ಮುರಳೀಧರನ್ ಬಯೋಪಿಕ್ ಗೆ ಯಾಕಿಷ್ಟು ತೊಂದರೆ? ನಿಂತುಹೋಗುತ್ತಾ ವಿಜಯ್ ಸೇತುಪತಿ ಚಿತ್ರ


Team Udayavani, Oct 19, 2020, 4:37 PM IST

ಮುರಳೀಧರನ್ ಬಯೋಪಿಕ್ ಗೆ ಯಾಕಿಷ್ಟು ತೊಂದರೆ? ನಿಂತುಹೋಗುತ್ತಾ ವಿಜಯ್ ಸೇತುಪತಿ ಚಿತ್ರ

ಮಣಿಪಾಲ: ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಲನಚಿತ್ರ ತೆರೆಗೆ ಬರಲು ಸಜ್ಜಾಗಿದೆ. ತಮಿಳು ನಟ ವಿಜಯ್ ಸೇತುಪತಿ ಅವರು ಮುರಳೀಧರನ್ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದು, ಚಿತ್ರಕ್ಕೆ “800” ಎಂದು ಹೆಸರಿಡಲಾಗಿದೆ.

ಆದರೆ ಚಿತ್ರದ ಪೋಸ್ಟರ್ ಘೋಷಣೆಯಾಗುತ್ತಲೇ ತಮಿಳುನಾಡಿನಲ್ಲಿ ವಿರೋಧ ಆರಂಭವಾಗಿದೆ. ವಿಜಯ ಸೇತುಪತಿಯನ್ನು ತಮಿಳು ವಿರೋಧಿ ಎನ್ನುವಂತೆ ಚಿತ್ರಿಸಲಾಗುತ್ತಿದೆ.

ಯಾಕೆ ವಿರೋಧ?

ಮುತ್ತಯ್ಯ ಮುರಳೀಧರನ್ ಶ್ರೀಲಂಕಾದ ಕ್ರಿಕೆಟಿಗ. ಶ್ರೀಲಂಕಾದಲ್ಲಿರುವ ತಮಿಳು ಜನರ ಮೇಲೆ ಅಲ್ಲಿನ ಸರ್ಕಾರ ದಬ್ಬಾಳಿಕೆ ಮಾಡಿದೆ, ಅನೇಕ ತಮಿಳರನ್ನು ಹತ್ಯೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ತಮಿಳರ ಪರವಾಗಿ ಮುತ್ತಯ್ಯ ಮುರಳೀಧರನ್ ಮಾತನಾಡಿರಲಿಲ್ಲ. ಇಷ್ಟೆಲ್ಲಾ ಆಗಿರುವಾಗ ತಮಿಳು ನಟನೊಬ್ಬ ಶ್ರೀಲಂಕಾ ಧ್ವಜದ ಜೆರ್ಸಿಯನ್ನು ತೊಟ್ಟು ಸಿನಿಮಾ ಮಾಡಲು ಮುಂದಾಗಿರುವುದು ದುರಂತ ಎಂದು ಟೀಕಿಸಲಾಗುತ್ತಿದೆ. ನಟ ವಿಜಯ್ ಸೇತುಪತಿ ತಮ್ಮ ನಿರ್ಧಾರವನ್ನು ಬದಲಿಸಬೇಕು ಎಂದು ಆಗ್ರಹಿಸಿದ್ದಾರೆ. ಕೆಲ ದಿನಗಳ ಹಿಂದೆ ಈ ವಿಚಾರ ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿತ್ತು.

ಇದನ್ನೂ ಓದಿ:ಹರಿಪ್ರಿಯಾ ಕೈಯಲ್ಲಿ ಐದು ಸಿನಿಮಾ

ನಿರ್ಮಾಪಕರು ಹೇಳುವುದೇನು?

ಮುರಳೀಧರನ್ ಬಯೋಪಿಕ್

ಮುತ್ತಯ್ಯ ಮುರಳೀಧರನ್ ಅವರ ಜೀವನಾಧಾರಿತ ಚಿತ್ರದ ಬಗ್ಗೆ ರಾಜಕೀಯ ಪ್ರೇರಿತ ಟೀಕೆಗಳು ಕೇಳಿ ಬರುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ “800” ಚಿತ್ರ ಸಂಪೂರ್ಣ ಕ್ರೀಡಾ ಚಿತ್ರವಾಗಿರುತ್ತದೆ. ಈ ಚಿತ್ರವು ತಮಿಳು ಕುಟುಂಬದಲ್ಲಿ ಜನಿಸಿ ವಿಶ್ವಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದವರ ಜೀವನಾಧಾರಿತ ಚಿತ್ರವಷ್ಟೇ ಎಂದು ಚಿತ್ರ ನಿರ್ಮಾಣ ಸಂಸ್ಥೆ ತಿಳಿಸಿದೆ.

ಚಿತ್ರವನ್ನು ದರ್ ಮೋಷನ್ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ. ಎಂ.ಎಸ್ ಶ್ರೀಪತಿ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ವಿಜಯ್ ಸೇತುಪತಿ ಅವರು ಮುರಳೀಧರನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಬಿಟ್ಟರೆ ಉಳಿದ ಯಾವುದೇ ನಟರ ಆಯ್ಕೆ ಅಂತಿಮವಾಗಿಲ್ಲ. 2021ರ ಆರಂಭದಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಭಾರತ, ಶ್ರೀಲಂಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಶೂಟಿಂಗ್ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.