ʼʼಒಬ್ಬರೇ ಮನೆಯಿಂದ ಹೊರಬರಬೇಡಿ..” ʼದಿ ಕೇರಳ ಸ್ಟೋರಿʼ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ
Team Udayavani, May 9, 2023, 10:23 AM IST
ಮುಂಬಯಿ: ದಿನಕಳೆದಂತೆ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗೆಗಿನ ಚರ್ಚೆ ಹೆಚ್ಚಾಗುತ್ತಿದೆ. ಒಂದೆಡೆ ಸಿನಿಮಾದ ಬಗ್ಗೆ ಪಾಸಿಟಿವ್ ಮಾತುಗಳು ಕೇಳಿ ಬಂದರೆ, ಇನ್ನೊಂದೆಡೆ ಸಿನಿಮಾದ ಬಗ್ಗೆ ಮೊದಲೇ ಕೇಳಿ ಬಂದ ನೆಗೆಟಿವ್ ಟಾಕ್ಸ್ ಇನ್ನಷ್ಟು ಹೆಚ್ಚಾಗಿದೆ.
ಈ ಎರಡರ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಕಾಣುವತ್ತ ಮುಂದುವರೆಯುತ್ತಿದೆ. ʼದಿ ಕೇರಳ ಸ್ಟೋರಿʼ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಗೆ ಅಪರಿಚಿತ ನಂಬರ್ ನಿಂದ ಬೆದರಿಕೆ ಸಂದೇಶ ಬಂದಿದೆ ಎಂದು ನಿರ್ದೇಶಕ ಸುದೀಪ್ತೋ ಸೇನ್ ಹೇಳಿದ್ದಾರೆ.
“ನೀವು ಒಳ್ಳೆಯದನ್ನು ಮಾಡಲಿಲ್ಲ,ಮನೆಯಿಂದ ಒಂಟಿಯಾಗಿ ಹೊರಬರಬೇಡಿ.. ಎಂದು ವ್ಯಕ್ತಿಯೊಬ್ಬ ಅಪರಿಚಿತ ನಂಬರ್ ನಿಂದ ತಮ್ಮ ತಂಡದ ಸದಸ್ಯನಿಗೆ ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರಿಗೆ ಸುದೀಪ್ತೋ ಸೇನ್ ಹೇಳಿದ್ದಾರೆ.
ಸದ್ಯ ಸಿನಿಮಾ ತಂಡದ ಸದಸ್ಯನಿಗೆ ಪೊಲೀಸರು ಭದ್ರತೆ ನೀಡಿದ್ದು, ಈ ಬಗ್ಗೆ ಯಾವುದೇ ಎಫ್ ಐಆರ್ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.
ಕೇರಳದ ಯುವತಿಯೊಬ್ಬಳು ಮದುವೆಯ ನಂತರ ಇಸ್ಲಾಂಗೆ ಮತಾಂತರಗೊಂಡ ನಂತರ ಐಸಿಸ್ ಶಿಬಿರಗಳಿಗೆ ಕಳ್ಳಸಾಗಣೆಯಾಗುವ ಕಥೆಯನ್ನು ಚಿತ್ರ ಹೇಳುತ್ತದೆ. ಈ ರೀತಿ 32 ಸಾವಿರ ಹಿಂದೂ ಮಹಿಳೆಯರು ಮತಾಂತರಗೊಂಡು ಐಸಿಸ್ ಸೇರಿದ್ದಾರೆ ಎಂದು ಚಿತ್ರ ತಂಡ ತನ್ನ ಟೀಸರ್ ನಲ್ಲಿ ಹೇಳಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ಇದು 32 ಸಾವಿರ ಬದಲಿಗೆ 3 ಮಹಿಳೆಯರು ಎಂದು ಚಿತ್ರತಂಡ ಬದಲು ಮಾಡಿತ್ತು.
ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ