‘ಮುಂದಿನ ಸಿನಿಮಾದಲ್ಲಿ ಚಾನ್ಸ್ ಕೊಡಿ’:ಆಲಿಯಾ ಬಳಿ ಅವಕಾಶ ಕೇಳಿದ ನಟ ಶಾರುಖ್ ಖಾನ್
Team Udayavani, Jul 4, 2021, 4:45 PM IST
ಮುಂಬೈ : ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅವರು ನಟಿ ಹಾಗೂ ನಿರ್ಮಾಪಕಿ ಆಲಿಯಾ ಭಟ್ ಅವರ ಬಳಿ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾರೆ. ಇದಕ್ಕೆ ಆಲಿಯಾ ಕೂಡ ರಿಯಾಕ್ಟ್ ಮಾಡಿದ್ದಾರೆ.
ಆಲಿಯಾ ಭಟ್ ‘ಡಾರ್ಲಿಂಗ್ಸ್’ ಶೀರ್ಷಿಕೆಯ ಹೊಸ ಚಿತ್ರದಲ್ಲಿ ನಟನೆಯ ಜೊತೆ ನಿರ್ಮಾಪಕಿಯೂ ಆಗಿದ್ದಾರೆ. ಆ ಚಿತ್ರದ ಮೊದಲ ದಿನದ ಚಿತ್ರೀಕರಣದ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದಕ್ಕೆ ಕಮೆಂಟ್ ಮಾಡಿರುವ ಶಾರುಖ್ ಅವರು, ‘ಈ ಸಿನಿಮಾ ಆದ ಬಳಿಕ ನಿಮ್ಮ ಹೋಮ್ ಪ್ರೊಡಕ್ಷನ್ನಲ್ಲಿ ಬರುವ ಮುಂದಿನ ಸಿನಿಮಾದಲ್ಲಿ ನನಗೊಂದು ಚಿಕ್ಕ ಅವಕಾಶ ಕೊಡಿ. ಸರಿಯಾದ ಸಮಯಕ್ಕೆ ನಾನು ಶೂಟಿಂಗ್ಗೆ ಬರುತ್ತೇನೆ. ತುಂಬ ಪ್ರೊಫೆಷನಲ್ ಆಗಿ ಇರುತ್ತೇನೆ. ಈ ಬಗ್ಗೆ ಪ್ರಾಮಿಸ್ ಮಾಡುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
After this production please sign me up for your next home production little one. I will come in time for the shoot and be very professional..promise! https://t.co/rXzha7LmZR
— Shah Rukh Khan (@iamsrk) July 3, 2021
ಶಾರುಖ್ ಮಾಡಿದ ಟ್ವೀಟ್ಗೆ ಆಲಿಯಾ ಕೂಡಲೇ ಉತ್ತರಿಸಿದ್ದಾರೆ. ‘ಹಹ್ಹಹ್ಹ.. ಇದಕ್ಕಿಂತ ಹೆಚ್ಚು ನಾನು ಏನ್ನನ್ನೂ ಕೇಳಲು ಸಾಧ್ಯವಿಲ್ಲ. ಆಯಿತು, ಒಪ್ಪಂದಕ್ಕೆ ಸಹಿ ಮಾಡಿದ್ದೇನೆ. ಲವ್ ಯೂ ಮೈ ಫೇವರಿಟ್’ ಎಂದು ಆಲಿಯಾ ಪ್ರತಿಕ್ರಿಯಿಸಿದ್ದಾರೆ.
hahaha I could ask for nothing more.. done deal signed! Love you my favourite ? https://t.co/mW5fIXCwff
— Alia Bhatt (@aliaa08) July 3, 2021
ಅಂದಹಾಗೆ ಈ ತಾರೆಯರ ನಡುವೆ ನಡೆದ ಟ್ವೀಟ್ ಸಂಭಾಷಣೆ ಕೇವಲ ತಮಾಷೆಗಾಗಿ ಮಾತ್ರ. ಯಾಕಂದರೆ ಈ ಚಿತ್ರಕ್ಕೆ ಶಾರುಖ್ ಪತ್ನಿ ಗೌರಿ ಖಾನ್ ಕೂಡ ಹಣ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ