ತೆರೆ ಮೇಲೆ ಬರಲಿದೆ ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಬಯೋಪಿಕ್
Team Udayavani, Dec 14, 2020, 9:00 PM IST
ನವದೆಹಲಿ : ಸಾಧಕರ ಜೀವನ ಚರಿತ್ರೆ ಹಾಗೂ ಯಶಸ್ಸನ್ನು ತೆರೆ ಮೇಲೆ ತರುವ ಬಯೋಪಿಕ್ ಚಿತ್ರಗಳು ಬಾಲಿವುಡ್ ನಲ್ಲಿ ಬೇಕಾದ್ದಷ್ಟು ಬಂದಿವೆ. ಸದ್ಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಭಾರತದ ವಿಶ್ವನಾಥನ್ ಆನಂದ್ ಅವರ ಜೀವನವನ್ನು ತೆರೆಮೇಲೆ ತರುವ ಸಿದ್ದತೆಯಲ್ಲಿದೆ ಬಾಲಿವುಡ್.
ಚೆಸ್ ನಲ್ಲಿ 5 ಬಾರಿ ವಿಶ್ವ ಚಾಂಪಿಯನ್ ಪಟ್ಟವನ್ನು ಗೆದ್ದಿರುವ ವಿಶ್ವನಾಥನ್ ಆನಂದ್ ಅವರ ಬದುಕಿನ ಕಥೆಯನ್ನು ದೊಡ್ಡ ಪರದೆಯಲ್ಲಿ ಪ್ರೇಕ್ಷಕರ ಮುಂದೆ ತರುವ ಬಯೋಪಿಕ್ ಅನೌನ್ಸ್ ಆಗಿದ್ದು, ಈ ಸುದ್ದಿಯನ್ನು ಬಾಲಿವುಡ್ ಸಿನಿಮಾ ವಿತರಕ ತರಣ್ ಆದರ್ಶ್ ಟ್ವೀಟರ್ ನಲ್ಲಿ ಖಚಿತಪಡಿಸಿದ್ದಾರೆ. ಚೆಸ್ ಗ್ರ್ಯಾಂಡ್ ಮಾಸ್ಟರ್ ಆನಂದ್ ಜೀವನಾಧಾರಿತ ಚಿತ್ರವನ್ನು ಮಾಡಲು ಬಾಲಿವುಡ್ ಸಜ್ಜಾಗಿದ್ದು, ಈ ಚಿತ್ರವನ್ನು ಆನಂದ್ ಎಲ್ ರೈ ನಿರ್ದೇಶಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ರಾಮ & ಆಂಜನೇಯ ಅವತಾರದಲ್ಲಿ ದರ್ಶನ್-ಸುದೀಪ್ : ಫೋಟೋ ವೈರಲ್
ಚಿತ್ರದ ಟೈಟಲ್ ಹಾಗೂ ಕಲಾವಿದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸಿನಿ ಪ್ರೇಕ್ಷಕರಲ್ಲಿ ಚಿತ್ರದ ನಾಯಕ ಯಾರು ಆಗಲಿದ್ದಾರೆ ಎನ್ನುವ ಕುತೂಹಲ ಮೂಡಿದ್ದು, ಚರ್ಚೆಯಲ್ಲಿ ಅಭಿಷೇಕ್ ಬಚ್ಬನ್ ಹೆಸರು ಮುನ್ನಡೆಯಲ್ಲಿದೆ.ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿಯಿಲ್ಲ. ಸದ್ಯ ಆನಂದ್ ಎಲ್ ರೈ ಅವರು ಅತ್ರಂಗಿ ರೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ಚೆಸ್ ಮಾಂತ್ರಿಕ ವಿಶ್ಬನಾಥನ್ ಆನಂದ್ ಬಯೋಪಿಕ್ ಕೈಗೆತ್ತಿಕೊಳ್ಳುವ ಸಾದ್ಯತೆಯಿದೆ.
BIOPIC ON VISWANATHAN ANAND… A biopic on #Indian chess grandmaster #ViswanathanAnand has been planned… The biopic – not titled yet – will be directed by Aanand L Rai… Produced by Sundial Entertainment [Mahaveer Jain] and Colour Yellow Productions [Aanand L Rai]. pic.twitter.com/fNBtdza2Dq
— taran adarsh (@taran_adarsh) December 13, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ