ರಿಯಾಗೆ ಡ್ರಗ್ಸ್ ಸರಬರಾಜು ಮಾಡ್ತಿದ್ದದ್ದು ನಟಿ ಸಾರಾ ಅಲಿ ಖಾನ್? ಈಕೆ ಸ್ಟಾರ್ ನಟನ ಪುತ್ರಿ

ಡ್ರಗ್ ಪೆಡ್ಲರ್ ಗಳು ಸಾರಾ ಅಲಿ ಖಾನ್ ಗೆ ಡ್ರಗ್ ಸರಬರಾಜು ಮಾಡುತ್ತಿರುವುದಾಗಿ ವರದಿ ತಿಳಿಸಿದೆ.

Team Udayavani, Sep 14, 2020, 4:56 PM IST

ರಿಯಾಗೆ ಡ್ರಗ್ಸ್ ಸರಬರಾಜು ಮಾಡ್ತಿದ್ದದ್ದು ನಟಿ ಸಾರಾ ಅಲಿ ಖಾನ್? ಈಕೆ ಸ್ಟಾರ್ ನಟನ ಪುತ್ರಿ

ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಾಗೂ ಡ್ರಗ್ಸ್ ಜಾಲದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಮುಂದೆ ರಿಯಾ ಚಕ್ರವರ್ತಿ ಹಲವಾರು ಸೆಲೆಬ್ರಿಟಿಗಳ ಹೆಸರನ್ನು ಬಾಯ್ಬಿಟ್ಟಿರುವ ಬಳಿಕ ಎನ್ ಸಿಬಿ ಹಲವು ನಟ, ನಟಿಯರ ಚಟುವಟಿಕೆ ಮೇಲೆ ಕಣ್ಣಿದ್ದಾರೆ. ಅಲ್ಲದೇ ನಟಿ ಸಾರಾ ಅಲಿ ಖಾನ್, ರಾಕುಲ್ ಪ್ರೀತ್ ಸಿಂಗ್ ಹಾಗೂ ಇತರರು ಬಾಲಿವುಡ್ ಪಾರ್ಟಿಗಳಲ್ಲಿ ಡ್ರಗ್ಸ್ ಸೇವಿಸುತ್ತಿದ್ದರು ಎಂಬ ಮಾಹಿತಿ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.

ಸುಶಾಂತ್ ಹಾಗೂ ಡ್ರಗ್ಸ್ ಜಾಲದ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಬಿ ಈಗಾಗಲೇ ರಿಯಾ ಚಕ್ರವರ್ತಿ ಹಾಗೂ ಕೆಲವು ಡ್ರಗ್ ಪೆಡ್ಲರ್ಸ್ ಗಳನ್ನು ಬಂಧಿಸಿದ್ದಾರೆ. ಡ್ರಗ್ ಪೆಡ್ಲರ್ ಗಳು ಸಾರಾ ಅಲಿ ಖಾನ್ ಗೆ ಡ್ರಗ್ ಸರಬರಾಜು ಮಾಡುತ್ತಿರುವುದಾಗಿ ವರದಿ ತಿಳಿಸಿದೆ.

ರಿಯಾ ಚಕ್ರವರ್ತಿ ಮತ್ತು ಸಾರಾ ಅಲಿ ಖಾನ್ ಕೆಲವು ಸಾಮಾನ್ಯ ಮಾದಕ ವಸ್ತು ಮಾರಾಟಗಾರರ ಜತೆ ಸಂಪರ್ಕದಲ್ಲಿದ್ದರು. ಅಷ್ಟೇ ಅಲ್ಲ ರಿಯಾ ಚಕ್ರವರ್ತಿ ತಾನು ಉಪಯೋಗಿಸಲು ಡ್ರಗ್ಸ್ ಅನ್ನು ಸಾರಾಳಿಂದ ಪಡೆಯುತ್ತಿದ್ದಳು ಎಂದು ವರದಿ ವಿವರಿಸಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ‘ನಶೆ’ ನಂಟು: ರಿಯಾ ಚಕ್ರವರ್ತಿ, ಶೋವಿಕ್ ನಿವಾಸಕ್ಕೆ NCB ರೈಡ್

ಸಿಂಬಾ ಸಿನಿಮಾದ ಹೀರೋಯಿನ್ ಸಾರಾ ರಿಯಾ ಜತೆಗಿನ ಸಂಪರ್ಕ ಹೊರತುಪಡಿಸಿ ತನ್ನದೇ ಆದ ಒಂದು ಡ್ರಗ್ ಪೆಡ್ಲರ್ ಗುಂಪನ್ನು ಹೊಂದಿದ್ದಳು. ಈ ನಿಟ್ಟಿನಲ್ಲಿ ಆಕೆ ಪ್ರತ್ಯೇಕವಾಗಿ ಡ್ರಗ್ಸ್ ಬಳಕೆ ಮಾಡಿಕೊಳ್ಳುತ್ತಿದ್ದಳು. ರಿಯಾ ಕೂಡಾ ಸಾರಾಳ ಡ್ರಗ್ ಪೆಡ್ಲರ್ ಜತೆ ಸಂಪರ್ಕದಲ್ಲಿದ್ದು, ಆತನಿಂದ ಬೇಕಾದ ಡ್ರಗ್ಸ್ ಖರೀದಿಸಿ ಅದನ್ನು ಸುಶಾಂತ್ ಗೆ ನೀಡುತ್ತಿದ್ದಳು ಎಂದು ವರದಿ ವಿವರಿಸಿದೆ.

ಇದೀಗ ರಿಯಾ ಚಕ್ರವರ್ತಿ ಹಾಗೂ ಸಾರಾಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಎನ್ ಸಿಬಿ ತನಿಖೆ ನಡೆಸುತ್ತಿದೆ. ಈಗಾಗಲೇ ರಿಯಾ ಜತೆ ಸಂಪರ್ಕದಲ್ಲಿದ್ದ ಬಹುತೇಕ ಡ್ರಗ್ ಸರಬರಾಜುದಾರರನ್ನು ಬಂಧಿಸಲಾಗಿದೆ.

ಡ್ರಗ್ ಸಂಚಿನ ಜಾಲಕ್ಕೆ ಸಂಬಂಧಿಸಿದಂತೆ ಈವರೆಗೆ 16 ಮಂದಿಯನ್ನು ಬಂಧಿಸಲಾಗಿದೆ. ಭಾನುವಾರ ಎನ್ ಸಿಬಿ ಒಟ್ಟು ಆರು ಮಂದಿಯನ್ನು ಬಂಧಿಸಿತ್ತು. ಅವರನ್ನೆಲ್ಲಾ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇವರನ್ನು ಕರಮ್ ಜೀತ್ ಸಿಂಗ್ ಆನಂದ್, ಡಿ.ಫೆರ್ನಾಂಡಿಸ್, ಸಂಕೇತ್ ಪಾಟೀಲ್, ಅಂಕುಶ್ ಅನ್ ರೇಜಾ, ಸಂದೀಪ್ ಗುಪ್ತಾ ಮತ್ತು ಅಫ್ತಾತಾಬ್ ಫತೆಹ್ ಅನ್ಸಾರಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಸುಶಾಂತ್ 5 ದಿನದಲ್ಲಿ 14 ಬಾರಿ ಸಿಮ್ ಬದಲಾಯಿಸಿದ್ದೇಕೆ? ಬಿಹಾರ ಪೊಲೀಸರಿಂದ ಸತ್ಯ ಬಯಲು

ಸುಶಾಂತ್ ಸಾವಿನ ಪ್ರಕರಣದಲ್ಲಿನ ಡ್ರಗ್ಸ್ ಲಿಂಕ್ ಕುರಿತ ಆರೋಪದಲ್ಲಿ ರಿಯಾ ಚಕ್ರವರ್ತಿಯನ್ನು ಕಳೆದ ಮಂಗಳವಾರ ಎನ್ ಸಿಬಿ ಬಂಧಿಸಿತ್ತು. ರಿಯಾ ಹಾಗೂ ಆಕೆಯ ಸಹೋದರ ಶೋವಿಕ್ ವಿರುದ್ಧ ಎನ್ ಸಿಬಿ ಎನ್ ಡಿಪಿಎಸ್ ಕಾಯ್ದೆ 27ಎರ ಅಡಿ ಪ್ರಕರಣ ದಾಖಲಿಸಿತ್ತು.

ಯಾರೀಕೆ ಸಾರಾ ಅಲಿಖಾನ್?

1995ರ ಆಗಸ್ಟ್ 12ರಂದು ಮುಂಬೈ ನಲ್ಲಿ ಜನಿಸಿದ್ದ ಸಾರಾ ಅಲಿಖಾನ್, ಪಟೌಡಿ ಮತ್ತು ಟ್ಯಾಗೋರ್ ಕುಟುಂಬದ ಸದಸ್ಯೆ…ಈಕೆ ಅಮೃತಾ ಸಿಂಗ್ ಮತ್ತು ಸೈಫ್ ಅಲಿ ಖಾನ್ ಪುತ್ರಿ. ಮನ್ಸೂರ್ ಅಲಿ ಖಾನ್ ಪಟೌಡಿ ಮತ್ತು ಶರ್ಮಿಳಾ ಠಾಗೋರ್ ಮೊಮ್ಮಗಳು. ಕೊಲಂಬಿಯಾ ಯೂನಿರ್ವಸಿಟಿಯಲ್ಲಿ ಪದವಿ ಪಡೆದಿದ್ದ ಈಕೆ 2018ರಲ್ಲಿ ಬಾಲಿವುಡ್ ನಲ್ಲಿ ತೆರೆಕಂಡಿದ್ದ ಕೇದಾರನಾಥ್ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟಿಸಿದ್ದಳು. ಆ ನಂತರ ಸಿಂಬಾ ಚಿತ್ರದಲ್ಲಿ ನಟಿಸಿದ್ದು, ಎರಡೂ ಸಿನಿಮಾಗಳು ಬಾಕ್ಸಾಫೀಸ್ ನಲ್ಲಿ ಹಿಟ್ ಆಗಿದ್ದವು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.