ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?


Team Udayavani, Oct 22, 2021, 5:20 PM IST

21ananya

ನವದೆಹಲಿ: ‘ಆರ್ಯನ್ ಖಾನ್ ಜೊತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿರಲಿಲ್ಲ. ಸಿಗರೇಟು ಸೇದುತ್ತಿದ್ದೆ’ ಎಂದು ಎನ್‍ಸಿಬಿ ವಿಚಾರಣೆಯ ವೇಳೆ ಬಾಲಿವುಡ್ ನಟಿ ಅನನ್ಯ ಪಾಂಡೆ ಹೇಳಿದ್ದಾರೆ.

ಅನನ್ಯ ಪಾಂಡೆ ಅವರನ್ನು ಡ್ರಗ್ಸ್ ಕೇಸ್ ವಿಚಾರದಲ್ಲಿ, ಎನ್‍ಸಿಬಿ ವಿಚಾರಣೆ ನಡೆಸುತ್ತಿದೆ. ಸತತ ಎರಡನೇ ದಿನದ ಸಮನ್ಸ್ ನೀಡಿದ್ದು, ಆರ್ಯನ್ ಜೊತೆಗಿನ ವಾಟ್ಸ್ಯಾಪ್ ಚಾಟ್ ಕುರಿತಾಗಿ ತೀವ್ರ ವಿಚಾರಣೆ ನಡೆಸುತ್ತಿದೆ.

ಮೆಸೆಜ್‍ಗಳು ಹಳೆಯದಾಗಿದ್ದು, ಎಲ್ಲವನ್ನೂ ನೆನಪಿನಲ್ಲಿಟ್ಟುಕೊಂಡಿಲ್ಲ. ನಾನು ಮಾದಕ ವಸ್ತುಗಳನ್ನು ಸೇವಿಸಿಲ್ಲ, ನನಗೆ ಯಾವುದೇ ಡ್ರಗ್ ಪೆಡ್ಲರ್ಸ್ ಗಳು ತಿಳಿದಿಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ ಎಂದು ಎನ್‍ಸಿಬಿ ವಿಚಾರಣೆ ವೇಳೆ ಹೇಳಿದ್ದಾರೆ.

ಆರ್ಯನ್ ಖಾನ್ ಹಾಗೂ ಅನನ್ಯ ಇವರಿಬ್ಬರ ವಾಟ್ಸ್ಯಾಪ್ ಚಾಟ್‍ಗಳು ಎಸ್‍ಸಿಬಿಗೆ ಲಭಿಸಿದ್ದು, ಸಂದೇಶದಲ್ಲಿ ಆರ್ಯನ್ ಖಾನ್ ಗಾಂಜಾ ವ್ಯವಸ್ಥೆ ಆಗಿದೆಯೆ? ಎಂದು ಅನನ್ಯಳಿಗೆ ಕೇಳಿದಾಗ, ಎಲ್ಲವೂ ರೆಡಿ ಇದೆ ಎಂದು ಮರುಸಂದೇಶ ಕಳುಹಿಸಿದ್ದಾಳೆ ಎಂದು ಹೇಳಲಾಗಿದೆ.

ಈ ಸಂದೇಶದ ಕುರಿತು ಎನ್‍ಸಿಬಿ ಅವರಲ್ಲಿ ಪ್ರಶ್ನಿಸಿದಾಗ, ಇದು ಕೇವಲ ತಮಾಷೆಗಾಗಿ ಕಳುಹಿಸಿದ ಸಂದೇಶ. ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾಳೆ.

ಇದನ್ನೂ ಓದಿ:  ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

ಬಲ್ಲ ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ, ಮಾದಕ ವಿರೋಧಿ ಏಜೆನ್ಸಿಗೆ ಬೇರೆ ಬೇರೆ ಸಂದರ್ಭಗಳಲ್ಲಿ ಡ್ರಗ್ಸ್ ವಿಚಾರವಾಗಿ ಮಾತನಾಡುತ್ತಿದ್ದ ಇವರಿಬ್ಬರ ಸಂದೇಶಗಳು ಎನ್‍ಸಿಬಿಗೆ ಲಭ್ಯವಾಗಿವೆ.

ಅ.21ರಂದು ಬಾಂದ್ರಾ ನಿವಾಸದಲ್ಲಿ ಸಂಕ್ಷಿಪ್ತ ಶೋಧ ಕಾರ್ಯಾಚರಣೆ ನಡೆಸಿದ ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ತನಿಖೆಗೆ ಕರೆದಿತ್ತು. ಅಂದು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿ, ಅನನ್ಯಳನ್ನು ಅಧಿಕಾರಿಗಳು ಬಿಡುಗಡೆಗೊಳಿಸಿದ್ದರು.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.