“ಗಾಡ್ ಫಾದರ್” ನಟನೆಗೆ ಸಲ್ಮಾನ್ ಖಾನ್ ಒಂದು ಪೈಸೆಯನ್ನೂ ಪಡೆದಿಲ್ಲ.. ಮೆಗಾಸ್ಟಾರ್
ಚಿರಂಜೀವಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ವಿಶೇಷ ಸಂದರ್ಶನವನ್ನು ನೀಡಿದ್ದಾರೆ
Team Udayavani, Sep 24, 2022, 4:55 PM IST
ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ನಟನೆಯ ʼಗಾಡ್ ಫಾದರ್ʼ ಚಿತ್ರ ರಿಲೀಸ್ ಗೆ ರೆಡಿಯಾಗಿದೆ. ಅಕ್ಟೋಬರ್ 5 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಭರ್ಜರಿ ಪ್ರಮೋಷನ್ ನಲ್ಲಿ ಚಿತ್ರ ತಂಡ ಬ್ಯುಸಿಯಾಗಿದೆ.
ಮಲಯಾಳಂನ ʼಲೂಸಿಫರ್ʼ ಸಿನಿಮಾದ ರಿಮೇಕ್ ಸಿನಿಮಾವಾಗಿರುವ ʼಗಾಡ್ ಫಾದರ್ʼ ನಲ್ಲಿ ಚಿರಂಜೀವಿಯೊಂದಿಗೆ ಸ್ಪೆಷೆಲ್ ರೋಲ್ ನಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ರಿಲೀಸ್ ಆದ ಟೀಸರ್ ಗೆ ದೊಡ್ಡ ಮಟ್ಟದ ರೆಸ್ಪಾನ್ಸ್ ಸಿಕ್ಕಿದೆ.
ಪ್ರಮೋಷನ್ ನ ಅಂಗವಾಗಿ ಮೆಗಾ ಸ್ಟಾರ್ ಚಿರಂಜೀವಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ವಿಶೇಷ ಸಂದರ್ಶನವನ್ನು ನೀಡಿದ್ದಾರೆ. ಈ ಸಂದರ್ಶನದ ಪ್ರೋಮೋ ರಿಲೀಸ್ ಆಗಿದ್ದು, ಅದರಲ್ಲಿ ಚಿರಂಜೀವಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: War Begins Soon.. ಪ್ರೇಮ್ ಸಿನಿಮಾಕ್ಕಾಗಿ ಹೊಸ ಸಾಹಸಕ್ಕೆ ಮುಂದಾದ ಆ್ಯಕ್ಷನ್ ಪ್ರಿನ್ಸ್
ಗಾಡ್ ಫಾದರ್ ನ ಸಬ್ಜೆಕ್ಟ್ ಹೇಗಿದೆ ಎಂದರೆ ಇದರಲ್ಲಿ ನಾಯಕಿ ಅಥವಾ ಹಾಡುಗಳು ಇಲ್ಲದಿದ್ರು ನೀವು ಆಚ್ಚರಿ ಪಡುವುದಿಲ್ಲ. ಸಿನಿಮಾದಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಅವರು ನಟಿಸಿದ್ದಾರೆ. ಅವರು ಮೊದಲು ಯಾವುದೇ ಕಾರಣಕ್ಕೂ ನಟಿಸಲ್ಲ ಎಂದಿದ್ದರು. ಆದರೆ ನೀವು ಸಿನಿಮಾವನ್ನು ನೋಡಿದರೆ ನಿಮಗೆ ಅವರ ನಟನೆ ನೋಡಿ ಆಶ್ಚರ್ಯವಾಗಬಹುದು. ಅವರಲ್ಲೊಬ್ಬ ಪ್ರತಿಭಾವಂತ ನಟನಿರುವುದು ನಿಮಗೆ ತಿಳಿಯುತ್ತದೆ ಎಂದು ಚಿರಂಜೀವಿ ಹೇಳಿದ್ದಾರೆ.
ಇನ್ನು ಸಿನಿಮಾದಲ್ಲಿ ವಿಶೇಷ ಪಾತ್ರವನ್ನು ಮಾಡಿರುವ ಸಲ್ಮಾನ್ ಬಗ್ಗೆ ಪ್ರಶಂಸೆ ಮಾಡುತ್ತಾ, ಸಲ್ಮಾನ್ ಖಾನ್ ಸಂಭಾವನೆ ತೆಗೆದುಕೊಳ್ಳದೆ ಈ ಸಿನಿಮಾವನ್ನು ಮಾಡಿದ್ದಾರೆ. ಅವರು ಪ್ರೀತಿಗಾಗಿ ಮಾತ್ರ ಸಿನಿಮಾ ಮಾಡುತ್ತಾರೆ. ಹ್ಯಾಟ್ಸ್ ಆಫ್ ಸಲ್ಮಾನ್ ಭಾಯಿ, ವಿ ಲವ್ ಯೂ ಎಂದು ಹೇಳಿದ್ದಾರೆ. ಇತ್ತೀಚಿಗೆ ಗಾಡ್ ಫಾದರ್ ಸಿನಿಮಾದ “ಥಾರ್ ಮಾರ್ ಥಕ್ಕರ್ ಮಾರ್” ಹಾಡು ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!