Tamannaah Bhatia: ಒಂದು ಐಟಂ ಸಾಂಗ್ಗೆ 5 ಕೋಟಿ ಸಂಭಾವನೆ ಕೇಳಿದ್ರಾ ಮಿಲ್ಕಿ ಬ್ಯೂಟಿ?
Team Udayavani, May 21, 2023, 10:37 AM IST
ಚೆನ್ನೈ: ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಹಾಡೊಂದಕ್ಕೆ ದೊಡ್ಡಮಟ್ಟದ ಮೊತ್ತವನ್ನು ಅವರು ಕೇಳಿದ್ದಾರೆ ಎನ್ನುವ ಸುದ್ದಿಯೊಂದು ವೈರಲ್ ಆಗಿದೆ.
ಅನಿಲ್ ರವಿಪುಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಾಲಕೃಷ್ಣ ಅವರ 108ನೇ ಸಿನಿಮಾದ ಸ್ಪಷೆಲ್ ನಂಬರ್ ಹಾಡೊಂದರಲ್ಲಿ ನಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಲಿದ್ದಾರೆ ಇದಕ್ಕಾಗಿ ನಟಿ 5 ಕೋಟಿ ರೂ. ಸಂಭಾವನೆ ಕೇಳಿದ್ದಾರೆ. ಈ ವಿಚಾರ ನಿರ್ದೇಶಕರಿಗೆ ತುಂಬಾ ನಿರಾಶೆ ತಂದಿದೆ ಎಂದು ಕೆಲ ವೆಬ್ ಸೈಟ್ ಗಳು ವರದಿ ಮಾಡಿತ್ತು. ಈ ಸುದ್ದಿ ವೈರಲ್ ಆದ ಬೆನ್ನಲ್ಲೇ ನಟಿ ತಮನ್ನಾ ಭಾಟಿಯಾ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, “ಅನಿಲ್ ರವಿಪುಡಿ ಸರ್ ಅವರೊಂದಿಗೆ ಕೆಲಸ ಮಾಡುವುದನ್ನು ನಾನು ಯಾವಾಗಲೂ ಇಷ್ಟಪಡುತ್ತೇನೆ. ನಂದಮೂರಿ ಬಾಲಕೃಷ್ಣ ಸರ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಸಿನಿಮಾದ ಹಾಡಿನ ಬಗ್ಗೆ ಬರುತ್ತಿರುವ ಈ ಆಧಾರರಹಿತ ಸುದ್ದಿ ಲೇಖನಗಳನ್ನು ಓದುವಾಗ ನನಗೆ ತುಂಬಾ ಬೇಸರವಾಗಿದೆ. ದಯವಿಟ್ಟು ಆರೋಪಗಳನ್ನು ಮಾಡುವ ಮೊದಲು ಸಂಶೋಧನೆಯನ್ನು ಮಾಡಿ” ಎಂದು ಬರೆದುಕೊಂಡಿದ್ದಾರೆ.
ಅನಿಲ್ ರವಿಪುಡಿ ಅವರ “ಫನ್ ಅಂಡ್ ಫ್ರಸ್ಟ್ರೇಶನ್ -1,2 ಸಿನಿಮಾದಲ್ಲಿ ತಮನ್ನಾ ನಟಿಸಿದ್ದಾರೆ.
ಸದ್ಯ ತಮನ್ನಾ ಮೆಹರ್ ರಮೇಶ್ ನಿರ್ದೇಶನದ ʼಭೋಲಾ ಶಂಕರ್ʼ ಶೂಟಿಂಗ್ನಲ್ಲಿ ಸ್ವಿಟ್ಜರ್ಲ್ಯಾಂಡ್ನಲ್ಲಿ ಬ್ಯುಸಿಯಾಗಿದ್ದಾರೆ. ಕೀರ್ತಿ ಸುರೇಶ್ ಅವರು ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಇದೇ ವರ್ಷದ ಆಗಸ್ಟ್ 11 ರಂದು ರಿಲೀಸ್ ಆಗಲಿದೆ.
I have always enjoyed working with @AnilRavipudi sir. I have huge respect for both him and Nandamuri Balakrishna sir. So reading these baseless news articles about me and a song in their new film, is very upsetting. Please do your research before you make baseless allegations.
— Tamannaah Bhatia (@tamannaahspeaks) May 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು