ರಾವಣನನ್ನು ಸಮರ್ಥಿಸಿಕೊಂಡು ವಿವಾದಕ್ಕೊಳಗಾದ ಸೈಫ್ ಅಲಿ ಖಾನ್
Team Udayavani, Dec 16, 2020, 5:30 PM IST
ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಹೊಸ ವಿದಾದವೊಂದನ್ನು ಮೈಗೆಳೆದುಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ‘ಆದಿಪುರುಷ್’ ಸಿನಿಮಾದ ಕುರಿತು ಮಾತನಾಡಿರುವ ಇವರು ರಾವಣನನ್ನು ‘ಮಾನವೀಯ ವ್ಯಕ್ತಿ’ ಎನ್ನುವ ಮೂಲಕ ಆತ ಸೀತೆಯನ್ನು ಅಪಹರಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಫ್ ಅಲಿ ಖಾನ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ವಿವಾದಕ್ಕೆ ಒಳಗಾಗಿದ್ದಾರೆ.
ಈ ಕುರಿತಾಗಿ ಉತ್ತರ ಪ್ರದೇಶ ಮೂಲದ ವಕೀಲರೊಬ್ಬರು ಸೈಫ್ ಅಲಿ ಖಾನ್ ಮೇಲೆ ಕೇಸ್ ದಾಖಲಿಸಿದ್ದು. ರಾಮ ಎನ್ನುವ ವ್ಯಕ್ತಿತ್ವ ಸನಾತನ ಧರ್ಮದ ಒಂದು ನಂಬಿಕೆ . ಆತ ಸನಾತನ ಧರ್ಮದಲ್ಲಿ ಒಳ್ಳೆಯದರ ಸಂಕೇತವಾಗಿ ಕಾಣಿಸಿಕೊಳ್ಳುತ್ತಾನೆ ಹಾಗೂ ರಾವಣ ಕೆಟ್ಟದರ ಸಂಕೇತವಾಗಿ ಗುರುತಿಸಿಕೊಳ್ಳುತ್ತಾನೆ ಎಂದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನನಗೆ ರಾಕ್ಷಸ ರಾವಣನ ಪಾತ್ರದಲ್ಲಿ ನಟಿಸಲು ಬಹಳ ಸಂತೋಷವಿದೆ. ಕಾರಣ ಆ ಪಾತ್ರದಲ್ಲಿ ಯಾವುದೆ ವಿಧವಾದ ಮಿತಿ ಇಲ್ಲ. ಚೌಕಟ್ಟು ಗಳಿಲ್ಲ. ಆದರೆ ಜನರ ಮನೋರಂಜನೆಯ ದೃಷ್ಟಿಯಿಂದಾಗಿ ಕೆಲವು ಮಾನವೀಯ ಅಂಶಗಳನ್ನು ಚಿತ್ರದಲ್ಲಿ ಸೇರಿಸಲಿದ್ದೇವೆ. ರಾಮನ ಸಹೋದರ ಲಕ್ಷ್ಮಣ ರಾವಣನ ತಂಗಿಯಾದ ಶೂರ್ಪನಖಿಯ ಮೂಗು ಕತ್ತರಿಸಿದ ಕಾರಣದಿಂದಲೆ ಆತ ಸೀತೆಯನ್ನು ಅಪಹರಿಸಿದ ಮತ್ತು ರಾಮನೊಂದಿಗೆ ಯುದ್ಧ ಮಾಡಿದ ಎಂದಿದ್ದರು.
ಇದನ್ನೂ ಓದಿ:ಬಾಲಿವುಡ್ ಗೆ ರಶ್ಮಿಕಾ ಎಂಟ್ರಿ
ಘಟನೆಯ ನಂತರ ನಟ ಸೈಫ್ ಅಲಿ ಖಾನ್ ತಾನು ನೀಡಿರುವ ಹೇಳಿಕೆಯನ್ನು ಹಿಂದೆಗೆದುಕೊಂಡಿದ್ದು ನಾನು ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ದೃಷ್ಟಿಯಿಂದ ಮಾತನಾಡಿಲ್ಲ. ನಾನು ಪ್ರತಿಯೊಬ್ಬರಲ್ಲೂ ಈ ವಿಚಾರದಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ. ನಟ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಸೈಫ್ ಅಲಿ ಖಾನ್ ರಾವಣನ ಪಾತ್ರಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ