ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಬಾಲಿವುಡ್ ನಟ
ದೇಶದಲ್ಲಿ ಕೆಲವರು ದ್ವೇಷ ಹರಡುತ್ತಿದ್ದಾರೆ...
Team Udayavani, Nov 11, 2022, 4:58 PM IST
ನಾಂದೇಡ್: ಕಾಂಗ್ರೆಸ್ನ ‘ಭಾರತ್ ಜೋಡೋ ಯಾತ್ರೆ’ ಮಹಾರಾಷ್ಟ್ರಕ್ಕೆ ಬಂದ ನಂತರ, ರಾಜಕೀಯ ಮುಖಂಡರು, ಕಲಾವಿದರು ಮತ್ತು ಲೇಖಕರು ಕೂಡ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿದ್ದಾರೆ. ನಟಿ ಪೂಜಾ ಭಟ್ ಅವರನ್ನು ಭೇಟಿ ಮಾಡಿದ ನಂತರ ಬಾಲಿವುಡ್ ನಟ ಸುಶಾಂತ್ ಸಿಂಗ್ ಕೂಡ ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗವಹಿಸಿದ್ದರು.
‘ಭಾರತ್ ಜೋಡೋ ಯಾತ್ರೆ’ ವೇದಿಕೆಯಲ್ಲಿಂದು ಮಾತನಾಡಿದ ಅವರು, ಬಿಜೆಪಿಯ ಹೆಸರು ಹೇಳದೆಯೇ ವಾಗ್ದಾಳಿ ನಡೆಸಿದರು. ದೇಶದಲ್ಲಿ ಕೆಲವರು ದ್ವೇಷ ಹರಡುತ್ತಿದ್ದಾರೆ ಎಂದು ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಆದರೆ ಈ ಎಲ್ಲ ದ್ವೇಷದ ರಾಜಕಾರಣದಲ್ಲಿ ಪ್ರೀತಿಯ ಹಾದಿ ಹಿಡಿಯುವುದು ಕಷ್ಟವಾದದ್ದು, ರಾಹುಲ್ ಗಾಂಧಿ ಪ್ರೀತಿಯ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿದ ಸುಶಾಂತ್, “ಗೆಲುವಿನ ಅವಶ್ಯಕತೆಯಿದೆ, ನಂಬಿಕೆ ಕಳೆದುಕೊಳ್ಳದೆ ಕೊನೆಯವರೆಗೂ ಹೋರಾಡುವುದು ಅಗತ್ಯವಾಗಿದೆ. ಏಕೆಂದರೆ ಅದರ ನಂತರ ನಾವು ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ” ಎಂದು ಹೇಳಿದರು.
“आपने प्यार की राह चुनी है – मुश्किल है पर हम जीतेंगे ज़रूर” सुशांत सिंह
सच के साथ खड़े होने के लिए हिम्मत चाहिए – आपके हौसले को सलाम @sushant_says pic.twitter.com/4qiAidhpvo
— Supriya Shrinate (@SupriyaShrinate) November 10, 2022
ಈ ದೇಶವನ್ನು ಸಾಂವಿಧಾನಿಕವಾಗಿ ನಡೆಸಲು ಪ್ರಯತ್ನಿಸುತ್ತಿರುವವರು ಗೆಲ್ಲುತ್ತಾರೆ ಎಂದು ನಂಬಿಕೆ ವ್ಯಕ್ತಪಡಿಸಿದರು. ಇವತ್ತಲ್ಲದಿದ್ದರೂ ನಾಳೆ ನಮ್ಮದೇ ಗೆಲುವು ಎಂದು ಅವರು ಅಭಿಪ್ರಾಯಪಟ್ಟರು.
Because the world is comprised of those that talk and those that walk their talk. Bravo @sushant_says you prove again that eventually we are what we do & not merely what we say we will do! #BharatJodoYatra #Maharashtra #loveheals pic.twitter.com/S8AFSNbBRl
— Pooja Bhatt (@PoojaB1972) November 10, 2022
ನಟ ಸುಶಾಂತ್ ಸಿಂಗ್ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಮುನ್ನ ನಟಿ ಪೂಜಾ ಭಟ್ ಕೂಡ ರ್ಯಾಲಿಯಲ್ಲಿ ಭಾಗವಹಿಸಿದ್ದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ನಂತರ ಸುಶಾಂತ್ ಸಿಂಗ್ ಟ್ವೀಟ್ ಮಾಡಿ, ನೀವು ಕೇವಲ ಮಾತನಾಡುತ್ತಿಲ್ಲ, ನಿಮ್ಮ ವಿಚಾರದಲ್ಲಿ ನೀವು ದೃಢವಾಗಿ ನಿಲ್ಲುತ್ತೀರಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ