“ಬಾಹುಬಲಿ” ನಟನ ಪತ್ನಿ ಆತ್ಮಹತ್ಯೆಗೆ ಶರಣು; ವರದಕ್ಷಿಣೆ ಕಿರುಕುಳ ದೂರು, ಬಂಧನ
Team Udayavani, Aug 8, 2019, 12:20 PM IST
ಹೈದರಾಬಾದ್: ಬಾಹುಬಲಿ ಸಿನಿಮಾ (ಟೆಲಿವಿಷನ್) ನಟ ಮಧು ಪ್ರಕಾಶ್ ಪತ್ನಿ ಭಾರತಿ ಹೈದರಾಬಾದ್ ನಿವಾಸದಲ್ಲಿ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದ್ದು, ಏತನ್ಮಧ್ಯೆ ಮಧು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ ಎಂದು ವರದಿ ವಿವರಿಸಿದೆ.
ಎಸ್.ಎಸ್. ರಾಜಮೌಳಿಯ ಬಾಹುಬಲಿ ಸಿನಿಮಾದಲ್ಲಿ ಮಧು ಪ್ರಕಾಶ್ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಮಧು ಪ್ರಕಾಶ್ ನಡವಳಿಕೆ ಸರಿ ಇಲ್ಲ ಎಂದು ಆರೋಪಿಸಿ ಇಬ್ಬರ ನಡುವೆಯೂ ಗಲಾಟೆ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸಂಜೆ 7.30ಕ್ಕೆ ಮಧು ಜಿಮ್ ಗೆ ಹೋಗಿ ವಾಪಸ್ ಮನೆಗೆ ಬಂದಾಗ ಪತ್ನಿ ಭಾರತಿ ತನ್ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಹೈದರಬಾದ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ವರದಕ್ಷಿಣೆಗಾಗಿ ಮಧು ಪತ್ನಿಗೆ ಕಿರುಕುಳ ನೀಡುತ್ತಿದ್ದ, ಅಷ್ಟೇ ಅಲ್ಲ ಆಕೆ ಮೇಲೆ ಹಲ್ಲೆ ನಡೆಸುತ್ತಿದ್ದ. ಇದರಿಂದಾಗಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಭಾರತಿ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ಪೊಲೀಸರು ಮಧು ಪ್ರಕಾಶ್ ಅವರನ್ನು ಬಂಧಿಸಿದ್ದು, ಗುರುವಾರ ಕೋರ್ಟ್ ನ್ಯಾಯಾಂಗ ಬಂಧನಕ್ಕೊಪ್ಪಿಸಿರುವುದಾಗಿ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.
ಮಧು ಮತ್ತು ಭಾರತಿ 2015ರಲ್ಲಿ ವಿವಾಹವಾಗಿದ್ದರು. ಇಬ್ಬರೂ ಹೈದರಾಬಾದ್ ನಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ತನ್ನ ಪತಿ ಮಧು ತನ್ನ ಸಹನಟಿಯೊಬ್ಬಳ ಜತೆ ಸಂಬಂಧ ಹೊಂದಿದ್ದು, ತನಗೆ ಮೋಸ ಮಾಡುತ್ತಿರುವುದಾಗಿ ಭಾರತಿ ಆರೋಪಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ