Television: ಖ್ಯಾತ ನಟಿ ಬಳಿಕ ಮತ್ತೋರ್ವ ನಟ ನಿಧನ; 3 ದಿನದಲ್ಲಿ ಮೂರು ಸಾವು ಕಂಡ ಕಿರುತೆರೆ
Team Udayavani, May 24, 2023, 10:36 AM IST
ಮುಂಬಯಿ: ಕಿರುತೆರೆ ರಂಗಕ್ಕೆ ಇಂದು ಕರಾಳ ದಿನ. ನಟಿ ವೈಭವಿ ಉಪಾಧ್ಯಾಯ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ಆಘಾತದಲ್ಲಿದ್ದ ಜನರಿಗೆ ಇದೀಗ ಮತ್ತೋರ್ವ ಖ್ಯಾತ ನಟ ಮೃತಪಟ್ಟಿರುವ ಸುದ್ದಿ ಮತ್ತಷ್ಟು ಆಘಾತವನ್ನೀಡಿದೆ.
ಟಿವಿ ಲೋಕದಲ್ಲಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದ ನಿತೇಶ್ ಪಾಂಡೆ (51) ಹೃದಯ ಸ್ತಂಭನ ಉಂಟಾಗಿ ಮುಂಬಯಿನಲ್ಲಿ ನಿಧನರಾಗಿದ್ದಾರೆ.
1990 ರಲ್ಲಿ ರಂಗಭೂಮಿಯಲ್ಲಿ ನಟಿಸುವ ಮೂಲಕ ನಟನಾ ಲೋಕಕ್ಕೆ ಕಾಲಿಟ್ಟ ಅವರು 1995 ರಲ್ಲಿ ಬಂದ ʼತೇಜಸ್ʼ ಸಿನಿಮಾದಲ್ಲಿ ಪತ್ತೇದಾರಿ ಪಾತ್ರವೊಂದರಲ್ಲಿ ನಟಿಸಿ ಗಮನ ಸೆಳೆದಿದ್ದರು. ಆ ಬಳಿಕ ಕಿರುತೆರೆಯಲ್ಲಿ ಸಾಲು ಸಾಲಾಗಿ ಧಾರಾವಾಹಿಗಳಲ್ಲಿ ನಟಿಸಿದರು. ʼಮಂಜಿಲೀನ್ ಅಪ್ನಿ ಅಪ್ನಿʼ, ʼಅಸ್ತಿತ್ವ ಏಕ್ ಪ್ರೇಮ್ ಕಹಾನಿʼ, ʼಸಾಯಾ, ಜುಸ್ತಜೂʼ ದುರ್ಗೇಶ್ ನಂದಿನಿ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿದ್ದಾರೆ.
ʼಓಂ ಶಾಂತಿ ಓಂʼ ,ʼಬದಾಯಿ ದೋʼ ಮುಂತಾದ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಡ್ರೀಮ್ ಕ್ಯಾಸಲ್ ಪ್ರೊಡಕ್ಷನ್ಸ್ ಎಂಬ ಹೆಸರಿನ ಸ್ವತಂತ್ರ ನಿರ್ಮಾಣ ಸಂಸ್ಥೆಯನ್ನೂ ಅವರು ನಡೆಸುತ್ತಿದ್ದರು.
ʼಖೋಸ್ಲಾ ಕಾ ಘೋಸ್ಲಾʼದಲ್ಲಿನ ಅವರ ಅಭಿನಯ ಅಪಾರ ಜನರನ್ನು ರಂಜಿಸಿತ್ತು. ʼಅನುಪಮಾʼ ಮತ್ತು ʼಪ್ಯಾರ್ ಕಾ ದರ್ದ್ ಹೈ ಮೀಟಾ ಮೀಟಾ ಪ್ಯಾರಾ ಪ್ಯಾರಾʼ ಧಾರಾವಾಹಿಯಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು.
ಉತ್ತರಾಖಂಡದ ಅಲ್ಮೋರಾ ಕುಮಾನ್ ಮೂಲದವರಾದ ಅವರು ಕಳೆದ 25 ವರ್ಷದಿಂದ ಕಿರುತೆರೆಯಲ್ಲಿ ಕೆಲಸ ಮಾಡಿಕೊಂಡಿದ್ದರು.
ಕಿರುತೆರೆ ರಂಗಕ್ಕೆ ಈ ವಾರ ಅತ್ಯಂತ ಕರಾಳ ವಾರ ಎಂದರೆ ತಪ್ಪಾಗದು. ಮೇ. 22 ರಂದು ಆದಿತ್ಯ ಸಿಂಗ್ ರಜಪೂತ್ ವಾಶ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆ ಬಳಿಕ ಅಪಘಾತದಲ್ಲಿ ನಟಿ ವೈಭವಿ ಉಪಾಧ್ಯಾಯ ಮೃತಪಟ್ಟಿದ್ದಾರೆ. ಇದೀಗ ನಟ ನಿತೇಶ್ ಪಾಂಡೆ ನಿಧನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ