ಬಾಲಿವುಡ್ ನಟ ದಿಲೀಪ್ ಕುಮಾರ್ ಸಹೋದರರು ಕೋವಿಡ್ ಗೆ ಬಲಿ


Team Udayavani, Sep 3, 2020, 8:41 PM IST

ಬಾಲಿವುಡ್ ನಟ ದಿಲೀಪ್ ಕುಮಾರ್ ಸಹೋದರರು ಕೋವಿಡ್ ಗೆ ಬಲಿ

ಮುಂಬಯಿ: ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಅವರ ಇಬ್ಬರು ಸಹೋದರರು ಕೋವಿಡ್ 19 ಸೊಂಕಿಗೆ ಬಲಿಯಾಗಿದ್ದಾರೆ.

ದಿಲೀಪ್ ಕುಮಾರ್ ಅವರ ಕಿರಿಯ ಸಹೋದರ 90 ವರ್ಷದ ಎಹ್ಸಾನ್ ಖಾನ್ ಅವರು ಇಂದು ನಿಧನರಾಗಿದ್ದಾರೆ. ಇವರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದ್ದ ಹಿನ್ನಲೆಯಲ್ಲಿ ಎಹ್ಸಾನ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವಿಚಾರವನ್ನು ದಿಲೀಪ್ ಕುಮಾರ್ ಅವರ ಕುಟುಂಬ ಸ್ನೇಹಿತ ಫೈಸಲ್ ಫಾರೂಖಿ ಅವರು ಈ ಹಿರಿಯ ನಟನ ಅಧಿಕೃತ ಟ್ವಿಟ್ಟರ್ ಅಕೌಂಟ್ ನಲ್ಲಿ ಮಾಹಿತಿ ನೀಡಿದ್ದಾರೆ.

‘ದಿಲೀಪ್ ಸಾಹೇಬ್ ಅವರ ಕಿರಿಯ ಸಹೋದರ ಎಹ್ಸಾನ್ ಖಾನ್ ಅವರು ಕೆಲ ಸಮಯಗಳ ಹಿಂದೆ ನಿಧನರಾಗಿದ್ದಾರೆ. ಈ ಹಿಂದೆ, ಇನ್ನೋರ್ವ ಸಹೋದರ ಅಸ್ಲಂ ನಿಧನ ಹೊಂದಿದ್ದರು. ನಾವೆಲ್ಲರೂ ದೇವರ ಮಕ್ಕಳು ಮತ್ತು ಆತನಲ್ಲಿಗೇ ಹಿಂದಿರುಗಬೇಕಾದವರು. ದಯವಿಟ್ಟು ನೀವೆಲ್ಲರೂ ಅವರಿಗಾಗಿ ಪ್ರಾರ್ಥಿಸಿ’ ಎಂದು ಫೈಸಲ್ ಫಾರುಖಿ ಅವರು ಬರೆದುಕೊಂಡಿದ್ದಾರೆ.


ದಿಲೀಪ್ ಕುಮಾರ್ ಅವರ ಇಬ್ಬರು ಸಹೋದರರಿಗೆ ಆಗಸ್ಟ್ 15ರಂದು ಕೋವಿಡ್ 19 ಸೊಂಕು ದೃಢಪಟ್ಟಿತ್ತು. ಮತ್ತು ಅವರಿಬ್ಬರನ್ನೂ ನಗರದ ಲೀಲಾವತಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಇವರಲ್ಲಿ 88 ವರ್ಷ ಪ್ರಾಯದ ಅಸ್ಲಂ ಖಾನ್ ಅವರು ಆಗಸ್ಟ್ 21ಕ್ಕೆ ನಿಧನರಾಗಿದ್ದರು ಮತ್ತು 90 ವರ್ಷ ಪ್ರಾಯದ ಎಹ್ಸಾನ್ ಖಾನ್ ಅವರು ಇಂದು ನಿಧನರಾಗಿದ್ದಾರೆ.

ಮಾರ್ಚ್ ತಿಂಗಳಿನಲ್ಲಿ ರಾಷ್ಟ್ರವ್ಯಾಪಿ ಲಾಕ್ ಡೌನ್ ಗೂ ಮುಂಚೆ ಟ್ವೀಟ್ ಮಾಡಿದ್ದ ಈ ಹಿರಿಯ ನಟ ತಾನು ಮತ್ತು ತನ್ನ ಪತ್ನಿ ನಟಿ ಸಾಯಿರಾ ಬಾನು ಅವರು ‘ಸಂಪೂರ್ಣ ಐಸೊಲೇಷನ್ ಹಾಗೂ ಕ್ವಾರೆಂಟೈನ್’ ನಲ್ಲಿರುವುದಾಗಿ ಟ್ವೀಟ್ ಮಾಡಿದ್ದರು.


ರಾಷ್ಟ್ರೀಯ ಚಲನಚಿತ್ರ ಪುರಸ್ಕಾರ ವಿಜೇತ ಹಿರಿಯ ನಟ ದಿಲೀಪ್ ಕುಮಾರ್ ಅವರು ಕೊಹಿನೂರ್, ಮುಘಲ್-ಎ-ಅಝಂ, ಶಕ್ತಿ, ರಾಮ್ ಔರ್ ಶ್ಯಾಮ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮ ನಟನಾ ಛಾಪನ್ನು ಮೂಡಿಸಿದ್ದಾರೆ. ಬಾಲಿವುಡ್ ನ ಈ ಹಿರಿಯ ನಟ 1998ರಲ್ಲಿ ಕೊನೆಯ ಬಾರಿಗೆ ‘ಕ್ವಿಲಾ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.