Rishab Shetty: ʼಲಗಾನ್ʼ ನಿರ್ದೇಶಕರೊಂದಿಗೆ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸಿನಿಮಾ
ಬಿಟೌನ್ ಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ?
Team Udayavani, Sep 3, 2023, 1:05 PM IST
ಮುಂಬಯಿ: ʼಕಾಂತಾರʼ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿದ ನಟ- ನಿರ್ದೇಶಕ ರಿಷಬ್ ಶೆಟ್ಟಿ ಸದ್ಯ ʼಕಾಂತಾರ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರ ಸಿನಿಮಾದ ಬಳಿಕ ರಿಷಬ್ ಶೆಟ್ಟಿ ಅವರ ಬೇಡಿಕೆ ಹೆಚ್ಚಾಗಿದೆ. ಅನ್ಯ ಭಾಷೆಯಿಂದಲೂ ಅವರಿಗೆ ಆಫರ್ ಗಳು ಬರುತ್ತಿದೆ.
ರಿಷಬ್ ಶೆಟ್ಟಿ ಅವರು ಬಾಲಿವುಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಬಗ್ಗೆ ʼಪಿಂಕ್ ವಿಲ್ಲಾʼದ ವರದಿಯೊದು ತಿಳಿಸಿದೆ.
ಬಾಲಿವುಡ್ ನಲ್ಲಿ ʼಲಗಾನ್ʼ ʼಸ್ವದೇಸ್ʼ, ʼಜೋಧಾ ಅಕ್ಬರ್ʼ, ಹಾಗೂ ʼಖೇಲಿನ್ ಹಮ್ ಜೀ ಜಾನ್ ಸೆʼ ಮುಂತಾದ ಸಿನಿಮಾಗಳನ್ನು ಮಾಡಿರುವ ಖ್ಯಾತ ನಿರ್ದೇಶಕ ಅಶುತೋಷ್ ಗೋವಾರಿಕರ್ ಅವರು ಕನ್ನಡದ ʼಡಿವೈನ್ ಸ್ಟಾರ್ʼ ರಿಷಬ್ ಶೆಟ್ಟಿ ಅವರೊಂದಿಗೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಲಿದ್ದಾರೆ ಎಂದು ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
ಇದನ್ನೂ ಓದಿ: Zimbabwe; ಕ್ಯಾನ್ಸರ್ ಹೋರಾಟದಲ್ಲಿ ಕೊನೆಯುಸಿರೆಳೆದ ದಿಗ್ಗಜ ಆಲ್ ರೌಂಡರ್ ಹೀತ್ ಸ್ಟ್ರೀಕ್
“ಅಶುತೋಷ್ ಸ್ಥಳೀಯ ಬೇರಿನ ಕಥೆಯೊಂದನ್ನು ತೆರೆ ಮೇಲೆ ತರುವ ತಯಾರಿಯಲ್ಲಿದ್ದಾರೆ. ಈ ಕಥೆಗೆ ರಿಷಬ್ ಅವರು ಸೂಕ್ತವೆನ್ನುವ ಕಾರಣಕ್ಕೆ ಅವರೊಂದಿಗೆ ಅಶುತೋಷ್ ಮಾತನಾಡಿದ್ದಾರೆ. ಈ ಕಾರಣದಿಂದ ಹಲವು ಬಾರಿ ರಿಷಬ್ ಅವರನ್ನು ಅಶುತೋಷ್ ಭೇಟಿಯಾಗಿದ್ದಾರೆ. ಈ ಭೇಟಿಯಲ್ಲಿ ಇಬ್ಬರು ಅತ್ಯುತ್ತಮವಾಗಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಬರಹಗಾರರಾಗಿರುವ ರಿಷಬ್ ಅಶುತೋಷ್ ಅವರೊಂದಿಗೆ ಸ್ಕ್ರಿಪ್ಟ್ನಲ್ಲಿ ಉತ್ತಮವಾಗಿ ಸಹಕರಿಸಿದ್ದಾರೆ ಮತ್ತು ಇಬ್ಬರೂ ಈಗ ಮೊದಲ ಬಾರಿಗೆ ಒಟ್ಟಿಗೆ ಕೆಲಸ ಮಾಡಲು ರೆಡಿಯಾಗಿದ್ದಾರೆ” ಎಂದು ಮೂಲವೊಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ. ಸ್ಕ್ರಿಪ್ಟ್ ಲಾಕ್ ಅಂತಿಮವಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅಶುತೋಷ್ ಚಿತ್ರವನ್ನು ಪ್ರಿ-ಪ್ರೊಡಕ್ಷನ್ ಹಂತ ಆರಂಭವಾಗಲಿದೆ. 2024 ರ ಮಧ್ಯದ ವೇಳೆಗೆ ಈ ಯೋಜನೆ ಆರಂಭವಾಗಲಿದೆ. ʼಕಾಂತಾರ-2ʼ ಶೂಟಿಂಗ್ ಮುಗಿದ ಬಳಿಕ ಈ ಸಿನಿಮಾದ ಕೆಲಸ ಆರಂಭವಾಗಲಿದೆ” ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ