ಆಮಿರ್ ಹೊಸ ಚಿತ್ರ ‘ಲಾಲ್ ಸಿಂಗ್ ಛಡ್ಡಾ’ ದೇಶಾದ್ಯಂತ ನೂರು ಸ್ಥಳಗಳಲ್ಲಿ ಚಿತ್ರೀಕರಣ


Team Udayavani, Sep 19, 2019, 7:45 PM IST

Aamir-Khan-726

ಮುಂಬಯಿ: ಬಾಲಿವುಡ್ ನ ಮಿ. ಪರ್ಫೆಕ್ಟ್ ಆಮಿರ್ ಖಾನ್ ಅವರ ಮುಂಬರುವ ಚಿತ್ರ ‘ಲಾಲ್ ಸಿಂಗ್ ಛಡ್ಡಾ’ ಚಿತ್ರೀಕರಣ ತಯಾರಿ ಭರದಿಂದ ಸಾಗುತ್ತಿದೆ. ನಟ ಆಮೀರ್ ಖಾನ್ ಅವರು ಈ ಚಿತ್ರದ ಚಿತ್ರೀಕರಣಕ್ಕಾಗಿ ಪರ್ಫೆಕ್ಟ್ ಲೊಕೇಶನ್ ಗಳ ಹುಡುಕಾಟದಲ್ಲಿದ್ದಾರೆ.

ವರದಿಗಳ ಪ್ರಕಾರ ಈ ಚಿತ್ರವನ್ನು ದೇಶದ ವಿವಿಧ ಭಾಗಗಳಲ್ಲಿ ಸುಮಾರು 100 ಕಡೆ ಶೂಟಿಂಗ್ ಮಾಡುವ ಇರಾದೆ ಚಿತ್ರತಂಡದ್ದಾಗಿದೆ. ಈ ಚಿತ್ರದ ನಾಯಕನ ಪಾತ್ರದ ಜೀವನ ಯಾತ್ರೆ ಹೀಗೆ ಬೇರೆ ಬೇರೆ ಕಡೆಗಳಲ್ಲಿ ಸಾಗುವುದರಿಂದ ಈ ಚಿತ್ರಕ್ಕೆ ವಿಭಿನ್ನ ಸ್ಥಳಗಳಲ್ಲಿ ಚಿತ್ರೀಕರಣ ಮಾಡುವುದು ಅನಿವಾರ್ಯವಾಗಲಿದೆ. ಹಾಗಾಗಿ ತನ್ನ ಚಿತ್ರಗಳಲ್ಲಿ ಯಾವತ್ತೂ ಸ್ವಾಭಾವಿಕತೆಗೆ ಹೆಚ್ಚಿನ ಒತ್ತು ನೀಡುವ ಆಮಿರ್ ಖಾನ್ ಈ ಚಿತ್ರಕ್ಕಾಗಿಯೂ ಸಹ ದೇಶಾದ್ಯಂತ ಇರುವ ಉತ್ತಮ ಚಿತ್ರೀಕರಣ ಸ್ಥಳಗಳನ್ನು ಹುಡುಕುವಂತೆ ತನ್ನ ತಂಡಕ್ಕೆ ಸೂಚಿಸಿದ್ದಾರೆ.

ನಾಯಕನ ಜೀವನವನ್ನು ವಿವಿಧ ಕಾಲಘಟ್ಟಗಳಲ್ಲಿ ತೆರೆ ಮೇಲೆ ಕಾಣಿಸಲು ಈ ವಿಭಿನ್ನ ಲೊಕೇಷನ್ ಗಳು ಸಹಕಾರಿಯಾಗಲಿವೆ ಹಾಗಾಗಿ ‘ಲಾಲ್ ಸಿಂಗ್ ಛಡ್ಡಾ’ ಚಿತ್ರವು ದೆಹಲಿ, ಮುಂಬಯಿ, ಗುಜರಾತ್, ಹೈದ್ರಾಬಾದ್, ಬೆಂಗಳೂರು ಮತ್ತು ಕೊಲ್ಕೊತ್ತಾಗಳಲ್ಲಿ ಚಿತ್ರೀಕರಣಗೊಳ್ಳಲಿದೆ ಎಂದು ತಿಳಿದುಬಂದಿದೆ. ಹೀಗಾದಲ್ಲಿ ದೇಶದ ವಿವಿಧ ಕಡೆ ನೂರಕ್ಕೂ ಹೆಚ್ಚು ಸ್ಥಳಗಲ್ಲಿ ಚಿತ್ರೀಕರಣಗೊಂಡ ಮೊದಲ ಬಾಲಿವುಡ್ ಚಿತ್ರ ಇದಾಗಲಿದೆ ಎನ್ನಲಾಗುತ್ತಿದೆ.

ಲಾಲ್ ಸಿಂಗ್ ಛಡ್ಡಾ ಚಿತ್ರದ ಚಿತ್ರೀಕರಣವು ಇದೇ ನವಂಬರ್ 01ರಿಂದ ಪ್ರಾರಂಭವಾಗಲಿದ್ದು, ‘ಸೀಕ್ರೇಟ್ ಸೂಪರ್ ಸ್ಟಾರ್’ ಚಿತ್ರದ ನಿರ್ದೇಶಕ ಅದ್ವೈತ್ ಚಂದನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

‘ಲಾಲ್ ಸಿಂಗ್ ಛಡ್ಡಾ’ ಚಿತ್ರವು 1994ರಲ್ಲಿ ಹಾಲಿವುಡ್ ನಲ್ಲಿ ತೆರೆಕಂಡ ಟಾಮ್ ಹಾಂಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದ ‘ಫಾರೆಸ್ಟ್ ಗಂಪ್’ ಎಂಬ ಜನಪ್ರಿಯ ಚಿತ್ರದ ಹಿಂದಿ ಅವತರಣಿಕೆಯಾಗಿದೆ. ಅಮೆರಿಕಾದ್ಯಂತ ವಿವಿಧ ಘಟನಾವಳಿಗಳಿಗೆ ಸಾಕ್ಷಿಯಾಗುವ ಮತ್ತು ತನಗೆ ಗೊತ್ತಿಲ್ಲದಂತೆಯೇ ಇನ್ನೊಂದಷ್ಟು ಘಟನೆಗಳನ್ನು ಪ್ರಭಾವಿಸುವ ಕಡಿಮೆ ಬುದ್ದಿಮತ್ತೆ (ಐ.ಕ್ಯು.) ಹೊಂದಿರುವ ಆದರೆ ಕರುಣಾಮಯಿ ಹೃದಯವಿರುವ ವ್ಯಕ್ತಿಯೊಬ್ಬನ ಸುತ್ತ ಸುತ್ತುವ ಕಥೆ ಇದಾಗಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.