ಮೋದಿ ,ರಾಹುಲ್ ಮಿಮಿಕ್ರಿ ಸುತ್ತ ಹೊಸ ವಿವಾದ !
Team Udayavani, Oct 27, 2017, 12:27 PM IST
ಮುಂಬಯಿ : ಜನಪ್ರಿಯ ಟಿವಿ ಶೋ ‘ದಿ ಗ್ರೇಟ್ ಇಂಡಿಯನ್ ಲಾಫರ್ ಚಾಲೆಂಜ್’ ನಲ್ಲಿ ಪ್ರತಿಭಾವಂತ ಮಿಮಿಕ್ರಿ ಕಲಾವಿದನೊಬ್ಬ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹಾಸ್ಯಮಯವಾಗಿ ಬಿಂಬಿಸಿರುವ ವಿಡಿಯೋ ವೈರಲ್ ಆಗಿದ್ದು, ಹೊಸ ವಿವಾದ ಸೃಷ್ಟಿಸಿದೆ.
ರಾಜಕಾರಣಿಗಳ ಮಿಮಿಕ್ರಿ ಮಾಡುವ ಮೂಲಕ ಸಾಮಾಜಿಕ ತಾಣಗಳಲ್ಲಿ ಖ್ಯಾತಿ ಪಡೆದಿದ್ದ ರಾಜಸ್ತಾನದ ಗಂಗಾನಗರದ 22 ರ ಹರೆಯದ ಶ್ಯಾಮ್ ರಂಗೀಲಾ ಎಂಬ ಕಲಾವಿದನಿಗೆ ಅಕ್ಷಯ್ ಕುಮಾರ್ ತೀರ್ಪುಗಾರರಾಗಿರುವ ಶೋಗೆ ಸ್ಪರ್ಧಿಯಾಗಿ ಆಹ್ವಾನಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಅವರ ಮಿಮಿಕ್ರಿಯನ್ನು ಹಾಸ್ಯಮಯವಾಗಿ ಮಾಡಿ ಕೇಲ ವಿಚಾರಗಳನ್ನು ಲೇವಡಿ ಮಾಡಲಾಗಿತ್ತು. ಕಾರ್ಯಕ್ರಮದ ವಿಡಿಯೋ ಟಿವಿಯಲ್ಲಿ ಪ್ರಸಾರವಾಗುವ ಮುನ್ನವೇ ಸಾಮಾಜಿಕ ತಾಣಗಳಲ್ಲಿ ಲೀಕ್ ಆಗಿ ವೈರಲ್ ಆಗಿತ್ತು.
‘ಕೆಲವರು ಈ ಬಗ್ಗೆ ವಿರೋಧ ವ್ಯಕ್ತ ಪಡಿಸಿದ್ದು, ಪ್ರಧಾನಿ ಅವರ ಮಿಮಿಕ್ರಿಯನ್ನು ಹಾಸ್ಯದ ವಸ್ತುವನ್ನಾಗಿ ಮಾಡಿಕೊಳ್ಳಬೇಡ’ ಎಂದು ಮನವಿ ಮಾಡಿದ್ದಾರೆ ಎಂದು ಶ್ಯಾಮ್ ರಂಗೀಲಾ ಹೇಳಿಕೊಂಡಿದ್ದಾರೆ.
‘ನನಗಾಗಲಿ, ಚಾನಲ್ಗಾಗಲಿ ಯಾರನ್ನೂ ಲೇವಡಿ ಮಾಡುವ ಉದ್ದೇಶವೇ ಇರಲಿಲ್ಲ. ಹಾಸ್ಯ ಮಾಡುವುದೇ ಮುಖ್ಯ ಉದ್ದೇಶವಾಗಿತ್ತು. ವಿವಾದವಾಗುವುದು ನನಗೆ ಇಷ್ಟವಿಲ್ಲ.ಟಿವಿಯಲ್ಲಿ ಪ್ರಸಾರವಾಗದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಇದು ಹೇಗೆ ಸಾಧ್ಯವಾಯಿತು ಎನ್ನುವುದು ನನಗೆ ತಿಳಿದಿಲ್ಲ. ಪ್ರೊಡಕ್ಷನ್ ಹೌಸ್ನ ಕೆಲವರು ಹರಿಯ ಬಿಟ್ಟಿರಬಹುದು’ಎಂದು ನೋವು ತೋಡಿಕೊಂಡಿದ್ದಾರೆ.
ಶೂಟಿಂಗ್ ನಡೆದು ತಿಂಗಳ ಬಳಿಕ ಮೋದಿ ಮತ್ತು ರಾಹುಲ್ ಅವರ ಕುರಿತಾಗಿನ ಹಾಸ್ಯ ವಿವಾದಕ್ಕೆ ಕಾರಣವಾಗುತ್ತದೆ ಎಂದು ತಿಳಿದು ಅತ್ಯಲ್ಪ ಅವಧಿಯೊಳಗೆ ಹೊಸ ವಿಚಾರದೊಂದಿಗೆ ಹಾಸ್ಯ ಮಾಡಲು ನನಗೆ ಚಾನೆಲ್ ಹೇಳಿತ್ತು. ಆದರೆ 1 ವಾರದ ಒಳಗೆ ನನಗೆ ಸಿದ್ದವಾಗಿ ಬಂದು ಸ್ಫರ್ಧಿಸುವುದು ಕಷ್ಟವಾಗಿತ್ತು. ಇದು ನಾನು ಸ್ಪರ್ಧೆಯಿಂದ ಹೊರ ಬೀಳಲು ಪ್ರಮುಖ ಕಾರಣ ಎಂದು ರಂಗೀಲಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ