ತಾಪ್ಸಿಗಿಂತ ದೊಡ್ಡ …. ನನಗಿದೆ: ಅನುರಾಗ್ ಕಶ್ಯಪ್ ಸಂದರ್ಶನದ ಮಾತು ವೈರಲ್!
Team Udayavani, Aug 16, 2022, 6:35 PM IST
ಮುಂಬಯಿ: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಅವರನ್ನು ಲೀಡ್ ರೋಲ್ ನಲ್ಲಿ ಇಟ್ಟುಕೊಂಡು ʼದೋಬಾರಾ ʼ ಸಿನಿಮಾವನ್ನು ಮಾಡಿದ್ದು, ಚಿತ್ರ ಆಗಸ್ಟ್ 19 ರಂದು ತೆರೆಗೆ ಬರಲಿದೆ. ಚಿತ್ರದ ಪ್ರಚಾರದಲ್ಲಿ ಇಬ್ಬರು ಬ್ಯುಸಿಯಾಗಿದ್ದಾರೆ.
ಮೊದಲಿನಿಂದಲೂ ಅನುರಾಗ್ ಕಶ್ಯಪ್ ತಮಾಷೆಯಾಗಿ ಏನೇ ಮಾತಾನಾಡಿರೂ ಅದು ದೊಡ್ಡ ಸುದ್ದಿಯಾಗುತ್ತದೆ ಅಥವಾ ಚರ್ಚೆ ಹುಟ್ಟಿ ಹಾಕುತ್ತದೆ. ಅಂಥದ್ದೇ ಮಾತನ್ನು ಅನುರಾಗ್ ಮತ್ತೊಮ್ಮೆ ಆಡಿದ್ದಾರೆ.
ಸಿನಿಮಾದ ಪ್ರಮೋಷನ್ ಗಾಗಿ ಅನುರಾಗ್ ಕಶ್ಯಪ್ ಹಾಗೂ ತಾಪ್ಸಿ ಪನ್ನು ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ನಿರೂಪಕ ರಣ್ಬೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ಮಾಡಿರುವ ಬಗ್ಗೆ ಒಂದು ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಅನುರಾಗ್ ಕಶ್ಯಪ್ ವ್ಯಂಗ್ಯವಾಗಿ ಉತ್ತರಿಸಿದ್ದಾರೆ.
ಇದನ್ನೂ ಓದಿ: ಆಮಿರ್, ಹೃತಿಕ್ ಆಯ್ತು ಈಗ ಶಾರುಖ್ ಖಾನ್ ʼಪಠಾಣ್ʼಗೂ ತಟ್ಟಿತು boycott ಬಿಸಿ
“ನಾನು ಕೂಡ ಇಂಟರ್ ನೆಟ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸುವ ಫೋಟೋ ಹಾಕಬೇಕೆಂದುಕೊಂಡಿದ್ದೆ. ಆದರೆ ನನ್ನ ಹೊಟ್ಟೆಯಿಂದ ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪಕ್ಕದಲ್ಲೇ ಇದ್ದ ತಾಪ್ಸಿ “ಹಾರಾರ್ ಶೋ” ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಿರೂಪಕ ಇದಕ್ಕೆ ತಾಪ್ಸಿಗೆ ಅಭದ್ರತೆ ಕಾಡುತ್ತಿದೆ ಎಂದಿದ್ದಾರೆ. ಕೂಡಲೇ “ಅನುರಾಗ್ ಅವಳು ಹಾಗೆಯೇ, ಅವರಿಗಿಂತ ದೊಡ್ಡ ಸ್ತನ ನನಗಿದೆ” ಹಾಗಾಗಿ ಅವಳಿಗೆ ನನ್ನ ಬಗ್ಗೆ ಹೊಟ್ಟೆಯುರಿ” ಎಂದಿದ್ದಾರೆ. ಈ ಮಾತಿಗೆ ತಾಪ್ಸಿ ಸೇರಿ ಎಲ್ಲರೂ ಜೋರಾಗಿ ನಕ್ಕಿದ್ದಾರೆ.
ಇನ್ನೊಂದೆಡೆ ಅನುರಾಗ್ ಆಡಿದ ಮಾತಿನ ತುಣುಕು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ʼದೊಬಾರʼ 2018 ರಲ್ಲಿ ಬಂದ ʼಮೈರೇಜ್ʼ ಚಿತ್ರದ ರಿಮೇಕ್ ಚಿತ್ರವಾಗಿದೆ. ಇದೊಂದು ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಸಿನಿಮಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ