ಇನ್ಮುಂದೆ ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್ ಖಾನ್ !
Team Udayavani, Oct 17, 2021, 1:31 PM IST
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ, ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಶನಿವಾರ, ಎನ್ಸಿಬಿ ಕಚೇರಿಯಲ್ಲಿ ಆಪ್ತ ಸಮಾಲೋಚನೆ ನಡೆಸಲಾಯಿತು. ಈ ವೇಳೆ, ಆರ್ಯನ್ಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಲಾಯಿತು.
ಅಧಿಕಾರಿಗಳು, ತಜ್ಞರು ನೀಡಿದ ಸಲಹೆ ಸ್ವೀಕರಿಸಿದ ಆರ್ಯನ್, ಮುಂದೆ ತನ್ನೆಲ್ಲಾ ದುಶ್ಚಟಗಳನ್ನು ಬಿಡುವುದಾಗಿ ವಾಗ್ಧಾನ ನೀಡಿದ್ದಾನೆ. ಮುಂದಿನ ದಿನಗಳಲ್ಲಿ ತಾನು ಸಮಾಜದ ಬಡವರ, ದೀನದಲಿತರ ಉದ್ಧಾರಕ್ಕಾಗಿ ಶ್ರಮಿಸುವುದಾಗಿ ತಿಳಿಸಿದ್ದಾನೆ. ಜತೆಗೆ, ಡ್ರಗ್ಸ್ ಪ್ರಕರಣ ಭೇದಿಸಿರುವ ಎನ್ಸಿಬಿ ಪ್ರಾಂತೀಯ ಆಯುಕ್ತ ಸಮೀರ್ ವಾಂಖೆಡೆಯವರೇ ಮುಂದೊಂದು ದಿನ ತಮ್ಮನ್ನು ಮೆಚ್ಚಿಕೊಳ್ಳುವಂಥ ಕಾರ್ಯ ಮಾಡುವುದಾಗಿ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿದೆ.
23 ವರ್ಷದ ಆರ್ಯನ್ ಪ್ರಸ್ತುತ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಸಿದ ಡ್ರಗ್ಸ್ ರೇವ್ ಪಾರ್ಟಿ ಪ್ರಕರಣದಲ್ಲಿ ಆತನನ್ನು ಎನ್ಸಿಬಿ ಬಂಧಿಸಿದೆ. ಆರ್ಯನ್ ಹೊರತಾಗಿ ಎನ್ಸಿಬಿ ಇತರ 7 ಆರೋಪಿಗಳನ್ನು ಬಂಧಿಸಿದೆ. ಈ ಪೈಕಿ ಇಬ್ಬರು ಆರ್ಯನ್ ಹಳೆಯ ಸ್ನೇಹಿತರಿದ್ದಾರೆ. ಆರೋಪಿಗಳ ಪೈಕಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ಜೈಲಿಗೆ ಕಳುಹಿಸುವ ಮೊದಲು ಇವರೆಲ್ಲರಿಗೂ ಕೂಡ ಆಪ್ತಸಮಾಲೋಚನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?