ಸುಶಾಂತ್ ಸಿಂಗ್ ಕೊನೆಯ ಚಿತ್ರ ‘ದಿಲ್ ಬೆಚರಾ’ ಟ್ರೈಲರ್ ಬಿಡುಗಡೆ ಡೇಟ್ ಫಿಕ್ಸ್
Team Udayavani, Jul 5, 2020, 5:03 PM IST
ನವದೆಹಲಿ : ನಟ ಸುಶಾಂತ್ ಸಿಂಗ್ ರಜ್ ಪೂತ್ ಅವರ ಕೊನೆಯ ಚಿತ್ರ ‘ದಿಲ್ ಬೆಚರಾ’ ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಚಿತ್ರದ ನಿರ್ದೇಶಕ ಮುಕೇಶ್ ಚಬ್ರಾ ಸಾಮಾಜಿಕ ಜಾಲತಾಣದಲ್ಲಿ ಹೊಸ ಪೋಸ್ಟರ್ ನೊಂದಿಗೆ ಹಂಚಿಕೊಂಡಿದ್ದಾರೆ.
ದಿಲ್ ಬೆಚರಾ ಚಿತ್ರ ನಿಗದಿಯಂತೆ ಮೇ ತಿಂಗಳಿನಲ್ಲಿ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಬೇಕಿತ್ತು. ಕೋವಿಡ್ ಭೀತಿಯಿಂದ ಚಿತ್ರವನ್ನು ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಸುಶಾಂತ್ ಸಿಂಗ್ ಅನಿರೀಕ್ಷಿತ ಸಾವಿನಿಂದ ನೊಂದಿರುವ ನೂರಾರು ಅಭಿಮಾನಿಗಳು ಅವರ ಕೊನೆಯ ಚಿತ್ರವನ್ನು ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲು ಆಗ್ರಹಿಸಿದ್ದಾರೆ. ಚಿತ್ರದ ನಿರ್ದೇಶಕ ಮುಕೇಶ್ ಇಂದು ತಮ್ಮ ಟ್ವಿಟರ್ ನಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಹೊಸ ಪೋಸ್ಟರ್ ಒಂದನ್ನು ಹಾಕಿ ಘೋಷಿಸಿದ್ದಾರೆ. ಸೋಮವಾರ ಜುಲೈ 6 ರಂದು ದಿಲ್ ಬೆಚರಾ ಚಿತ್ರದ ಆಫಿಶೀಯಲ್ ಟ್ರೈಲರ್ ಬಿಡುಗಡೆ ಆಗಲಿದೆ.
ದಿಲ್ ಬೆಚರಾ ಮುಕೇಶ್ ಅವರ ಚೊಚ್ಚಲ ಚಿತ್ರ. ಚಿತ್ರದಲ್ಲಿ ಸುಶಾಂತ್ ಸಿಂಗ್ ಜತೆಗೆ ಮೊದಲ ಬಾರಿ ಬಾಲಿವುಡ್ ಲೋಕಕ್ಕೆ ಕಾಲಿಟ್ಟಿರುವ ಸಂಜನಾ ಸಂಘಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ವಿಶೇಷ ಪಾತ್ರದಲ್ಲಿ ನಟ ಸೈಫ್ ಆಲಿ ಖಾನ್ ಕೂಡ ಬಣ್ಣ ಹಚ್ಚಿದ್ದಾರೆ.
ದಿಲ್ ಬೆಚರಾ ಚಿತ್ರ ಕಥೆ ಮೂಲತಃ ಜಾನ್ ಗ್ರೀನ್ ಅವರ ಹೆಚ್ಚು ಮಾರಾಟವಾದ ಕಾದಂಬರಿ ‘ದಿ ಫಾಲ್ಟ್ ಇನ್ ಅವರ್ ಸ್ಟಾರ್ಸ್’ ದಿಂದ ಆಧಾರಿತವಾಗಿದೆ. ಚಿತ್ರ ಇದೇ ತಿಂಗಳ ಜುಲೈ 24 ರಂದು ಡಿಸ್ನಿ – ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದ್ದು. ಸುಶಾಂತ್ ಸಿಂಗ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ಸಿನಿಮಾವನ್ನು ಉಚಿತವಾಗಿ ವೀಕ್ಷಿಸುವ ಅವಕಾಶ ಮಾಡಿಕೊಟ್ಟಿದೆ ಚಿತ್ರ ತಂಡ.
ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈಯ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇವರ ಅಕಾಲಿಕ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.
Only love ❤️ pic.twitter.com/xkbhMpn36h
— Mukesh Chhabra CSA (@CastingChhabra) July 5, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ