ಫೆನಾಯಿಲ್ ಕುಡಿತೀನಿ..ಬಿಗ್ ಟ್ರಬಲ್ ಆದ ಪ್ರಥಮ್! ಪೊಲೀಸರ ಪರದಾಟ
Team Udayavani, Apr 6, 2017, 12:31 PM IST
ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಬಿಗ್ಬಾಸ್ ಖ್ಯಾತಿಯ ಪ್ರಥಮ್ ಹೈಡ್ರಾಮಾ ಮುಂದುವರಿದ್ದು, ಇದರಿಂದಾಗಿ ಪೊಲೀಸರು ಪೀಕಲಾಟ ಅನುಭವಿಸುವಂತಾಗಿದೆ.
ಆಸತ್ರೆಯಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಸಮಸ್ಯೆ ಏನೆಂಬುದು ಇನ್ನೂ ಅರ್ಥವಾಗಿಲ್ಲ. ವಿಚಿತ್ರವಾಗಿ ವರ್ತನೆ ತೋರುತ್ತಿದ್ದು, ಪೊಲೀಸರು ಇದೀಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ ಐಪಿಸಿ ಸೆಕ್ಷನ್ 304 ರ ಅಡಿಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಫೋರ್ಟಿಸ್ ಆಸ್ಪತ್ರೆಯಲ್ಲಿ ಹೈಡ್ರಾಮಾ ಮಾಡಿದ ಪ್ರಥಮ್ ಪೊಲೀಸರು ಬಂದಾಗ ಶೌಚಾಲಯದಲ್ಲಿ ಅಡಗಿ ಕುಳಿತು, ಒಳಗೆ ಬಂದರೆ ಫೆನಾಯಿಲ್ ಕುಡಿಯುವುದಾಗಿ ಕೂಗಿಕೊಂಡಿದ್ದರು. ಕೂಡಲೇ ಅವರನ್ನು ಬಾಗಿಲು ಒಡೆದು ಹೊರಗೆ ತರಲಾಗಿತ್ತು. ಪೊಲೀಸರ ಸೂಚನೆಯಂತೆ ಚಿಕಿತ್ಸೆಗೆಂದು ನಿಮಾನ್ಸ್ಗೆ ಕರೆದೊಯ್ದು ವಾಪಾಸ್ ಕರೆತರಲಾಗಿತ್ತು.
ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಇನ್ನೂ ವಿಚಿತ್ರ ವರ್ತನೆ ಮುಂದುವರೆದಿದೆ. ರಾತ್ರಿ ಪೊಲೀಸರು ಹೇಳಿಕೆ ಪಡೆಯಲು ಯತ್ನಿಸಿದಾಗ ಸಮರ್ಪಕ ಉತ್ತರ ನೀಡಿರಲಿಲ್ಲ.
ಬುಧವಾರ ಮುಂಜಾನೆ ಆತ್ಮಹತ್ಯೆ ಯತ್ನಿಸಿದ ಪ್ರಥಮ್ ವಿಡಿಯೋ ಚಿತ್ರೀಕರಣಗೊಳಿಸಿ ಅದನ್ನು ಫೇಸ್ಬುಕ್ನಲ್ಲಿ ಅಪ್ ಲೋಡ್ ಮಾಡಿದ್ದರಿಂದ ವೈರಲ್ ಆಗಿ ಸುದ್ದಿಗೆ ಗ್ರಾಸವಾಗಿತ್ತು.
ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ವಿಜೇತನಾಗಿದ್ದರಿಂದ ಗಳಿಸಿದ್ದ ಬಹುಮಾನ ಹಣ ತನಗೂ ನೀಡುವಂತೆ ಸ್ನೇಹಿತ ಲೋಕೇಶ್ ಕಿರುಕುಳ ನೀಡುತ್ತಿದ್ದರಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಪ್ರಥಮ್ ತಿಳಿಸಿದ್ದು, ಕೆಲವು ದೃಶ್ಯ ಮಾಧ್ಯಮಗಳ ವಿರುದ್ಧವೂ ಕಿರುಕುಳ ಆರೋಪ ಮಾಡಿದ್ದಾರೆ.
ಫೇಸ್ಬುಕ್ ಲೈವ್ನಲ್ಲಿ ಆತ್ಮಹತ್ಯೆಗೆ ಕಾರಣ ನೀಡಿ, 2 ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ