ಆಸ್ಕರ್ ಗೆ ನಾಮಿನೇಟ್ ಆದ ʼಛೆಲ್ಲೋ ಶೋʼ ಚಿತ್ರದ ಬಾಲನಟ ಕ್ಯಾನ್ಸರ್ ನಿಂದ ನಿಧನ
Team Udayavani, Oct 11, 2022, 12:31 PM IST
ನವದೆಹಲಿ: 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಗೆ ಎಂಟ್ರಿ ಪಡೆದ ಗುಜರಾತಿ ಸಿನಿಮಾ ʼಛೆಲ್ಲೋ ಶೋʼದಲ್ಲಿ ಬಾಲನಟನಾಗಿ ನಟಿಸಿದ್ದ ರಾಹುಲ್ ಕೋಲಿ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.
ವರದಿ ಪ್ರಕಾರ, ಮೊದಲಿಗೆ ರಾಹುಲ್ ಕೋಲಿ(15) ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ರಾಹುಲ್ ತಂದೆ ಮಾಧ್ಯಮದ ಜೊತೆ ಮಾತಾನಾಡಿ, ಅ.2 ರಂದು (ಭಾನುವಾರ) ರಾಹುಲ್ ತಿಂಡಿ ಮುಗಿಸಿದ ಮೇಲೆ, ಅವರಿಗೆ ವಿಪರೀತ ಜ್ವರ ಕಾಣಿಸಿಕೊಂಡಿದೆ. ಮೂರು ಬಾರಿ ರಕ್ತದ ವಾಂತಿ ಮಾಡಿದ್ದಾನೆ. ಆ ಬಳಿಕ ನಮ್ಮನ್ನು ಅಗಲಿದ್ದಾನೆ. ನಮ್ಮ ಕುಟುಂಬಕ್ಕೆ ದಿಕ್ಕೇ ತೋಚದಂತಾಗಿದೆ. ಅವನು ನಟಿಸಿರುವ ʼಛೆಲ್ಲೋ ಶೋʼ ಅ.14 ರಂದು ರಿಲೀಸ್ ಆಗಲಿದೆ ಅದನ್ನು ನಾವೆಲ್ಲಾ ಒಟ್ಟಾಗಿ ನೋಡಿದ ಬಳಿಕ, ಆತನ ಅಂತಿಮ ಕ್ರಿಯಾವಿಧಾನವನ್ನು ಮಾಡುತ್ತೇವೆಂದು ದುಃಖವನ್ನು ಹಂಚಿಕೊಂಡರು.
ಬಳಿಕ ಮಾತನಾಡಿದ ರಾಹುಲ್ ತಂದೆ, ಮಗನ ಚಿಕಿತ್ಸೆಗಾಗಿ ನನ್ನ ಕೈಯಲ್ಲಿ ಹಣವಿರಲಿಲ್ಲ ಅದಕ್ಕಾಗಿ ಆಟೋವನ್ನು ಮಾರಬೇಕಾಯಿತು. ಆದರೆ ಈ ವಿಚಾರ ಚಿತ್ರ ತಂಡದವರಿಗೆ ಗೊತ್ತಾಗಿ ಆಟೋವನ್ನು ಹಿಂದಕ್ಕೆ ಪಡೆದು ನನಗೆ ನೀಡಿದ್ದಾರೆ ಎಂದರು.
ಸಿನಿಮಾ ಬಿಡುಗಡೆ ಆದ ಮೇಲೆ ನಮ್ಮ ಜೀವನದ ಬದಲಾಗುತ್ತದೆ ಎಂದು ಆತ ಹೇಳುತ್ತಿದ್ದ. ಆದರೆ ಅದಕ್ಕೂ ಮುನ್ನ ಆತ ನಮ್ಮನ್ನು ಬಿಟ್ಟು ಹೋಗಿದ್ದಾನೆ ಎಂದರು.
ನಿರ್ದೇಶಕ ಪಾನ್ ನಳಿನ್ ಮಾತಾನಾಡಿ, ನಾವು ರಾಹುಲ್ ಕುಟುಂಬದ ಜೊತೆ ವಾರಗಟ್ಟಲೇ ಇದ್ದೆವು. ಆದರೆ ಅವನನ್ನು ನಾವು ಉಳಿಸಿಕೊಳ್ಳಲಾಗಲಿಲ್ಲ ಎಂದರು.
9 ವರ್ಷದ ಬಾಲಕನೊಬ್ಬನಿಗೆ ಸಿನಿಮಾದ ಮೇಲೆ ಉಂಟಾಗುವ ಪ್ರೀತಿಯ ಕಥೆಯನ್ನು ವಿವರಿಸುತ್ತದೆ. ಈ ಸಿನಿಮಾ ಕಳೆದ ವರ್ಷ ಜೂನ್ನಲ್ಲಿ ಟ್ರಿಬೆಕಾ ಚಲನಚಿತ್ರೋತ್ಸವದಲ್ಲಿ ಪ್ರೀಮಿಯರ್ ಆಗಿತ್ತು. ಭವಿನ್ ರಾಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ ಸೇರಿ ಅನೇಕರು ಅಭಿನಯಿಸಿರುವ ಸಿನಿಮಾ ಸ್ಪೇನ್ನ ಚಲನಚಿತ್ರೋತ್ಸವದಲ್ಲಿ ಗೋಲ್ಡನ್ ಸ್ಪೈಕ್ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೇ ಅ.14ರಂದು “ಲಾಸ್ಟ್ ಫಿಲಂ ಶೋ'(ಇಂಗ್ಲಿಷ್) ಹೆಸರಿನಲ್ಲಿ ವಿಶ್ವಾದ್ಯಂತ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ