‘ಕಮ್ಮ ರಾಜ್ಯದಲ್ಲಿ ಕಡಪ ರೆಡ್ಡಿಗಳು’ ; ಏನಿದು ರಾಮ್ ಗೋಪಾಲ್ ವರ್ಮಾ ಹೊಸ ಚಿತ್ರದ ವಿವಾದ?


Team Udayavani, Dec 3, 2019, 9:22 PM IST

Kamma-Rajya-3-12

ಹೈದರಾಬಾದ್: ರಾಜಕೀಯ ಹಿನ್ನಲೆ ಮತ್ತು ಕ್ರೈಂ ಕಥೆ ಆಧಾರಿತ ಚಿತ್ರಗಳನ್ನು ಹಸಿಬಿಸಿಯಾಗಿ ಪ್ರೇಕ್ಷಕರಿಗೆ ನೀಡುವಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರದ್ದು ಎತ್ತಿದ ಕೈ. ಮೊನ್ನೆ ಮೊನ್ನೆಯಷ್ಟೇ ವರ್ಮಾ ಅವರು ತೆಲುಗುದೇಶಂ ಪಕ್ಷದ ಸ್ಥಾಪಕ ಮತ್ತು ಜನಪ್ರಿಯ ನಟ ಆಂಧ್ರಪ್ರದೇಶದ ಮಾಜೀ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ಕುರಿತಾದ ‘ಲಕ್ಷ್ಮೀಸ್ ಎನ್.ಟಿ.ಆರ್.’ ಚಿತ್ರವನ್ನು ನಿರ್ದೇಶಿಸಿದ್ದರು. ಇದು ಆಂಧ್ರ ರಾಜಕೀಯದಲ್ಲಿ ಮತ್ತು ತೆಲುಗು ದೇಶಂ ಪಕ್ಷದಲ್ಲಿ ತಲ್ಲಣ ಮೂಡಿಸಿತ್ತು.

ಇದೀಗ ವರ್ಮಾ ಅವರು ಆಂಧ್ರದ ಜಾತಿ ರಾಜಕೀಯಕ್ಕೇ ನೇರವಾಗಿ ಕೈ ಹಾಕಿದ್ದಾರೆ. ಕರ್ನಾಟಕದಲ್ಲಿ ಲಿಂಗಾಯಿತರು ಮತ್ತು ಒಕ್ಕಲಿಗರು ಹೇಗೆ ಪ್ರಬಲ ಸಮುದಾಯವಾಗಿ ಗುರುತಿಸಿಕೊಂಡಿದ್ದಾರೆಯೋ ಅದೇ ರೀತಿಯಲ್ಲಿ ನಮ್ಮ ನೆರೆಯ ಸೀಮಾಂಧ್ರದಲ್ಲಿ ಕಮ್ಮ ಮತ್ತು ರೆಡ್ಡಿ ಸುಮದಾಯದ ಜನರು ಬಹುಸಂಖ್ಯೆಯಲ್ಲಿದ್ದು ಅಲ್ಲಿನ ರಾಜಕೀಯ ಚಿತ್ರಣವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಇದೀಗ ರಾಮ್ ಗೋಪಾಲ್ ವರ್ಮಾ ಅವರು ‘ಕಮ್ಮ ರಾಜ್ಯಂ ಲೋ ಕಡಪ ರೆಡ್ಲು’ (ಕಮ್ಮ ರಾಜ್ಯದಲ್ಲಿ ಕಡಪ ರೆಡ್ಡಿಗಳು) ಎಂಬ ಹೆಸರಿನ ಚಿತ್ರವನ್ನು ಸಿದ್ಧಪಡಿಸಿ ಬಿಡುಗಡೆಗೆ ತುದಿಗಾಲಲ್ಲಿ ನಿಂತಿದ್ದಾರೆ. ಎಲ್ಲಾ ಸರಿಯಾಗಿದ್ದಿದ್ದರೆ ವರ್ಮಾ ಅವರ ಈ ಚಿತ್ರ ನವಂಬರ್ 29ಕ್ಕೇ ತೆರೆ ಕಾಣಬೇಕಿತ್ತು. ಆದರೆ ಈ ಚಿತ್ರದ ಟೈಟಲ್ ಕುರಿತಾಗಿ ಆಂಧ್ರದ ರಾಜಕೀಯ ಪಕ್ಷಗಳು ತಕರಾರು ಎತ್ತಿರುವುದರಿಂದ ಸದ್ಯಕ್ಕೆ ಚಿತ್ರದ ಬಿಡುಗಡೆ ದಿನಾಂಕ ಮುಂದೆ ಹೋಗಿದೆ.

ಈ ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಬೇಕೆಂದು ತೆಲಂಗಾಣ ಹೈಕೋರ್ಟಿನಲ್ಲಿ ದೂರು ದಾಖಲುಗೊಂಡಿರುವುದರಿಂದ ಈ ಚಿತ್ರವನ್ನು ಬಿಡುಗಡೆಗೊಳಿಸದಿರುವ ಸಂಕಟದಲ್ಲಿ ವರ್ಮಾ ಸಿಲುಕಿದ್ದಾರೆ. ಈ ಎಲ್ಲಾ ವಿವಾದಗಳ ಹಿನ್ನಲೆಯಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇದೀಗ ತಮ್ಮ ಚಿತ್ರದ ಶೀರ್ಷಿಕೆಯನ್ನು ‘ಅಮ್ಮ ರಾಜ್ಯಂ ಲೋ ಕಡಪ ರೆಡ್ಲು’ ಎಂದು ಬದಲಾಯಿಸಲು ನಿರ್ಧರಿಸಿದ್ದಾರೆ. ಆದರೆ ಇದಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಇನ್ನಷ್ಟೇ ಒಪ್ಪಿಗೆ ನೀಡಬೇಕಾಗಿದೆ.

ಈ ಚಿತ್ರದಲ್ಲಿ ಬರುವ ಎರಡು ಪ್ರಮುಖ ಪಾತ್ರಗಳು ಸೀಮಾಂಧ್ರ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮಾಜೀ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವ್ಯಕ್ತಿತ್ವವನ್ನು ಹೋಲುತ್ತವೆ. ಹಾಗಾಗಿ ಈ ಚಿತ್ರದ ಟೈಟಲ್ ಗೆ ಇದೀಗ ಆಕ್ಷೇಪ ವ್ಯಕ್ತವಾಗಿದೆ. ಇದು ನೇರವಾಗಿ ಎರಡು ಸಮದಾಯಗಳನ್ನು ಗುರಿಯಾಗಿಸಿರುವುದರಿಂದ ಚಿತ್ರದ ಟೈಟಲ್ ಗೆ ಅನುಮತಿ ನೀಡಬಾರದು ಎಂದು ವೈ.ಎಸ್.ಆರ್.ಸಿ.ಪಿ. ಪಕ್ಷದ ಹಿರಿಯ ನಾಯಕ ಸಜ್ಜಲ ರಾಮಕೃಷ್ಣ ರೆಡ್ಡಿ ಅವರು ಪ್ರಾದೇಶಿಕ ಸೆನ್ಸಾರ್ ಮಂಡಳಿಗೆ ಪತ್ರವನ್ನು ಬರೆದಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.