Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
Team Udayavani, May 6, 2024, 1:30 PM IST
ಮುಂಬಯಿ: ʼಹೌಸ್ ಫುಲ್ʼ ಬಾಲಿವುಡ್ ಜನಪ್ರಿಯ ಫ್ರಾಂಚೈಸಿ ಸಿನಿಮಾಗಳಲ್ಲಿ ಒಂದು. ʼಹೌಸ್ ಫುಲ್ -5ʼ ಅನೌನ್ಸ್ ಆದ ಬಳಿಕ ಪ್ರೇಕ್ಷಕರ ಕುತೂಹಲ ಹೆಚ್ಚಾಗಿದೆ.
ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಲು ಚಿತ್ರತಂಡ ಬಾಲಿವುಡ್ ನ ಖ್ಯಾತ ನಟನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಹಾಸ್ಯದ ಪಯಣಕ್ಕೆ ಹೊಸ ನಟನೊಬ್ಬನ ಸೇರ್ಪಡೆಯಾಗಿದೆ.
ಇದುವರೆಗೆ ರಿಲೀಸ್ ಆಗಿರುವ ʼಹೌಸ್ ಫುಲ್ʼ ಸಿನಿಮಾಗಳು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುವುದರ ಜೊತೆಗೆ ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಕಮಾಯಿ ಮಾಡಿದೆ.
ಈ ಹಿಂದೆಯೇ ʼಹೌಸ್ ಫುಲ್ -5ʼ ಸಿನಿಮಾ ಅನೌನ್ಸ್ ಆಗಿದ್ದು,ಇದೀಗ ನಿರ್ಮಾಪಕ ಸಾಜಿದ್ ನಾಡಿಯಾಡ್ವಾಲಾ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ನಟ ಅಭಿಷೇಕ್ ಬಚ್ಚನ್ ʼಹೌಸ್ ಫುಲ್ʼ ಫ್ಯಾಮಿಲಿಗೆ ಬಂದಿರುವುದಾಗಿ ಸಾಜಿದ್ ಹೇಳಿದ್ದಾರೆ.
ʼಹೌಸ್ ಫುಲ್ -5ʼ ನಲ್ಲಿ ಅಕ್ಷಯ್ ಕುಮಾರ್, ಅನಿಲ್ ಕಪೂರ್, ನಾನಾ ಪಾಟೇಕರ್, ರಿತೇಶ್ ದೇಶಮುಖ್ ಮತ್ತು ಚಂಕಿ ಪಾಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಅಭಿಷೇಕ್ ಬಚ್ಚನ್ ಸೇರಿಕೊಂಡಿದ್ದಾರೆ.
ಮೊದಲ ʼಹೌಸ್ಫುಲ್ʼ ಸಿನಿಮಾ 2010 ರಲ್ಲಿ ಬಿಡುಗಡೆಯಾಗಿತ್ತು. ಇದರಲ್ಲಿ ಮತ್ತು ಜಿಯಾ ಖಾನ್, ಅರ್ಜುನ್ ರಾಂಪಾಲ್, ಜಾಕ್ವೆಲಿನ್ ಫರ್ನಾಂಡೀಸ್, ಲಾರಾ ದತ್ತಾ ಮತ್ತು ಚಂಕಿ ಪಾಂಡೆ ಅವರೊಂದಿಗೆ ಅಕ್ಷಯ್ ಕುಮಾರ್ ನಟಿಸಿದ್ದರು. 2012 ರಲ್ಲಿ ಫ್ರ್ಯಾಂಚೈಸ್ ನ ಎರಡನೇ ಭಾಗ ರಿಲೀಸ್ ಆಗಿತ್ತು. ʼಹೌಸ್ಫುಲ್ 3ʼ ಮತ್ತು 4 ಕ್ರಮವಾಗಿ 2016 ಮತ್ತು 2019 ರಲ್ಲಿ ಬಿಡುಗಡೆಯಾಯಿತು.
ʼಹೌಸ್ಫುಲ್ – 5ʼ ಸಿನಿಮಾವನ್ನು ತರುಣ್ ಮನ್ಸುಖಾನಿ ನಿರ್ದೇಶಿಸಲಿದ್ದಾರೆ. ಇದೇ ವರ್ಷದ ಆಗಸ್ಟ್ ನಲ್ಲಿ ಚಿತ್ರ ಸೆಟ್ಟೇರಲಿದೆ. 2025 ರ ಜೂನ್. 6 ರಂದು ಸಿನಿಮಾ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cannes Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು
ಹೃದಯ ಸಂಬಂಧಿ ಕಾಯಿಲೆ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್ನ ಬಜೆಟ್ಟೇ 835 ಕೋಟಿ ರೂ.
Bollywood: ಜೂನ್ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್ ಭರಾಟೆ
Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್ ʼಬಾರ್ಡರ್ -2ʼ ರಿಲೀಸ್?
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ