯಾಕೆ?

ದಾಸರಿ ರಾವ್ ಒಮ್ಮೆ ಮಾಧವಿಯ ಭರತನಾಟ್ಯವನ್ನು ವೀಕ್ಷಿಸಿದ್ದರು. ಆಗ ಆಕೆಯ ವಯಸ್ಸು ಬರೇ 13 ವರ್ಷ

ನಾಗೇಂದ್ರ ತ್ರಾಸಿ, Dec 28, 2019, 7:38 PM IST

Madhavi

ಬದುಕು, ಯಶಸ್ಸು, ಕೀರ್ತಿ ಮನುಷ್ಯನನ್ನು ಎಲ್ಲಿಂದ ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದು. ಅದಕ್ಕೆ ಹಲವಾರು ನಟ, ನಟಿಯರು, ರಾಜಕಾರಣಿಗಳು, ಯಶಸ್ವಿ ಉದ್ಯಮಿಗಳು ಕೂಡಾ ಹೊರತಲ್ಲ. ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ, ಒರಿಯಾ ಭಾಷೆಗಳಲ್ಲಿ ನಟಿಸಿದ್ದ ಮೋಹಕ ನಟಿ ಮಾಧವಿ ಶರ್ಮಾ ಸಾಕ್ಷಿ!

1976ರಿಂದ 1996ರವರೆಗೆ ಸುಮಾರು 20ವರ್ಷಗಳ ಸಿನಿ ಪ್ರಯಾಣದಲ್ಲಿ ಮಾಧವಿ 300 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲಿಯೂ ಕನ್ನಡ ಸಿನಿ ಪ್ರೇಕ್ಷಕರಿಗೆ ಮಾಧವಿ ಚಿರಪರಿಚಿತ ಎಂಬುದರಲ್ಲಿ ಎರಡು ಮಾತಿಲ್ಲ. ಹೀಗೆ ಸಿನಿಮಾರಂಗದಲ್ಲಿ ಉತ್ತುಂಗದಲ್ಲಿದ್ದಾಗಲೇ ಮಾಧವಿ ದಿಢೀರನೆ ಮದುವೆ ನಿರ್ಧಾರಕ್ಕೆ ಬಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮೇಲೆ ಸಿನಿಮಾರಂಗಕ್ಕೆ ಗುಡ್ ಬೈ ಹೇಳಿದವರು ಇಂದಿಗೂ ನಟನೆಯಿಂದ ದೂರ ಉಳಿದುಬಿಟ್ಟಿದ್ದಾರೆ. ಸುಮಾರು 21 ವರ್ಷಗಳಿಂದ ಬೆಳ್ಳಿಪರದೆಯಿಂದ ದೂರವಾಗಿರುವ ಚೆಂದುಳ್ಳಿ ನಟಿ ಮಾಧವಿ ಈಗೆಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬ ಕುತೂಹಲ ಸಿನಿಮಾಸಕ್ತರಲ್ಲಿ ಸಹಜವಾಗಿಯೇ ಮೂಡುವ ಪ್ರಶ್ನೆಯಾಗಿದೆ.

1962ರ ಆಗಸ್ಟ್ 12ರಂದು ಹೈದರಾಬಾದ್ ನಲ್ಲಿ ಮಾಧವಿ ಜನಿಸಿದ್ದರು. ಶಶಿರೇಖಾ ಮತ್ತು ಗೋವಿಂದ ಸ್ವಾಮಿ ದಂಪತಿಯ ಪುತ್ರಿಯ ಈಕೆ. ಬಾಲ್ಯದಲ್ಲಿಯೇ ಭರತನಾಟ್ಯ ಮತ್ತು ಫೋಕ್ ಡ್ಯಾನ್ಸ್ ತರನೇತಿ ಪಡೆದಿದ್ದ ಈಕೆ ಬಾಲ್ಯದಲ್ಲಿಯೇ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದ ಹೆಗ್ಗಳಿಕೆ ಮಾಧವಿಯದ್ದು. 1980ರ ದಶಕದ ಬಹುಬೇಡಿಕೆಯ ನಟಿ ಈಕೆ. ಆದರೆ ಸ್ಯಾಂಡಲ್ ವುಡ್, ತಮಿಳು, ತೆಲುಗಿನಲ್ಲಿ ಭರ್ಜರಿ ಸದ್ದು ಮಾಡಿದ್ದ ಮಾಧವಿ ಹಲವು ವರ್ಷಗಳ ಕಾಲ ಯಾವುದೇ ಸುದ್ದಿ ಮಾಡದೇ ನಿಗೂಢವಾಗಿ ಇದ್ದು ಬಿಟ್ಟಿದ್ದರು.

ಮಾಧವಿ ಪ್ರತಿಭೆಯನ್ನು ಗಮನಿಸಿದ್ದು ದಾಸರಿ ನಾರಾಯಣ ರಾವ್:

ಭಾರತೀಯ ಸಿನಿಮಾ ರಂಗದ ಪ್ರತಿಷ್ಠಿತ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ರಾಜಕಾರಣಿ ದಾಸರಿ ನಾರಾಯಣ ರಾವ್ ಒಮ್ಮೆ ಮಾಧವಿಯ ಭರತನಾಟ್ಯವನ್ನು ವೀಕ್ಷಿಸಿದ್ದರು. ಆಗ ಆಕೆಯ ವಯಸ್ಸು ಬರೇ 13 ವರ್ಷ! ನಂತರ ತಮ್ಮ ತೆಲುಗು ಸಿನಿಮಾ ಥೋರುಪು ಪಡಾಮಾರಾದಲ್ಲಿ ನಟನೆಗೆ ಆಫರ್ ಕೊಟ್ಟು ಬಿಟ್ಟಿದ್ದರು. ಈ ಚಿತ್ರದಲ್ಲಿನ ನಟನೆಯಲ್ಲಿ ಮಾಧವಿ ಜನರ ಮನಗೆದ್ದುಬಿಟ್ಟಿದ್ದಳು. ಈ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಮಾಧವಿಗೆ ಕನ್ನಡ, ತಮಿಳು, ಮಲಯಾಳಂ, ತೆಲುಗು, ಹಿಂದಿ, ಬೆಂಗಾಲಿ ಹಾಗೂ ಒರಿಯಾ ಭಾಷೆಗಳ ಸಿನಿಮಾಗಳಲ್ಲಿ ನಟಿಸುವಂತೆ ಬೇಡಿಕೆ ಬರಲು ಆರಂಭಿಸಿದ್ದವು.

ತೆಲುಗಿನ ಸೂಪರ್ ಸ್ಟಾರ್ ಚಿರಂಜೀವಿ ಜತೆ ಹಲವು ಸಿನಿಮಾಗಳಲ್ಲಿ ಮಾಧವಿ ನಟಿಸಿದ್ದರು. ಚಿರಂಜೀವಿ ಜತೆಗಿನ ಮೊದಲ ಸಿನಿಮಾ 1982ರ ಇಂಟ್ಲೋ ರಾಮಯ್ಯ ವೀಧಿಲೂ ಕೃಷ್ಣಯ್ಯ ತೆಲುಗು ಸಿನಿಮಾದಲ್ಲಿ ಅಭಿನಯಿಸಿದ್ದು. ತದನಂತರ ಕೈದಿ ಚಿತ್ರದಲ್ಲಿ ನಟಿಸಿದ್ದು ಇದು ಸೂಪರ್ ಹಿಟ್ ಆಗಿತ್ತು. 1978ರಲ್ಲಿ ಕೆ.ಚಾಲಚಂದಿರ ಅವರ ಮರೋ ಚರಿತ ಚಿತ್ರದಲ್ಲಿ ಮಾಧವಿಗೆ ಪೋಷಕ ಪಾತ್ರ ನೀಡಿದ್ದರು. ಈ ಸಿನಿಮಾ 1981ರಲ್ಲಿ ಬಾಲಿವುಡ್ ನಲ್ಲಿ ಏಕ್ ದುಜೆ ಕೇ ಲಿಯೇ ಹೆಸರಿನಲ್ಲಿ ರಿಮೇಕ್ ಆಗಿತ್ತು. 1981ರಲ್ಲಿ ತೆರೆಕಂಡಿದ್ದ ಕೆ.ಬಾಲಚಂದಿರ್ ಅವರ ತಿಲ್ಲು ಮುಲ್ಲು ಸಿನಿಮಾದಲ್ಲಿ ಸೂಪರ್ ಸ್ಟಾರ್ ರಜನಿ ಜತೆ ಮಾಧವಿ ನಟಿಸಿದ್ದರು. 1990ರಲ್ಲಿ ಬಾಲಿವುಡ್ ನ ಅಗ್ನಿಪಥ್ ನಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಜತೆ ಅಭಿನಯಿಸಿದ್ದರು.

ಡಾ.ರಾಜ್ ಜತೆ ಹಲವು ಸಿನಿಮಾಗಳಲ್ಲಿ ನಟನೆ:

ತಮಿಳು, ತೆಲುಗಿನಲ್ಲಿ ಹೆಸರು ಮಾಡಿದ್ದ ಮಾಧವಿ ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅದರಲ್ಲಿಯೂ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಜತೆ ಮಾಧವಿ ಹಾಲು ಜೇನು, ಭಾಗ್ಯದ ಲಕ್ಷ್ಮಿ ಬಾರಮ್ಮ, ಅನುರಾಗ ಅರಳಿತು, ಶ್ರುತಿ ಸೇರಿದಾಗ, ಜೀವನ ಚೈತ್ರ, ಆಕಸ್ಮಿಕ, ಒಡಹುಟ್ಟಿದವರು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಹಾಲು ಜೇನು ಮತ್ತು ಮಲಯ ಮಾರುತ ಸಿನಿಮಾ ಮಾಧವಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿತ್ತು. ಅಲ್ಲದೇ ಡಾ.ವಿಷ್ಣುವರ್ಧನ್, ಅನಂತ್ ನಾಗ್, ಅಂಬರೀಶ್ ಜತೆಯೂ ಮಾಧವಿ ನಟಿಸಿದ್ದರು.

ಮಲಯಾಳಂನಲ್ಲಿಯೂ ಖ್ಯಾತ ನಟರಾದ ಮಮ್ಮುಟ್ಟಿ, ಮೋಹನ್ ಲಾಲ್ ಜತೆ ನಟಿಸಿದ್ದ ಹೆಗ್ಗಳಿಕೆ ಮಾಧವಿ ಅವರದ್ದಾಗಿದೆ.ತಮ್ಮ ಅದ್ಭುತ ನಟನೆಗಾಗಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಯನ್ನು ಮಾಧವಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಸ್ವಾಮಿ ರಾಮ ಅನುಯಾಯಿ ಜತೆ ವಿವಾಹ:

ಬರೋಬ್ಬರಿ ಎರಡು ದಶಕಗಳ ಕಾಲ ಚಿತ್ರರಂಗದಲ್ಲಿ ಯಶಸ್ಸಿನ ಉತ್ತುಂಗದಲ್ಲಿ ಇದ್ದಾಗಲೇ ತಮ್ಮ ಕುಟುಂಬ ಸದಸ್ಯರೊಡನೆ ಚರ್ಚಿಸಿ ಮದುವೆಯಾಗುವ ನಿರ್ಧಾರಕ್ಕೆ ಬಂದು ಬಿಟ್ಟಿದ್ದರು. ಅದರಂತೆ ತಮ್ಮ ಧಾರ್ಮಿಕ ಗುರು ಸ್ವಾಮಿ ರಾಮ ಅವರ ನಿರ್ದೇಶನದಂತೆ ಅವರ ಅನುಯಾಯಿ, ಔಷಧೀಯ ವಸ್ತುಗಳ ಮಾರಾಟ ಉದ್ಯಮಿ ರಾಲ್ಫಾ ಶರ್ಮಾ ಅವರ ಜತೆ 1996ರ ಫೆಬ್ರುವರಿ 14ರಂದು ಹಸೆಮಣೆ ಏರಿದ್ದರು.

ಮದುವೆ ನಂತರ ನ್ಯೂಜೆರ್ಸಿಗೆ:

ರಾಲ್ಫಾ ಶರ್ಮಾ ಜತೆ ವಿವಾಹವಾದ ನಂತರ ಮಾಧವಿ ಪತಿ ಜತೆ ನ್ಯೂಜೆರ್ಸಿಗೆ ತೆರಳಿದ್ದರು. ಅಲ್ಲಿಯೇ ವಾಸವಾಗಿದ್ದ ದಂಪತಿಗೆ ಟಿಫಾನಿ (13), ಪ್ರಿಸಿಲ್ಲಾ (9) ಹಾಗೂ ಎವೆಲಿನ್ (6) ಸೇರಿ ಮೂವರು ಮಕ್ಕಳು. ಮಾಧವಿ ಈಗ ಆಧ್ಯಾತ್ಮಿಕದತ್ತ ಒಲವು ಹೊಂದಿದ್ದು, ಆಂಧ್ರಪ್ರದೇಶದ ಅದೋನಿಯಲ್ಲಿ ಗುರು ಸ್ವಾಮಿ ರಾಮ ಅವರ ಸ್ಮರಣಾರ್ಥ ವೃದ್ಧಾಶ್ರಮ ಕಟ್ಟುವ ಯೋಚನೆಯಲ್ಲಿದ್ದಾರೆ. ನೀವು ಮತ್ತೆ ಸಿನಿಮಾದಲ್ಲಿ ನಟಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ತಾನು ಮತ್ತೆ ಚಿತ್ರರಂಗಕ್ಕೆ ಮರಳುವುದಿಲ್ಲ ಎಂದು ಮಾಧವಿ ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.