ಎಲ್ಲಾ ಕಾಲದಲ್ಲೂ ಕೆಟ್ಟವರು ಗೆಲ್ಲಲು ಸಾಧ್ಯವಿಲ್ಲ: ಕಮಲ್ ಹಾಸನ್
Team Udayavani, Feb 14, 2017, 4:25 PM IST
ಚೆನ್ನೈ: ಇದು ಈ ನೆಲದ ಕಾನೂನು. ಎಲ್ಲಾ ಕಾಲದಲ್ಲೂ ಕೆಟ್ಟವರು ಗೆಲ್ಲಲು ಸಾಧ್ಯವಿಲ್ಲ ಎಂದು ಖ್ಯಾತ ನಟ, ನಿರ್ದೇಶಕ ಕಮಲ್ ಹಾಸನ್ ಶಶಿಕಲಾ ನಟರಾಜನ್ ದೋಷಿ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿ ವ್ಯಕ್ತಪಡಿಸಿರುವ ಅಭಿಪ್ರಾಯ ಇದು.
ಇದೊಂದು ಹಳೇ ಹಾಡು, ಆದರೂ ಅದು ಪ್ರಸ್ತುತವಾಗಿದೆ. ಕೆಟ್ಟವರು ಕೆಲವು ಬಾರಿ ಗೆಲ್ಲಬಹುದು,ಆದರೆ ಕಾಲ ಬದಲಾಗುತ್ತಲೇ ಇರುತ್ತದೆ. ಕೊನೆಗೂ ನ್ಯಾಯಕ್ಕೆ ಜಯ.ದೇಶದ ಕಾನೂನು ಮೇಲುಗೈ ಸಾಧಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ರಾಜಕಾರಣದಲ್ಲಿ ಅಧಿಕಾರದ ಗದ್ದುಗೆ ಏರಲು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಹಂಗಾಮಿ ರಾಜ್ಯಪಾಲ ಪನ್ನೀರ್ ಸೆಲ್ವಂ ನಡುವೆ ನಡೆದ ಜಂಗೀಕುಸ್ತಿಯಿಂದ ರೋಸಿ ಹೋಗಿದ್ದ ನಟ ಕಮಲ್ ಹಾಸನ್ ಆರಂಭದಲ್ಲೇ ಟ್ವೀಟ್ ಮಾಡಿದ್ದರು.
ತಮಿಳುನಾಡಿನ ಜನರಿಗೆ ಇದು ಸಕಾಲ, ತಮಗೆ ಎಂತಹ ನಾಯಕ ಬೇಕು ಎಂಬುದನ್ನು ಈಗ ನಿರ್ಧರಿಸಬೇಕಾಗಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಪನ್ನೀರ್ ಸೆಲ್ವಂಗೆ ಸಾಥ್ ನೀಡಿದ್ದರು. ಜಲ್ಲಿಕಟ್ಟು ವಿಚಾರದಲ್ಲಿಯೂ ಕಮಲ್ ಹಾಸನ್ ಅವರು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…