“ನಾನು ಕೇಳಿದ್ದ “ಮಾಲು” ಬೇರೆ! 5 ಗಂಟೆ ಕಾಲ ದೀಪಿಕಾ ಪಡುಕೋಣೆ ವಿಚಾರಣೆ
ಈ ನಿಟ್ಟಿನಲ್ಲಿ ಆಕೆಯನ್ನು ಮತ್ತೆ ವಿಚಾರಣೆಗೆ ಗುರಿಪಡಿಸಬೇಕಾದ ಅಗತ್ಯತೆ ಇದೆ ಎಂದು ವರದಿ ಹೇಳಿದೆ.
Team Udayavani, Sep 26, 2020, 6:48 PM IST
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ನಂಟಿನ ಕುರಿತು ಶನಿವಾರ (ಸೆಪ್ಟೆಂಬರ್ 26, 2020) ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಬಾಲಿವುಡ್ ಡ್ರಗ್ಸ್ ಜಾಲದ ನಂಟಿನ ಕುರಿತು ಈಗಾಗಲೇ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಈಗಾಗಲೇ ಎನ್ ಸಿಬಿ ಎರಡನೇ ದಿನವಾದ ಶನಿವಾರ ಕೂಡಾ ವಿಚಾರಣೆ ನಡೆಸಿತ್ತು. ಮತ್ತೊಂದೆಡೆ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋವಿಕ್ ಕಸ್ಟಡಿಯನ್ನು ಅಕ್ಟೋಬರ್ 6ರವರೆಗೆ ವಿಸ್ತರಿಸಲಾಗಿದೆ.
ನಾನು ಕೇಳಿದ್ದ ಮಾಲು ಅದಲ್ಲ:
ಡ್ರಗ್ಸ್ ಜಾಲದ ನಂಟಿನ ಕುರಿತು ಎನ್ ಸಿಬಿ ಅಧಿಕಾರಿಗಳು ದೀಪಿಕಾ ಪಡುಕೋಣೆಯನ್ನು ಬರೋಬ್ಬರಿ ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೇ ಕರಿಷ್ಮಾ ಪ್ರಕಾಶ್ ಜತೆಗೆ ನಡೆಸಿರುವ ಚಾಟ್ಸ್ ಬಗ್ಗೆ ದೀಪಿಕಾ ಒಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ. ಆದರೆ ತಾನು ಕೇಳಿರುವ ಮಾಲು “ಡ್ರಗ್ಸ್” ಅಲ್ಲ ಸಿಗರೇಟ್ ಎಂದು ಹೇಳಿರುವುದಾಗಿ ಮೂಲಗಳು ವಿವರಿಸಿವೆ.
ಟೈಮ್ಸ್ ನೌ ವರದಿ ಪ್ರಕಾರ, ಡ್ರಗ್ಸ್ ಜಾಲದ ನಂಟಿನ ಬಗ್ಗೆ ದೀಪಿಕಾ ಪಡುಕೋಣೆ ನೀಡಿರುವ ಹೇಳಿಕೆ ಎನ್ ಸಿಬಿ ಅಧಿಕಾರಿಗಳಿಗೆ ತೃಪ್ತಿ ತಂದಿಲ್ಲ. ಈ ನಿಟ್ಟಿನಲ್ಲಿ ಆಕೆಯನ್ನು ಮತ್ತೆ ವಿಚಾರಣೆಗೆ ಗುರಿಪಡಿಸಬೇಕಾದ ಅಗತ್ಯತೆ ಇದೆ ಎಂದು ವರದಿ ಹೇಳಿದೆ.
ಕರಿಷ್ಮಾ ಪ್ರಕಾಶ್ ಜತೆಗೆ ನಡೆಸಿದ ಡ್ರಗ್ಸ್ ಚಾಟ್ ಕುರಿತು ಎನ್ ಸಿಬಿ ಅಧಿಕಾರಿಗಳು ದೀಪಿಕಾ ಪಡುಕೋಣೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಐದು ಮಂದಿಯ ತಂಡ ದೀಪಿಕಾ ಪಡುಕೋಣೆಯನ್ನು ವಿಚಾರಣೆಗೆ ಒಳಪಡಿಸಿದೆ. ವಿಚಾರಣಾ ತಂಡದಲ್ಲಿ ಮಹಿಳಾ ಅಧಿಕಾರಿಗಳು ಇದ್ದಿರುವುದಾಗಿ ವರದಿ ವಿವರಿಸಿದೆ. ವಿಚಾರಣೆ ವೇಳೆ ದೀಪಿಕಾ ಮೊಬೈಲ್ ಫೋನ್ ಅನ್ನು ದೂರ ಇಡುವಂತೆ ಸೂಚಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ