ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್
Team Udayavani, Sep 29, 2022, 8:39 AM IST
ಬೇಗುಸರಾಯ್ : ವೆಬ್ ಸರಣಿ ‘XXX’ ನಲ್ಲಿ ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಿಹಾರದ ಬೇಗುಸರಾಯ್ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.
‘ಎಕ್ಸ್ ಎಕ್ಸ್ ಎಕ್ಸ್’ ವೆಬ್ ಸೀರಿಸ್ನ ಮೊದಲ ಸೀಸನ್ 2018ರಲ್ಲಿ ಪ್ರಸಾರವಾಗಿತ್ತು. 2020ರ ಜನವರಿಯಲ್ಲಿ ಎರಡನೇ ಸೀಸನ್ ಬಿಡುಗಡೆ ಆಯಿತು. ಇದರ ಪ್ರತಿ ಎಪಿಸೋಡ್ನಲ್ಲಿ ಎಪಿಸೋಡ್ಗಳಲ್ಲಿ ಬೇರೆ ಬೇರೆ ಕಥೆ ಇದೆ. ಲೈಂಗಿಕ ಸಂಬಂಧಗಳ ವಿವಿಧ ಆಯಾಮಗಳನ್ನು ಇಟ್ಟುಕೊಂಡು ಈ ಸಂಚಿಕೆಗಳು ಮೂಡಿಬಂದಿವೆ. ಇದರಲ್ಲಿ ಸೈನಿಕರ ಕುಟುಂಬಕ್ಕೆ ಹಾಗೂ ಪತ್ನಿಯರಿಗೆ ಅವಮಾನ ಮಾಡಲಾಗಿದೆ ಎಂದು ಮಾಜಿ ಸೈನಿಕ ಮತ್ತು ಬೇಗುಸರಾಯ್ ನಿವಾಸಿ ಶಂಭು ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಧೀಶ ವಿಕಾಸ್ ಕುಮಾರ್ ನ್ಯಾಯಾಲಯವು ವಾರಂಟ್ ಹೊರಡಿಸಿದೆ.
ಶ್ರೀ ಕುಮಾರ್ ಅವರು 2020 ರಲ್ಲಿ ತಮ್ಮ ದೂರಿನಲ್ಲಿ, ‘XXX’ (ಸೀಸನ್-2) ಸರಣಿಯು ಸೈನಿಕನ ಹೆಂಡತಿಗೆ ಸಂಬಂಧಿಸಿದ ಹಲವಾರು ಆಕ್ಷೇಪಾರ್ಹ ದೃಶ್ಯಗಳನ್ನು ಒಳಗೊಂಡಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ : ನಿಂತಿದ್ದ ಬಸ್ಸಿನಲ್ಲಿ ಬಾಂಬ್ ಸ್ಫೋಟ : ಕೇವಲ ಎಂಟು ಗಂಟೆಯ ಅಂತರದಲ್ಲಿ ನಡೆದ ಎರಡನೆಯ ಸ್ಫೋಟ
ಏಕ್ತಾ ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್ ಲಿಮಿಟೆಡ್ ಒಡೆತನದ ಒಟಿಟಿ ಪ್ಲಾಟ್ಫಾರ್ಮ್ ಎಎಲ್ಟಿ ಬಾಲಾಜಿಯಲ್ಲಿ ಈ ಸರಣಿಯನ್ನು ಪ್ರಸಾರ ಮಾಡಲಾಗಿದೆ. ಶೋಭಾ ಕಪೂರ್ ಬಾಲಾಜಿ ಟೆಲಿಫಿಲ್ಮ್ ಗಳೊಂದಿಗೆ ಸಹ ಸಂಬಂಧ ಹೊಂದಿದ್ದಾರೆ ಎಂದು ಶಂಭು ಕುಮಾರ್ ಅವರ ವಕೀಲ ಹೃಷಿಕೇಶ್ ಪಾಠಕ್ ಹೇಳಿದ್ದಾರೆ.
ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿತ್ತು ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಮುಂದೆ ಹಾಜರಾಗುವಂತೆ ಹೇಳಿತ್ತು. ಆದರೆ ಅವರು ಆಕ್ಷೇಪಣೆಯ ನಂತರ ಸರಣಿಯಲ್ಲಿನ ಕೆಲವು ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ಅವರ ವಿರುದ್ಧ ವಾರಂಟ್ ಹೊರಡಿಸಿದ ನಂತರ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ ಎಂದು ವಕೀಲ ಹೃಷಿಕೇಶ್ ಪಾಠಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ