ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಗೆ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರ !
Team Udayavani, Jul 16, 2020, 12:08 PM IST
ಮುಂಬೈ: ಬಾಲಿವುಡ್ ಬಾರ್ಬಿ ಡಾಲ್ ಕತ್ರಿನಾ ಕೈಫ್ ಗೆ ಇಂದು 37ನೇ ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಬಾಲಿವುಡ್ ತಾರೆಯರು, ಅಭಿಮಾನಿಗಳು ಸೇರಿದಂತೆ ಎಲ್ಲಡೆಯಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದ್ದು ಟ್ವಿಟ್ಟರ್ ನಲ್ಲಿ #HBDKatrinaKaif ಟ್ರೆಂಡ್ ಆಗಿವೆ.
ಕತ್ರಿನಾ ಕೈಫ್ ತನ್ನ ಸೌಂದರ್ಯದಿಂದಲೇ ಅಭಿಮಾನಿ ಬಳಗವನ್ನು ಹೊಂದಿರುವರು. ಮೂಲತಃ ಹಾಂಗ್ ಕಾಂಗ್ ನವರಾಗಿರುವ ಇವರು ‘ಬೂಮ್’ ಸಿನಿಮಾದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ. ಆ ಬಳಿಕ ಅನೇಕ ಹಿಂದಿ ಸಿನಿಮಾಗಳಲ್ಲಿ ನಾಯಕಿ ಪಾತ್ರವನ್ನು ಮಾಡಿದ್ದಾರೆ. 1999ರಲ್ಲೇ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರೂ 2003 ರಲ್ಲಿ ಬಿಡುಗಡೆಯಾದ ‘ಬೂಮ್’ ಅವರ ಜೀವನಕ್ಕೊಂದು ತಿರುವು ನೀಡಿದ್ದಲ್ಲದೆ ಅಪಾರ ಖ್ಯಾತಿಗೆ ಪಾತ್ರರಾದರು.
2004ರಲ್ಲಿ ವಿಜಯ್ ಭಾಸ್ಕರ್ ನಿರ್ದೇಶನ ಮಾಡಿದ ಮಲ್ಲೇಶ್ವರಿ ತೆಲುಗು ಸಿನಿಮಾದಲ್ಲಿ ಅವಕಾಶ ಪಡೆದು ನಟಿಸಿದರು. ನಂತರದಲ್ಲಿ ‘ಸರ್ಕಾರ್, ‘ಮೈನ್ ಫ್ಯಾರ್ ಕ್ಯೂ ಕಿಯಾ’‘ಹಮ್ ದಿವಾನ್ ಕರ್ ಗಯೇ’‘ಅಲ್ಲರಿ ಪಿಡುಗು’ ಸಿನಿಮಾದಲ್ಲಿ ನಟಿಸಿದರು.
ಐ.ವಿ ಶಶಿ ನಿರ್ದೇಶನದ ಬಲರಾಂ V/S ತೊಡರ್ದಾಸ್ ಸಿನಿಮಾದಲ್ಲಿ ಸುಪ್ರಿಯಾ ಮೆನನ್ ಪಾತ್ರ ನಿರ್ವಹಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೂ ಪರಿಚಿತರಾಗಿದ್ದರು. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿರುವ ಕತ್ರಿನಾ ಬಾಲಿವುಡ್ನ ಬೇಡಿಕೆಯ ನಟಿಯಾಗಿದ್ದಾರೆ. ಒಟ್ಟಾರೆ 40 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ.
ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಸಿನಿಮಾದಲ್ಲಿ ಕತ್ರಿನಾ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ಕತ್ರಿನಾ ಅವರು ತನ್ನ ದೇಹವನ್ನು ಹಾಗೆ ಫಿಟ್ ಆಗಿ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ಅವರು ಶಿಸ್ತಿನ ಆಹಾರ, ವ್ಯಾಯಾಮ ಮತ್ತು ಜೀವನಶೈಲಿಯನ್ನು ಅನುಸರಿಸಿಕೊಂಡು ಬಂದಿದ್ದು, ತನ್ನ ತೂಕ ಇಳಿಸುವ ಕ್ರಮದಿಂದ ಅವರು ಈಗಾಗಲೇ ಎಲ್ಲರನ್ನು ಅಚ್ಚರಿಗೀಡು ಮಾಡಿರುವರು. `ತೀಸ್ ಮಾರ್ ಖಾನ್’ಚಿತ್ರದ ವೇಳೆ ಕತ್ರಿನಾ ತನ್ನ ಸಪೂರ, ಮಾದಕ ಹಾಗೂ ಮೋಹಕ ದೇಹದಿಂದ ಎಲ್ಲರನ್ನು ಅಚ್ಚರಿಗೀಡು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?