Chrisann Pereira: ಡ್ರಗ್ಸ್‌ ಸಾಗಾಟ ಆರೋಪ; ಶಾರ್ಜಾದಲ್ಲಿ ಬಾಲಿವುಡ್‌ ನಟಿ ಬಂಧನ


Team Udayavani, Apr 18, 2023, 11:00 AM IST

Chrisann Pereira: ಡ್ರಗ್ಸ್‌ ಸಾಗಾಟ ಆರೋಪ; ಶಾರ್ಜಾದಲ್ಲಿ ಬಾಲಿವುಡ್‌ ನಟಿ ಬಂಧನ

ಮುಂಬಯಿ: ಡ್ರಗ್ಸ್‌ ಸಾಗಾಟ ಪ್ರಕರಣದ ಆರೋಪದ ಮೇಲೆ ಬಾಲಿವುಡ್‌ ನಟಿಯೊಬ್ಬರನ್ನು ಶಾರ್ಜಾ ಏರ್ ಪೋರ್ಟ್‌ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಾಲಿವುಡ್‌ ನಲ್ಲಿ ʼಬಟ್ಲಾ ಹೌಸ್ʼ , ʼಸಡಕ್ 2ʼ ಸಿನಿಮಾದಲ್ಲಿ ನಟಿಸಿರುವ ನಟಿ ಕ್ರಿಸನ್ ಪಿರೇರಾ ಬಂಧಿತ ನಟಿ.

ನಟಿಯ ಬಂಧನದ ಬಗ್ಗೆ ಅವರ ಕುಟುಂಬ ಮಾಹಿತಿ ನೀಡಿದ್ದು, “ನನ್ನ ಸಹೋದರಿಯನ್ನು ಡ್ರಗ್ಸ್‌ ಸಾಗಾಟದ ಆರೋಪದ ಮೇಲೆ ಬಂಧಿಸಲಾಗಿದೆ. ಕಳೆದ 2 ವಾರದಿಂದ ನಮಗೆ ಮಾನಸಿಕವಾಗಿ ಕಿರುಕುಳ ಆಗುತ್ತಿದೆ. ಅವಳನ್ನು ಈ ಜಾಲದಲ್ಲಿ ಸಿಲುಕಿಸಲಾಗಿದೆ. ಸಹೋದರಿ ಶಾರ್ಜಾ ತಲುಪಿದ ಬಳಿಕ ಆಕೆಯೊಂದಿಗೆ ನಾವು ಸಂಪರ್ಕ ಮಾಡಲು ಆಗುತ್ತಿಲ್ಲ. ಆಕೆಯನ್ನು ಬಂಧಿಸಿ ಶಾರ್ಜಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ ಎಂದು 72 ಗಂಟೆಗಳ ನಂತರ ಭಾರತೀಯ ರಾಯಭಾರಿ ಕಚೇರಿ ನಮಗೆ ತಿಳಿಸಿದೆ”ಎಂದು ನಟಿಯ ಸಹೋದರ ಕೆವಿನ್ ಹೇಳಿದ್ದಾರೆ.

ಇದನ್ನೂ ಓದಿ: IPL 2023: ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ದಂಡ ವಿಧಿಸಿದ ಐಪಿಎಲ್ ಮಂಡಳಿ

ಈ ಬಗ್ಗೆ ನಟಿಯ ತಾಯಿ ರವಿ ಎಂಬಾತನ ಮೇಲೆ ಆರೋಪ ಮಾಡಿದ್ದಾರೆ. ರವಿ ಎಂಬಾತ ಅಂತಾರಾಷ್ಟ್ರೀಯ ವೆಬ್‌ ಸಿರೀಸ್‌ ನಲ್ಲಿ ನಟನೆಗೆ ಆಫರ್‌ ನೀಡದ್ದ. ಇದಾದ ಬಳಿಕ ಹಲವು ವೆಬ್‌ ಸಿರೀಸ್‌ ವಿಚಾರವಾಗಿ ಭೇಟಿಯಾಗಿದ್ದಾರೆ. ನಂತರ ದುಬೈನಲ್ಲಿ ಅಡಿಷನ್‌ ಅಂತಿಮವಾಗಿದೆ. ಏ.1 ರಂದು ದುಬೈ ಹೋಗುವ ಮುನ್ನ ಕಾಫಿ ಶಾಪ್‌ ವೊಂದಕ್ಕೆ  ಕರೆದಿದ್ದಾರೆ. ಆ ಬಳಿಕ ಆಕೆಗೆ ಇದು ಅಡಿಷನ್‌ ನ ಭಾಗ ತೆಗೆದುಕೊಂಡು ಹೋಗಿ ಎಂದು ಟ್ರೋಫಿಯೊಂದನ್ನು ನೀಡಿದ್ದಾರೆ. ಆ ಬಳಿಕ ನಟಿ ಮುಂಬೈ ಏರ್‌ ಪೋರ್ಟ್‌ ಮೂಲಕ ದುಬೈಗೆ ತೆರಳಿದ್ದಾರೆ.  ಶಾರ್ಜಾದ ಏರ್‌ ಪೋರ್ಟ್‌ ಅಧಿಕಾರಿಗಳು ಆಕೆಯ ಬಳಿಯಿದ್ದ ಟ್ರೋಫಿಯನ್ನು ಪರಿಶೀಲಿಸಿದ್ದಾರೆ. ಅದರೊಳಗೆ ಡ್ರಗ್ಸ್‌ ಇರುವುದು ಪತ್ತೆಯಾಗಿದೆ. ನಂತರ ಆಕೆಯನ್ನು ಡ್ರಗ್ಸ್‌ ಸಾಗಾಟದ ಆರೋಪದ ಮೇಲೆ ಬಂಧಿಸಲಾಗಿದೆ. ಈ ವಿಚಾರವನ್ನು ಭಾರತೀಯ ರಾಯಭಾರಿ ಕಚೇರಿ ಏ.10 ರಂದು ನಮಗೆ ಹೇಳಿದೆ ಎಂದು ನಟಿಯ ತಾಯಿ ಹೇಳಿದ್ದಾರೆ.

ಶಾರ್ಜಾದಿಂದ ಸರಿಯಾದ ಮಾಹಿತಿ ಬಾರದ ಕಾರಣ ಇಲ್ಲಿನ ಪೊಲೀಸರು ದೂರನ್ನು ದಾಖಲಿಸುತ್ತಿಲ್ಲ ಎಂದು ಕುಟುಂಬದವರು ಹೇಳುತ್ತಾರೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.