‘ದಿ ಕಾಶ್ಮೀರ್ ಫೈಲ್ಸ್’ ಗೆ ಟೀಕೆ ; ಇಸ್ರೇಲಿ ನಿರ್ಮಾಪಕಗೆ ಅನುಪಮ್ ಖೇರ್ ತಿರುಗೇಟು
ನುಂಗಲೂ ಆಗುತ್ತಿಲ್ಲ, ಉಗುಳಲೂ ಆಗುತ್ತಿಲ್ಲ! ಸತ್ಯವನ್ನು ಸುಳ್ಳೆಂದು ಸಾಬೀತುಪಡಿಸಲು ಹತಾಶ ಯತ್ನ
Team Udayavani, Dec 1, 2022, 5:49 PM IST
ಪಣಜಿ: ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ತೀರ್ಪುಗಾರರ ಮುಖ್ಯಸ್ಥ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ನೀಡಿದ ವಿವಾದಾತ್ಮಕ ಕಾಮೆಂಟ್ ಹೊಸ ವಿವಾದವನ್ನು ಹುಟ್ಟುಹಾಕಿದೆ.
ಲ್ಯಾಪಿಡ್ ಹೇಳಿಕೆಯ ನಂತರ, ಎಲ್ಲಾ ಬಾಲಿವುಡ್ ಸೆಲೆಬ್ರಿಟಿಗಳು ತೀವ್ರ ಪ್ರತಿಕ್ರಿಯೆಗಳನ್ನು ನೀಡಿದ್ದು, . ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ನಟ ಅನುಪಮ್ ಖೇರ್ ಈಗ ಮತ್ತೊಮ್ಮೆ ಟ್ವಿಟರ್ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಇಸ್ರೇಲ್ ಚಲನಚಿತ್ರ ನಿರ್ಮಾಪಕನ ಹೇಳಿಕೆಯನ್ನು ಖಂಡಿಸಿದ್ದಾರೆ.
ನಡಾವ್ ಲ್ಯಾಪಿಡ್ ಅವರು ವಿವೇಕ್ ಅಗ್ನಿಹೋತ್ರಿ ಅವರ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು “ಪ್ರಚಾರ” ಮತ್ತು “ಅಸಭ್ಯ ಚಲನಚಿತ್ರ” ಎಂದು ಹೇಳಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ಅನೇಕ ವಿಮರ್ಶಕರು ಮತ್ತು ರಾಜಕೀಯ ಮುಖಂಡರಿಂದ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
ಅನುಪಮ್ ಖೇರ್ ಅವರು ಟ್ವೀಟ್ ನಲ್ಲಿ ಹಂಚಿಕೊಂಡ ತಮ್ಮ ವಿಡಿಯೋದಲ್ಲಿ, ”ಸ್ನೇಹಿತರೇ, ಕೆಲವರು ಸತ್ಯವನ್ನು ನೋಡುವ ಮತ್ತು ತೋರಿಸುವ ಅಭ್ಯಾಸವನ್ನು ಹೊಂದಿಲ್ಲ. ಅದರ ಮೇಲೆ ತಮಗೆ ಇಷ್ಟವಾದ ಪರಿಮಳ, ಇಷ್ಟವಾದ ರುಚಿ, ಲೇಪನ, ಅಲಂಕಾರ ಮತ್ತು ತಮ್ಮ ಇಷ್ಟದ ಬಣ್ಣವನ್ನು ನೋಡಿ ಅಭ್ಯಾಸ ಮಾಡಿಕೊಳ್ಳುತ್ತಾರೆ. ಅವರು ಕಾಶ್ಮೀರದ ಸತ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರು ಬಣ್ಣಬಣ್ಣದ ಸಂತೋಷದ ಕನ್ನಡಕಗಳೊಂದಿಗೆ ನೋಡಲು ಮತ್ತು ತೋರಿಸಬೇಕೆಂದು ಅವರು ಬಯಸುತ್ತಾರೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
”ಕಾಶ್ಮೀರ್ ಫೈಲ್ಸ್ ಸತ್ಯ ಕೆಲವರ ಗಂಟಲಿಗೆ ಮುಳ್ಳಿನಂತೆ ಅಂಟಿಕೊಂಡಿದೆ.ಅದನ್ನು ನುಂಗಲೂ ಆಗುತ್ತಿಲ್ಲ, ಉಗುಳಲೂ ಆಗುತ್ತಿಲ್ಲ! ಅವನ ಆತ್ಮ ಈ ಸತ್ಯವನ್ನು ಸುಳ್ಳೆಂದು ಸಾಬೀತುಪಡಿಸಲು ಹತಾಶವಾಗಿ ಯತ್ನಿಸಲಾಗುತ್ತಿದೆ.ಆದರೆ ನಮ್ಮ ಚಿತ್ರ ಕೇವಲ ಚಲನಚಿತ್ರವಲ್ಲ,ಈಗ ಒಂದು ಚಳುವಳಿಯಾಗಿದೆ. ಹೇಯ ಟೂಲ್ ಕಿಟ್ ಗ್ಯಾಂಗ್ ಈ ರೀತಿ ಪ್ರಯತ್ನಿಸುತ್ತಲೇ ಇದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೂಜಾ ಹೆಗ್ದೆ ಸಹೋದರನ ಮದುವೆಯಲ್ಲಿ ಸಲ್ಮಾನ್ ಖಾನ್: ಮತ್ತೆ ‘ಪ್ರೀತಿ ವದಂತಿ’ ಶುರು
ಟಾಲಿವುಡ್ ರಂಗದ ʼಕಲಾ ತಪಸ್ವಿʼ, ದಿಗ್ಗಜ ನಿರ್ದೇಶಕ ಕೆ.ವಿಶ್ವನಾಥ್ ನಿಧನ
ಬಾಲಿವುಡ್ ಸ್ಟಾರ್ಸ್ ಅಕ್ಷಯ್ ಕುಮಾರ್,ಟೈಗರ್ ಶ್ರಾಫ್ ಡಾನ್ಸ್ ವೈರಲ್
ಹಸೆಮಣೆ ಏರಲು ಸಜ್ಜಾದ ʼಶೇರ್ ಷಾʼ ಜೋಡಿ ಸಿದ್ಧಾರ್ಥ್ – ಕಿಯಾರಾ: ಫೆ.6 ಕ್ಕೆ ಅದ್ಧೂರಿ ವಿವಾಹ
‘ಪ್ರಮುಖ ಪಾತ್ರಕ್ಕಾಗಿ…. ‘: ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಯನತಾರಾ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ವಿಜಯಪುರ: ಶೀಲ ಸಂಕಿಸಿ ಪತ್ನಿ ಹತ್ಯೆಗೈದವನಿಗೆ ಜೀವಾವಧಿ ಶಿಕ್ಷೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ