ʼಪಠಾಣ್ʼ ವಿವಾದ: ಹನುಮಾನ್ ಚಾಲೀಸಾ ಪಠಿಸುತ್ತಾ ಶಾರುಖ್ ಶೂಟಿಂಗ್ ಸೆಟ್ ಗೆ ನುಗ್ಗಿದ ಹಿಂದೂ ಕಾರ್ಯಕರ್ತರು
Team Udayavani, Dec 17, 2022, 3:55 PM IST
ಮಧ್ಯ ಪ್ರದೇಶ: ಶಾರುಖ್ ಖಾನ್ ಅಭಿನಯದ ʼಪಠಾಣ್ʼ ಸಿನಿಮಾ ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ಸಿನಿಮಾದ ಹಾಡೊಂದು ಹಿಂದೂ ಧರ್ಮಕ್ಕೆ ನಿಂದಿಸುವ ಹಾಗೆ ಚಿತ್ರಿತವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣದಲ್ಲಿ ಸಿನಿಮಾವನ್ನು ಬಾಯ್ಕಟ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ʼಪಠಾಣ್ʼ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿಕೊಂಡು ಕುಣಿದಿದ್ದಾರೆ ಹಾಗೂ ಹಾಡಿನ ಸಾಹಿತ್ಯ ಹಿಂದೂ ಧರ್ಮವನ್ನು ಕೀಳಾಗಿ ತೋರಿಸುತ್ತದೆ ಎಂದು ʼಬೇಷರಂ ರಂಗ್ʼ ಹಾಡಿನ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆಯೇ ಶಾರುಖ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ಸೆಟ್ ಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿ, ಪ್ರತಿಭಟನೆ ನಡೆಸಿದ ಘಟನೆ ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.
ರಾಜ್ ಕುಮಾರ್ ಹಿರಾನಿ ʼ ಡಂಕಿʼ ಸಿನಿಮಾದ ಚಿತ್ರೀಕರಣದ ಮಧ್ಯ ಪ್ರದೇಶದದಲ್ಲಿ ಕಳೆದ ಮೂರು ದಿನಗಳಿಂದ ಭೇದಘಾಟ್ ಮತ್ತು ಧುಂಧರ್ ಪ್ರದೇಶದಲ್ಲಿ ನಡೆಯುತ್ತಿದೆ. ಶುಕ್ರವಾರ ಶೂಟಿಂಗ್ ಸ್ಪಾಟ್ ಗೆ ಭಜರಂಗ ದಳ , ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಬಂದು ಶಾರುಖ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿ, ಚಿತ್ರೀಕರಣದ ಸ್ಥಳದಲ್ಲಿ ಬೀಡು ಬಿಟ್ಟಿದ್ದರು. ಬಳಿಕ ಪೊಲೀಸರು ಪ್ರತಿಭಟನಾನಿರತರನ್ನು ಸ್ಥಳದಿಂದ ಕಳುಹಿಸಿದ್ದಾರೆ.
ಶಾರುಖ್ ಖಾನ್ ಸೇರಿದಂತೆ ಚಿತ್ರ ತಂಡದ ಪ್ರಮುಖ ಕಲಾವಿದರು ಶೂಟಿಂಗ್ ನಲ್ಲಿ ಭಾಗಿಯಾಗಿಲ್ಲ. ಸಿನಿಮಾದ ಇತರ ದೃಶ್ಯಗಳು ಅಲ್ಲಿ ಚಿತ್ರೀಕರಣವಾಗುತ್ತಿತ್ತು ಎಂದು ವರದಿ ತಿಳಿಸಿದೆ.
2023 ರ ಜನವರಿ 25 ಕ್ಕೆ ಶಾರುಖ್ ಖಾನ್ ಅವರ ʼಪಠಾಣ್ʼ ಸಿನಿಮಾ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ